ಈ ಮೀಸಲು ಕ್ಷೇತ್ರದಲ್ಲಿ ಮೂವರು ಸಂಸದರು !

ಇಲ್ಲಿ ಮುನ್ನಡೆ ಪಡೆದಷ್ಟು ಗೆಲುವು ಹತ್ತಿರ! ವಿಶಿಷ್ಟವಾದ ಕ್ಷೇತ್ರವೆಂಬ ಖ್ಯಾತಿ

Team Udayavani, Mar 24, 2019, 12:19 PM IST

sullia

ಸಾಂದರ್ಭಿಕ ಚಿತ್ರ

ಸುಳ್ಯ: ಇದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ತುತ್ತತುದಿಯಲ್ಲಿರುವ ಜಿಲ್ಲೆಯ ಏಕೈಕ ಮೀಸಲು ವಿಧಾನಸಭಾ ಕ್ಷೇತ್ರ. ಲೋಕಸಭಾ ಚುನಾವಣೆಯ ಮತ ಎಣಿಕೆ ಸಂದರ್ಭ ಈ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮುನ್ನಡೆ ಕಾಯ್ದುಕೊಳ್ಳುವ ಅಭ್ಯರ್ಥಿ ಗೆಲುವಿಗೆ ನಿಕಟರಾಗಿರುತ್ತಾರೆ!

ಕಳೆದ ಎರಡು ಮತ್ತು ಅದಕ್ಕೂ ಹಿಂದಿನ ಲೋಕಸಭಾ ಚುನಾವಣೆ ಫಲಿತಾಂಶಗಳು ಇದನ್ನು ಪುಷ್ಟೀಕರಿಸುತ್ತವೆ. 2009 ಮತ್ತು 2014ರ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಅವರಿಗೆ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಮುನ್ನಡೆ ನೀಡಿದ ಮತ್ತು ಪ್ರಮುಖ ಎದುರಾಳಿ ಕಾಂಗ್ರೆಸ್‌ ಸಹಿತ ಎಲ್ಲ ಅಭ್ಯರ್ಥಿಗಳು ಅತಿ ಹೆಚ್ಚು ಅಂತರದಿಂದ ಹಿನ್ನಡೆ ಅನುಭವಿಸಿದ ಕ್ಷೇತ್ರ ಸುಳ್ಯ.

30 ವರ್ಷಗಳಿಂದ ಬಿಜೆಪಿಯ ಭದ್ರ ಕೋಟೆ ಎಂದೇ ಇದು ಜನಜನಿತ. 2013ರ ಚುನಾವಣೆಯಲ್ಲಿ ಜಿಲ್ಲೆಯ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಧೂಳಿಪಟವಾಗಿದ್ದರೂ ಸುಳ್ಯದಲ್ಲಿ ಗೆಲುವು ದಾಖಲಿಸಿತ್ತು. ಬಿಜೆಪಿ ಕೋಟೆಗೆ ನುಗ್ಗಲು ಕಾಂಗ್ರೆಸ್‌ ಶತಗತಾಯ ಪ್ರಯತ್ನ ಮಾಡಿದ್ದರೂ ನಿರೀಕ್ಷಿತ ಫಲ ಕೊಟ್ಟಿರಲಿಲ್ಲ. ಈ ಬಾರಿ ಲೋಕಸಭೆ ಚುನಾವಣೆ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‌, ಬಿಜೆಪಿ ಸಾಮರ್ಥ್ಯ ರುಜುಪಡಿಸಲು ಪ್ರಯತ್ನ ಆರಂಭಿಸಿವೆ. ಕ್ಷೇತ್ರದಲ್ಲಿ ಚುನಾವಣೆಯ ಹವಾ ನಿಧಾನವಾಗಿ ಆವರಿಸಿಕೊಳ್ಳುತ್ತಿದೆ.

