2,500 ಗ್ರಾಮ ಪಂಚಾಯತ್‌ ನೌಕರರ ಕೆಲಸಕ್ಕೆ ಕತ್ತರಿ

ಪೂರ್ವಾನುಮತಿ ಪಡೆಯದೆ ಕೈಗೊಂಡ ನೌಕರರ ನೇಮಕ ರದ್ದು  ; ರಾಜ್ಯ ಸರಕಾರದಿಂದ ಹೊರಬಿದ್ದ ಆದೇಶ

Team Udayavani, Mar 24, 2019, 6:30 AM IST

96

ಮಂಗಳೂರು: ಕೆಲವು ಗ್ರಾಮ ಪಂಚಾಯತ್‌ಗಳು ತಮ್ಮ ಸಾಮಾನ್ಯ ಸಭೆ ಹಾಗೂ ವಿಶೇಷ ಸಭೆ ನಿರ್ಣಯಗಳ ಮೂಲಕ ಮಾಡಿಕೊಳ್ಳಲಾಗಿರುವ ವಿವಿಧ ನೌಕರರ ನೇಮಕಾತಿಯನ್ನು ರದ್ದುಪಡಿಸುವಂತೆ ರಾಜ್ಯ ಸರಕಾರ ಆದೇಶಿಸಿದೆ.

ಇದಷ್ಟೇ ಅಲ್ಲ, ಇಂಥ ನೇಮಕಕ್ಕೆ ಅವಕಾಶ ಕೊಟ್ಟ ಪಿಡಿಒ, ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ಕ್ರಮ ಜರಗಿಸುವಂತೆಯೂ ನಿರ್ದೇಶಿಸಿದೆ. ಇದರಿಂದ ಜಿ.ಪಂ. ಪೂರ್ವಾನುಮತಿ ಪಡೆಯದೆ ನೇಮಕಗೊಂಡ ರಾಜ್ಯದ ಸುಮಾರು 2,500 ನೌಕರರು ಕೆಲಸ ಕಳೆದುಕೊಳ್ಳುವಂತಾಗಿದೆ.

ಗ್ರಾ.ಪಂ.ಗಳು ಯಾವುದೇ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿ 2018ರ ಮಾ.12ರಂದು ಸರಕಾರ ಆದೇಶಿಸಿತ್ತು. ಒಂದು ವೇಳೆ ಬಿಲ್‌ ಕಲೆಕ್ಟರ್‌, ಕ್ಲರ್ಕ್‌/ಡಾಟಾ ಎಂಟ್ರಿ ಆಪರೇಟರ್‌ ಮತ್ತು ಅಟೆಂಡರ್‌ ಹುದ್ದೆಗಳು ನಿವೃತ್ತಿ, ಮುಂಬಡ್ತಿ ಮತ್ತು ಇನ್ನಿತರ ಕಾರಣಗಳಿಂದ ಖಾಲಿಯಾದಲ್ಲಿ ನೇಮಿಸಿಕೊಳ್ಳಲು ಸೂಕ್ತ ಕಾರಣದೊಂದಿಗೆ ಜಿ.ಪಂ. ಸಿಇಒ ಪೂರ್ವಾನುಮೋದನೆ ಪಡೆಯಬೇಕು.

ಸಾಮಾನ್ಯವಾಗಿ ಗ್ರಾ.ಪಂ.ಗಳಲ್ಲಿ ಕ್ಲರ್ಕ್‌, ಬಿಲ್‌ ಕಲೆಕ್ಟರ್‌, ಅಟೆಂಡರ್‌, ಸ್ವತ್ಛತಾಗಾರ, ಪಂಪ್‌ ಚಾಲಕರು, ಪಂಪ್‌ ನಿರ್ವಾಹಕ ಹುದ್ದೆಗಳಿವೆ. ಇವುಗಳಿಗೆ ನೇಮಕ ಮಾಡಿಕೊಳ್ಳಬೇಕಿದ್ದರೆ ಸೂಕ್ತ ಕಾರಣಗಳೊಂದಿಗೆ ಸಂಬಂಧಪಟ್ಟ ಜಿ.ಪಂ. ಸಿಇಒ ಅವರನ್ನು ಕೋರಬೇಕು.

