ಗುಂಜಾ ನರಸಿಂಹಸ್ವಾಮಿ ರಥೋತ್ಸವ


Team Udayavani, Mar 23, 2019, 7:37 AM IST

m5-gunja.jpg

ತಿ.ನರಸೀಪುರ: ಧೂಪದ ಘಮಲು, ಹಣ್ಣು ಜವನಗಳ ಸುರಿಮಳೆ, ನಗಾರಿಗಳ ಭೋರ್ಗರೆತ ಶಬ್ದಗಳ ನಡುವೆ ಪುರಾತನ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವವು ಪಟ್ಟಣದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಹರ್ಷೋದ್ಘಾರ: ಅಲಂಕೃತ ರಥದಲ್ಲಿ ವೀರಾಜಮಾನರಾಗಿದ್ದ ಮಹಾಲಕ್ಷ್ಮೀ ಸಮೇತ ಗುಂಜಾ ನರಸಿಂಹಸ್ವಾಮಿ ಉತ್ಸವ ಮೂರ್ತಿಗಳನ್ನು ಕಂಡು ಪುಳಕಿತರಾದ ಭಕ್ತರ ಹರ್ಷೋದ್ಘಾರಗಳ ನಡುವೆ ವಾಲಿ ವಾಲಾಡಿ ಸಾಗಿ ಬಂದ ರಥೋತ್ಸವ ವೈಭವವನ್ನು ನೆರೆದಿದ್ದ ಜನರು ಕಣ್ತುಂಬಿಕೊಂಡು ಹಣ್ಣು ಜವನವನ್ನು ಎಸೆದು ಧನ್ಯತೆ ಮೆರೆದರು.

ಯುವಕರ ಸಂಭ್ರಮ: ರಥೋತ್ಸವದಿಂದಾಗಿ ಪಟ್ಟಣ ಸೇರಿದಂತೆ ಗುಂಜಾ ನರಸಿಂಹಸ್ವಾಮಿ ದೇವಾಲಯ ಆವರಣ ಜನಸಾಗರದಿಂದ ಕಳೆಗಟ್ಟಿತ್ತು. ಕುಣಿದು ಕುಪ್ಪಳಿಸಿದ ಯುವಕರು ಕೂಡ ಜಾತ್ರೆಗೆ ರಂಗನ್ನು ನೀಡಿದರು. ವಿಶ್ವಕರ್ಮ ಬೀದಿ ಮಾರ್ಗವಾಗಿ ಸಾಗಿದ ರಥ ಯಾವುದೇ ಅಡಚಣೆಯಿಲ್ಲದೆ ಚಿಕ್ಕಅಂಗಡಿ ಬೀದಿಯಲ್ಲಿನ ಸ್ವಸ್ಥಾನವನ್ನು ತಲುಪಿತು.

ಮಂಟಪೋತ್ಸವ: ಪಟ್ಟಣದ ರಥದ ಬೀದಿಗಳಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆಯ ಮಂಟಪೋತ್ಸವ ನಡೆಯಿತು. ಮಂಟಪೋತ್ಸವ ತರುವಾಯ ಮಧ್ಯಾಹ್ನ 12.30 ರಿಂದ ಹಸ್ತ ನಕ್ಷತ್ರದಲ್ಲಿ ಸಲ್ಲುವ ಶುಭ ಮೀನ ಕೃಷ್ಣ ದ್ವಿತೀಯ ಲಗ್ನದಲ್ಲಿ ಶೃಂಗಾರಗೊಂಡಿದ್ದ ರಥದ ಬಳಿಗೆ ಉತ್ಸವ ಮೂರ್ತಿಗಳನ್ನು ಹೊತ್ತು ತಂದು ವೇದ ಮಂತ್ರಗಳನ್ನು ಪಠಿಸಿ ಸುತ್ತಲೂ ಮೂರು ಪ್ರದಕ್ಷಿಣೆ ಹಾಕಿಸಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಪ್ರದಕ್ಷಿಣೆ: ವ್ಯಾಸರಾಜಪುರ ಯಜಮಾನರು ಆಲಗೂಡಿಗೆ ತೆರಳಿ ಅಲ್ಲಿನ ಯಜಮಾನರನ್ನು ಕರೆತಂದು ಪಟ್ಟಣದ ಯಜಮಾನರ ಜೊತೆಗೂಡಿ ಮಹಾಮಂಗಳಾರತಿ ನೆರವೇರಿಸಿ ಪ್ರದಕ್ಷಿಣೆ ಹಾಕಿದರು. ಉತ್ಸವ ಮೂರ್ತಿಗಳಿಗೆ ಮಹಾಮಂಗಳಾರತಿ ಮಾಡಿದ ನಂತರ ಬ್ರಹ್ಮ ರಥೋತ್ಸವ ವಿಧ್ಯಕ್ತವಾಗಿ ಆರಂಭಗೊಂಡಿತು. 

ಜಾತ್ರೋತ್ಸವ ಪ್ರಯುಕ್ತ ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯ ಹಾಗೂ ಅಭಿಷೇಕ ಉತ್ಸವಗಳು ಸಾಂಗವಾಗಿ ನೆರವೇರಿದವು. ಬಿಳಿಗಿರಿ ರಂಗಸ್ವಾಮಿ ಬೆಟ್ಟದ ಆಗಮಿಕ ನಾಗರಾಜ ಭಟ್ಟರು, ದೇವಾಲಯದ ಪ್ರಧಾನ ಅರ್ಚಕ ಸಂಪತ್‌ ಕುಮಾರ್‌ ಭಟ್ಟರು ಹಾಗೂ ಅರ್ಚಕ ವೆಂಕಟೇಶ್‌ ನೇತೃತ್ವದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆದವು.

ಪ್ರಸಾದ: ಹರಕೆ ಹೊತ್ತಿದ್ದ ಭಕ್ತರು ಪಾನಕ, ಮಜ್ಜಿಗೆ ಹಾಗೂ ಉಪಾಹಾರ ವಿತರಿಸಿದರು. ಗುಂಜಾ ನರಸಿಂಹಸ್ವಾಮಿ ರಥೋತ್ಸವ ಹಬ್ಬದ ಸಂಭ್ರಮವನ್ನು ತಂದಿತ್ತು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಡಿ.ನಾಗೇಶ, ಕಂತೆಕಟ್ಟೆ ಪಾರುಪತ್ತೇಗಾರ .ನರಸಿಂಹನ್‌, ಸಿ.ರಮೇಶ್‌, ಯಜಮಾನರಾದ ಬಸವಣ್ಣ, ಎಂ.ಮಹದೇವಪ್ಪ, ಭೈರನಾಯಕ, ಎನ್‌.ಮಹದೇವಸ್ವಾಮಿ, ಪುಳ್ಳಾರಿ ಆರ್‌.ಮಹದೇವ, ರಾಜಣ್ಣ, ಪುರಸಭಾ ಸದಸ್ಯರಾದ ಎಸ್‌.ಕೆ.ಕಿರಣ, ಟಿ.ಎಂ.ನಂಜುಂಡಸ್ವಾಮಿ, ಬಾದಾಮಿ ಮಂಜು, ಪಿ.ಪುಟ್ಟರಾಜುಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.