ಎಚ್ಚರಿಕೆ ನಡುವೆಯೂ ಮುಂದುವರಿದ ವಾಗ್ಧಾಳಿ


Team Udayavani, Mar 23, 2019, 1:56 AM IST

1-nn.jpg

ಶ್ರೀರಂಗಪಟ್ಟಣ: “ಚಿತ್ರರಂಗಕ್ಕೆ ಬರುವ ಮುನ್ನ ದರ್ಶನ್‌ ಎಲ್ಲೆಲ್ಲಿ ಏನೇನು ಮಾಡ್ತಿದ್ದ, ಯಾರ್ಯಾರಿಗೆ ಟೀ ತಂದು ಕೊಡ್ತಿದ್ದ, ಅವನ ಜೇಬಲ್ಲಿ ದುಡ್ಡಿಲ್ಲದೆ ದನದ ಚಾಕಣ ತಿನ್ನಲು ಬರ್ತಿದ್ದ ‘ ಎಂಬ ಜೆಡಿಎಸ್‌ ಮುಖಂಡರ ವಾಗ್ಧಾಳಿ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. 

ಲೋಕಸಭಾಚುನಾವಣಾ ಹಿನ್ನೆ ಲೆಯಲ್ಲಿ ಪಟ್ಟಣ ದಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ಸಂತೋಷ್‌, “ದರ್ಶನ್‌ ಮತ್ತು ಯಶ್‌ ಮಂಡ್ಯದಲ್ಲಿ ರಾಜಕಾರಣ ಮಾಡಲು ಬಂದಿದ್ದಾರೆ. ಅವರು ಇಲ್ಲೇ ನಿಂತು ನಾವು ತಪ್ಪು ಮಾಡ್ತೀವಿ ಅಂತ ಧಮಕಿ ಹಾಕ್ತಾರಲ್ಲ. ಇದು ಸರೀನಾ’ ಎಂದು ಪ್ರಶ್ನಿಸಿದರು.

ಮುಂದುವರಿದ ಟೀಕೆ: ಶಾಸಕ ಕೆ.ಸಿ.ನಾರಾಯಣಗೌಡ, ರವೀಂದ್ರ ಶ್ರೀಕಂಠಯ್ಯ ಬಳಿಕ ಇದೀಗ ಎಂ.ಸಂತೋಷ್‌ ಚಿತ್ರನಟರ ವಿರುದ್ಧ  ವಾಗ್ಧಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯಾರ ವಿರುದ್ಧವೂ ವೈಯಕ್ತಿಕ ಟೀಕೆಗಳನ್ನು ಮಾಡದಂತೆ ಕಟ್ಟಾಜ್ಞೆ ವಿಧಿಸಿದ್ದರ ನಡುವೆಯೂ ಜೆಡಿಎಸ್‌ ನಾಯಕರು ಸುಮಲತಾ ಬೆಂಬಲಕ್ಕೆ ನಿಂತಿರುವ ನಟರನ್ನುಗುರಿಯಾಗಿಸಿಕೊಂಡು ಟೀಕಾಪ್ರಹಾರ ಮುಂದುವರಿಸಿದ್ದಾರೆ.

ಅಭಿಮಾನಿಗಳ ಆಕ್ರೋಶ: ಎಂ.ಸಂತೋಷ್‌ ನೀಡಿರುವ ಹೇಳಿಕೆಗೆ ದರ್ಶನ್‌ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್‌ ಟೀ ಸಪ್ಲೆ„ ಮಾಡಿದ್ದು ಅಪರಾಧವಲ್ಲ. ಅವರಜೀವನೋಪಾಯಕ್ಕಾಗಿ ಆ ವೃತ್ತಿ ಮಾಡಿದ್ದಾರೆ. ಈ ಹೇಳಿಕೆ ಬಡತನವನ್ನು ಅವಮಾನಿಸಿದಂತೆ ಎಂದು ಆರೋಪಿಸಿದ್ದಾರೆ

ಶಾಸಕ ನಾರಾಯಣಗೌಡ ವಿರುದ್ಧ  ಪ್ರಕರಣ ದಾಖಲು

ಕೆ.ಆರ್‌.ಪೇಟೆ: “ಚಿತ್ರನಟರು ಸುಮಲತಾ ಪರ ಚುನಾವಣಾ ಪ್ರಚಾರ ಮಾಡಬಾರದು’ ಎಂದು ಬೆದರಿಕೆ ಹಾಕಿದ್ದ ಶಾಸಕ ನಾರಾಯಣಗೌಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಶಾಸಕ ನಾರಾಯಣಗೌಡ, “ಸ್ಟಾರ್‌ ನಟರು ಸುಮಲತಾ ಪರ ಪ್ರಚಾರ ಮಾಡಿದರೆ ಸರ್ಕಾರ ನಟರ ಅಕ್ರಮ ಆಸ್ತಿ, ಇತರೆ ಚಟುವಟಿಕೆಗಳ ವಿರುದ್ಧ  ತನಿಖೆ ನಡೆಸುತ್ತದೆ’ ಎಂದು ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ರಾಜ್ಯಾದ್ಯಂತ ಟೀಕೆಗಳು ಕೇಳಿ ಬಂದಿತ್ತು. ಇದಕ್ಕೆ ಶಾಸಕರು ಕ್ಷಮಾಪಣೆ ಕೋರಿದ್ದರು. ಆದರೆ, ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಚುನಾವಣಾ
ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.