ಹೋರಾಟ ಕೈಬಿಡಿ; ಮತದಾನಕ್ಕೆ ಸಹಕರಿಸಿ

ಚಿಕ್ಕೋಡಿ ಹೋರಾಟ ಸಮಿತಿ ಮುಖಂಡರಿಗೆ ಜಿಪಂ ಸಿಇಒ ಮನವರಿಕೆ

Team Udayavani, Mar 24, 2019, 3:24 PM IST

10

ಚಿಕ್ಕೋಡಿ: ಜಿಲ್ಲಾ ಹೋರಾಟ ಸಮಿತಿ ಮತದಾನದ ಬಹಿಷ್ಕಾರ ಕುರಿತು ನಡೆಸಿದ ಆಂದೋಲನ ಕೈಬಿಡಬೇಕೆಂದು ಚುನಾವಣಾಧಿಕಾರಿ ರಾಜೇಂದ್ರ ಮನವಿ ಮಾಡಿದರು.

ಚಿಕ್ಕೋಡಿ: ಜಿಲ್ಲಾ ಹೋರಾಟ ಸಮಿತಿಯು ಮತದಾನ ಬಹಿಷ್ಕಾರ ಆಂದೋಲನ ಕೈಬಿಟ್ಟು ಪೂರ್ಣ ಪ್ರಮಾಣದ ಮತದಾನ ನಡೆಯಲು ಕೈ ಜೋಡಿಸಬೇಕೆಂದು ಚಿಕ್ಕೋಡಿ ಲೋಕಸಭೆ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ರಾಜೇಂದ್ರ ಹೇಳಿದರು.

ಇಲ್ಲಿನ ಮಿನಿವಿಧಾನಸೌಧ ಸಭಾ ಭವನದಲ್ಲಿ ಶನಿವಾರ ನಡೆದ ಜಿಲ್ಲಾ ಹೋರಾಟ ಸಮಿತಿ ಮುಖಂಡರ ಸಭೆ ನಡೆಸಿದ ಅವರು, ಚಿಕ್ಕೋಡಿ ಜಿಲ್ಲೆ ಘೋಷಣೆ ಕುರಿತು ರಾಜ್ಯ ಚುನಾವಣಾಧಿ ಕಾರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಲಾಗುತ್ತದೆ ಎಂದು ಮನವರಿಕೆ ಮಾಡಿದರು.

ಲೋಕಸಭೆ ಚುನಾವಣೆಯು ಐದು ವರ್ಷಕ್ಕೊಮ್ಮೆ ಬರುವ ದೇಶದ ಒಂದು ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಪ್ರಕ್ರಿಯೆಯಾಗಿದೆ. ಮತದಾನ ಮಾಡಬೇಡಿ ಎಂದು ಹೇಳುವುದು ಕಾನೂನಾತ್ಮಕ ಅಪರಾಧವಾಗುತ್ತದೆ ಎಂದರು.

ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಸ್ವ ಇಚ್ಛೆಯಿಂದ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬೇಕು ವಿನಾ ಬೇರೆ ವ್ಯಕ್ತಿಗೆ ಮತದಾನ ಮಾಡಬಾರದೆಂದು ಹೇಳುವುದು ಸಮಂಜಸವಲ್ಲ, ಹೋರಾಟ ಸಮಿತಿ ಸದಸ್ಯರು ನಡೆಸಿರುವ ಅಭಿಯಾನ ಮೊಟಕುಗೊಳಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಚಿಕ್ಕೋಡಿ ಜಿಲ್ಲೆಯಾಗಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ. ದೇಶದ 25 ನೆಯ ದೊಡ್ಡ ಜಿಲ್ಲೆ ಬೆಳಗಾವಿ. ರಾಜ್ಯದಲ್ಲಿ ಬೆಂಗಳೂರು ಕೇಂದ್ರ ಹೊರತುಪಡಿಸಿದರೆ ಬೆಳಗಾವಿ ಜಿಲ್ಲೆಯ ಅತೀ ದೊಡ್ಡ ಜಿಲ್ಲೆಯಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ವಿಭಜಿಸಿದರೆ ಅನುಕೂಲವಾಗುತ್ತದೆ. ಆದರೆ ಜಿಲ್ಲೆ ಘೋಷಣೆ ವಿಷಯ ಸರ್ಕಾರದ ಮಟ್ಟದಲ್ಲಿ ಆಗುವುದರಿಂದ ನಿಮ್ಮ ಬೇಡಿಕೆ ಈಡೇರಿಸಲು ನಮ್ಮಿಂದ ಸಾಧ್ಯವಾಗುವುದಿಲ್ಲ, ಹೋರಾಟಗಾರರ ಬೇಡಿಕೆಯನ್ನು ರಾಜ್ಯ ಚುನಾವಣಾ ಧಿಕಾರಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗುತ್ತದೆ ಎಂದರು.

ಜಿಲ್ಲಾ ಹೋರಾಟ ಸಮಿತಿ ಮುಖಂಡ ಬಿ.ಆರ್‌.ಸಂಗಪ್ಪಗೋಳ ಮಾತನಾಡಿ, ನಮ್ಮ ಬೇಡಿಕೆಗೆ ಸ್ಪಂದನೆ ಸಿಗದಿದ್ದರೆ ನಾವು ಮತದಾನ ಮಾಡಬೇಡಿ ಎಂದು ಹೇಳುತ್ತೇವೆ. ನಮ್ಮ ಮೇಲೆ ಕ್ರಿಮಿನಲ್‌ ಕೇಸ್‌ ಹಾಕಬಹುದು ಎಂದರು. ಆದರೆ ನಮ್ಮ ಸಮಸ್ಯೆ ಬಗೆಹರಿಸುತ್ತೇವೆಂದು ಮೇಲಧಿ ಕಾರಿಗಳ ಜೊತೆ ಮಾತುಕತೆ ನಡೆಸಿ ಮತ್ತೊಮ್ಮೆ ನಮ್ಮ ಸಭೆ ಕರೆಯಬೇಕು ಎಂದು ಮನವಿ ಮಾಡಿದರು.

ಸಾಹಿತಿ ಪ್ರೊ|ಎಸ್‌.ವೈ. ಹಂಜಿ ಮಾತನಾಡಿ, ಚಿಕ್ಕೋಡಿ 25 ಲಕ್ಷ ಜನಸಂಖ್ಯೆ ಹೊಂದಿರುವ ದೊಡ್ಡ ಜಿಲ್ಲೆ . ಇದನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವುದು ಅವಶ್ಯಕ ಎಂದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿ ಸದಸ್ಯರಾದ ತುಕಾರಾಮ ಕೋಳಿ, ಬಸವರಾಜ ಢಾಕೆ, ರೇವಪ್ಪ ತಳವಾರ, ಸಂಜು ಬಡಿಗೇರ, ಸಿದ್ದು ಪಾಟೀಲ, ಅರ್ಜುನ ಚೆನ್ನವರ, ಸುಭಾಷ ಬಸರಗಿ, ಭೀಮರಾವ ಚೌಗಲೆ, ವಾಸುದೇವ ಯಕಣೆ, ಬಾಳಪ್ಪ ವಾಲಿಕಾರ ಮುಂತಾದವರು ಇದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.