ಮೂವರು ಸಂಸದರು!
ಸುಳ್ಯ, ಕಡಬ ಮತ್ತು ಪುತ್ತೂರು ತಾಲೂಕಿನ ಕೆಲವು ಗ್ರಾಮಗಳನ್ನು ಹೊಂದಿರುವ ಸುಳ್ಯ ಪರಿಶಿಷ್ಟ ಜಾತಿ -ಪಂಗಡಕ್ಕೆ ಮೀಸಲು. ಆದರೆ ಈ ಮೂಲದ ಮೂವರು ರಾಜ್ಯದ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಂಸದರಾಗಿರುವುದು ವಿಶೇಷ. ಹಾಗಾಗಿ ಸುಳ್ಯಕ್ಕೆ ಮೂವರು ಸಂಸದರು ಎಂಬ ಮಾತಿದೆ. ಇವರು ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ (ಮಂಡೆಕೋಲು ಸಮೀಪದ ದೇವರಗುಂಡ ಮೂಲ) ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕಾಣಿಯೂರು ಸಮೀಪದ ಕರಂದ್ಲಾಜೆ) ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು (ಪಾಲ್ತಾಡಿ ಗ್ರಾಮದ ಕುಂಜಾಡಿ). ಈ ಮೂವರು ಈ ಬಾರಿಯೂ ಬೇರೆ ಕಡೆಗಳಿಂದ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್‌ ನದು ಇನ್ನೊಂದು ಬಗೆ. ಸುಳ್ಯ ಮೂಲದವರು ಕಾಂಗ್ರೆಸ್‌ನಿಂದ ಅಭ್ಯರ್ಥಿಗಳಾದುದು ಕಡಿಮೆ. 30 ವರ್ಷದಿಂದ ಅವಕಾಶ ವಂಚಿತಗೊಂಡಿರುವ ಕಾಂಗ್ರೆಸ್‌ ಮುಖಂಡರೂ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದು, ರಮಾನಾಥ ರೈ ಬಿಟ್ಟು ಬೇರೆ ಅಭ್ಯರ್ಥಿಗಳಿಗೆ ಅವಕಾಶ ಕೊಡುವುದಿದ್ದರೆ ಸುಳ್ಯಕ್ಕೆ ಅವಕಾಶ ಕೊಡಬೇಕು ಎಂದು ಬಹಿರಂಗವಾಗಿಯೇ ಒತ್ತಾಯಿಸಿದ್ದಾರೆ.

ಯಾವಾಗ ಯಾರಿಗೆ ಮುನ್ನಡೆ?
2008ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಎಸ್‌. ಅಂಗಾರ (61,144 ಮತಗಳು) ಕಾಂಗ್ರೆಸ್‌ನ ಡಾ| ರಘು (56,822) ವಿರುದ್ಧ 4,322 ಮತಗಳಿಂದ ಗೆದ್ದಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು (73,623 ಮತಗಳು) ಕಾಂಗ್ರೆಸ್‌ನ ಬಿ. ಜನಾರ್ದನ ಪೂಜಾರಿ (51,699 ಮತಗಳು)ವಿರುದ್ಧ 21,924 ಮತಗಳಿಂದ ಗೆಲುವು ಸಾಧಿಸಿದ್ದರು.

2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಂಗಾರ (65,913 ಮತಗಳು) ಕಾಂಗ್ರೆಸ್‌ನ ಡಾ| ರಘು (64,540) ವಿರುದ್ಧ 1,373 ಮತಗಳಿಂದ ಗೆದ್ದಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಳಿನ್‌ (92,629 ಮತಗಳು) ಕಾಂಗ್ರೆಸ್‌ನ ಜನಾರ್ದನ ಪೂಜಾರಿ (58,605 ಮತಗಳು) ವಿರುದ್ಧ 34,024 ಮತಗಳಿಂದ ಜಯ ಸಾಧಿಸಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಂಗಾರ (95,205 ಮತಗಳು) ಅವರಿಗೆ ಕಾಂಗ್ರೆಸ್‌ನ ಡಾ|ರಘು (69,137) ವಿರುದ್ಧ 26,068 ಮತಗಳ ಗೆಲುವಾಗಿತ್ತು.