ಇಲ್ಲಿ ಪೂರ್ವಾನುಮೋದನೆ ಪಡೆದ ಬಳಿಕ ಪತ್ರಿಕಾ ಪ್ರಕಟನೆ ಸಹಿತ ವಿವಿಧ ನಿಯಮಾವಳಿ ಅನುಸರಿಸಿ ಆಯಾ ಗ್ರಾ.ಪಂ.ನವರು ಹುದ್ದೆ ಭರ್ತಿಗೆ ಆಯ್ಕೆ ನಡೆಸಬಹುದು. ಇದನ್ನು ಜಿ.ಪಂ. ಗಮನಕ್ಕೆ ತರಬೇಕು. ಆದರೆ ಕೆಲವು ಗ್ರಾ.ಪಂ.ಗಳಲ್ಲಿ ಈ ನಿಯಮಾವಳಿ ಪಾಲಿಸದೆ ಗ್ರಾ.ಪಂ.ನಲ್ಲಿಯೇ ನೌಕರರ ನೇಮ ಕಾತಿಗೆ ನಿರ್ಧರಿಸಲಾಗುತ್ತದೆ. ಇದು ಕಾನೂನುಬಾಹಿರ ಎಂದು ಸರಕಾರ ಸ್ಪಷ್ಟಪಡಿಸಿದೆ.

ಈ ನಿರ್ದೇಶನಗಳನ್ನು ಉಲ್ಲಂ ಸಿ ಅನಧಿಕೃತ ನೇಮಕ ಮಾಡಿಕೊಳ್ಳುವ ಗ್ರಾ.ಪಂ. ಪಿಡಿಒ ವಿರುದ್ಧ ಕರ್ನಾಟಕ ಸಿವಿಲ್‌ ಸೇವಾ (ಸಿಸಿಎ) ನಿಯಮಗಳು 1957ರನ್ವಯ ಹಾಗೂ ಭಾಗಿಯಾದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂ.ರಾಜ್‌ ಅಧಿನಿಯಮದ ಅನ್ವಯ ಕ್ರಮ ಜರಗಿಸಲಾಗುತ್ತದೆ. ಯಾವುದೇ ಹಂತದಲ್ಲಿ ಲೋಪವಾದಲ್ಲಿ ಪಿಡಿಒ ಮತ್ತು ಸಂಬಂಧಪಟ್ಟ ತಾ.ಪಂ. ಸಿಇಒಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸೂಚಿಸಿದೆ.

ಕೆಲವು ಗ್ರಾ.ಪಂ.ನಲ್ಲಿ  ಜಿ.ಪಂ. ಗಮನಕ್ಕೆ ಬಾರದೆ, ನಿಯಮ ಉಲ್ಲಂಘಿಸಿ ನೇಮಕಾತಿ ನಡೆಸಲಾಗುತ್ತಿದೆ. ದ.ಕ. ಜಿಲ್ಲೆಯ 2 ಗ್ರಾ.ಪಂ.ಗಳಲ್ಲಿ ಇಂತಹ ಪ್ರಕರಣ ಗಳು ನಡೆದಿದ್ದು, ಸಂಬಂಧಪಟ್ಟ ಗ್ರಾ.ಪಂ. ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಪತ್ರ ಬರೆಯಲಾಗಿದೆ.
– ಡಾ| ಆರ್‌. ಸೆಲ್ವಮಣಿ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸಿಇಒ

ಯಾವುದೇ ನೌಕರರನ್ನು ಕೆಲಸದಿಂದ ತೆಗೆಯಬಾರದು. ಅವರಿಗೆ ಉದ್ಯೋಗ ಭದ್ರತೆಯನ್ನು ನೀಡಬೇಕು. ಸರಕಾರದ ನಿಯಮ ಗೊತ್ತಿದ್ದೂ ಅದನ್ನು ಉಲ್ಲಂಘಿಸಿ ನೇಮಕ ನಿರ್ಣಯ ಕೈಗೊಂಡ ವರ ವಿರುದ್ಧ  ಕ್ರಮ ಕೈಗೊಳ್ಳಬೇಕು.
– ದೇವೀಪ್ರಸಾದ್‌ ಬೊಳ್ಮ
ಕರ್ನಾಟಕ ರಾಜ್ಯ ಗ್ರಾ.ಪಂ. ಶ್ರೇಯೋಭಿವೃದ್ಧಿ ಸಮಿತಿ ಅಧ್ಯಕ್ಷ

– ದಿನೇಶ್‌ ಇರಾ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.