ಮೋದಿ ಅಲೆಯೇ ಆಧಾರ
ಬಿಜೆಪಿಗೆ ಪ್ರಧಾನಿ ಮೋದಿ ಆಲೆಯೇ ಆಧಾರ. ಹಾಗಾಗಿ ಪ್ರಚಾರಕ್ಕೆ ಹೆಚ್ಚಾಗಿ ಬಳಸುತ್ತಿರುವುದು ಅದನ್ನೇ. ಈಗಾಗಲೇ ಒಂದು ಸುತ್ತಿನ ಪ್ರಚಾರ ಪೂರ್ಣಗೊಳಿಸಿದೆ. ನಳಿನ್‌ ಹುಟ್ಟೂರಿನ ಕ್ಷೇತ್ರವಾಗಿದ್ದರೂ ಈ ಬಾರಿ ಹಿಂದಿನ ಬಾರಿಯಂಥ ಕ್ಷೇಮ ವಾತಾವರಣವಿಲ್ಲ. ಕೆಲವು ಕಾರ್ಯಕರ್ತರು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹರಿಯಬಿಟ್ಟಿದ್ದರು. ಆದಾಗ್ಯೂ ಅಭ್ಯರ್ಥಿ ಹೆಸರು ಘೋಷಣೆಯಾದ ಹಿನ್ನೆಲೆಯಲ್ಲಿ ಮತದಾರರು ತೂಗಿ ಆಳೆಯತೊಡಗಿದ್ದಾರೆ.

ಅಭ್ಯರ್ಥಿಯ ಕುತೂಹಲ!
ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಯಾರೆಂಬ ಕುತೂಹಲ ಇದೆ. ಶಾಸಕ, ಸಚಿವರಾಗಿದ್ದ ಸಂದರ್ಭ ಸುಳ್ಯ ಕ್ಷೇತ್ರದಲ್ಲಿ ಹೆಚ್ಚು ಓಡಾಡಿದ ಮತ್ತು ಸುಳ್ಯ ವಿಧಾಸಭೆಯ ಕಾಂಗ್ರೆಸ್‌ ಮುಖಂಡರು, ಕಾರ್ಯ ಕರ್ತರಿಗೆ ಸರಕಾರಿ ಹಂತದಲ್ಲಿ ಆಗಬೇಕಾದ ಕೆಲಸಗಳಿಗೆ ಆಸರೆಯಾಗುವ ರಮಾನಾಥ ರೈ ಅವರಿಗೇ ಟಿಕೆಟ್‌ ಸಿಗಲಿ ಎಂಬ ಮಾತೂ ಇದೆ. ಕಾದು ನೋಡಬೇಕಿದೆ.

ಚುನಾವಣೆ ಸಿದ್ಧತೆ
ಕ್ಷೇತ್ರದಲ್ಲಿ ಡಾ| ಮಂಜುನಾಥ್‌ ಸಹಾಯಕ ಚುನಾವಣಾಧಿಕಾರಿಯಾಗಿ, ಚಂದ್ರಶೇಖರ ಪೇರಾಲು ಸಹ ಚುನಾವಣಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಕೌಂಟಿಂಗ್‌ ಟೀಮ್‌, ಮಾಸ್ಟರ್‌ ಟ್ರೈನರ್ ಟೀಮ್‌, ಸ್ಟಾಟಿಕ್‌ ಸರ್ವೆ ಲೆನ್ಸ್‌ ಟೀಮ್‌, ವೀಡಿಯೊ ವ್ಯೂವಿಂಗ್‌ ಟೀಮ್‌, ವೀಡಿಯೊ ಸರ್ವೆ ಲೆನ್ಸ್‌ ಟೀಮ್‌, ಎಂಸಿಸಿ ನೋಡಲ್‌ ಆಫೀಸರ್‌ಗಳು, ಫ್ಲಯಿಂಗ್‌ ಸ್ಕ್ವಾಡ್‌ ಹೀಗೆ ವಿವಿಧ ತಂಡ ಸಿದ್ಧಗೊಂಡಿವೆ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.