ಕುತೂಹಲ ಕೆರಳಿಸಿರುವ 5 ಕ್ಷೇತ್ರಗಳು


Team Udayavani, Mar 25, 2019, 5:13 AM IST

93

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನಿರುವುದು ಎರಡೇ ದಿನ. ಈ ಹಂತದಲ್ಲಿ ರಾಜ್ಯದ ಹಲವು ಕ್ಷೇತ್ರಗಳು ಘಟಾನುಘಟಿಗಳ ಆಡುಂಬೊಲವಾಗಿದೆ. ಒಂದೊಂದು ಕ್ಷೇತ್ರ ಒಂದೊಂದು ಕುತೂಹಲವನ್ನು ಮಡಿಲಲ್ಲಿ ಇಟ್ಟುಕೊಂಡು ರಾಜಕೀಯ ಆಸಕ್ತರನ್ನು ತುದಿಗಾಲಲ್ಲಿ ನಿಲ್ಲಿಸಿದೆ. ಸದ್ಯಕ್ಕೆ ರಾಜ್ಯದ ಕುತೂಹಲ ಕೆರಳಿಸಿರುವ ಐದು ಕ್ಷೇತ್ರಗಳನ್ನು ಇಲ್ಲಿ ನೀಡಲಾಗಿದ್ದು, ಈ ಕ್ಷೇತ್ರಗಳಲ್ಲಿ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ಬದಲಾಗುತ್ತಲೇ ಇವೆ. ಅಲ್ಲಿನ ದಿನ ದಿನದ ಬೆಳವಣಿಗೆಗಳನ್ನು ನಿಮ್ಮ ಮುಂದಿಡಲಿದೆ.

ಮಂಡ್ಯ
ಕಳೆದ ಹದಿನೈದು ದಿನಗಳಿಂದ ಬಿಸಿ ಯೇರುತ್ತಿರುವ ಕದನ ಕಣ ಸೋಮ­ವಾರ ದಿಂದ ಮತ್ತಷ್ಟು ಹಾಟ್‌ ಆಗಲಿದೆ. ಪಕ್ಷೇತರ ಅಭ್ಯರ್ಥಿ ಸುಮ­ಲತಾ ಒಂದು ಹಂತದ ಪ್ರಚಾರ ಮುಗಿ­ಸಿ­ಯಾಗಿದೆ. ಸೋಮ ವಾರ ಜೆಡಿಎಸ್‌ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ.

ರವಿವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಕ್ಷೇತ್ರ ದೈವ ಶ್ರೀ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದರು. ಈಚೆಗೆ ಸುಮಲತಾ ನಡೆಸಿರುವ ರ್ಯಾಲಿಗೆ ಸಡ್ಡು ಹೊಡೆದು ಪ್ರತಿರ್ಯಾಲಿ ನಡೆಸಲು ಜೆಡಿಎಸ್‌ ಆಯೋಜಿಸಿದೆ. ಇದರ ಸಿದ್ಧತೆಯ ನೇತೃತ್ವವನ್ನು ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವ ತಮ್ಮಣ್ಣ ವಹಿಸಿದ್ದಾರೆ.

ಹಾಸನ
ಈ ಕ್ಷೇತ್ರದಲ್ಲಿ ಈಗಾಗಲೇ ಜೆಡಿಎಸ್‌ ನಿಂದ ರೇವಣ್ಣ ಪುತ್ರ ಪ್ರಜ್ವಲ್‌ ಅವರು ನಾಮಪತ್ರ ಸಲ್ಲಿಸಿ ಯಾಗಿದೆ. ದೇವೇಗೌಡರು ತಮ್ಮ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟು ಕೊಟ್ಟ ಕಾರಣಕ್ಕೆ ರಾಜ್ಯದ ಗಮನ ಸೆಳೆ ದಿರುವ ಈ ಕ್ಷೇತ್ರದಲ್ಲಿ ರಾಜಕೀಯ ಬಿಸಿ ಏರುತ್ತಲೇ ಇದೆ.

ಮಾಜಿ ಸಚಿವ ಎ. ಮಂಜು ಈಗ ಬಿಜೆಪಿ ಸೇರಿಕೊಂಡು ಕದನ ಕಣದ ರಂಗೇರಿಸಿದ್ದಾರೆ. ಸೋಮವಾರ ಮಂಜು ಅವರು ನಾಮ ಪತ್ರ ಸಲ್ಲಿಸಲಿದ್ದು, ಅದಕ್ಕೂ ಮೊದಲು ಕಾರ್ಯಕರ್ತ­ ರನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ಮುಖಂಡ ವಿ.ಶ್ರೀನಿವಾಸ್‌ ಪ್ರಸಾದ್‌ ಮತ್ತು ಬಿಜೆಪಿ ಮುಖಂಡರು ಭಾಷಣ ಮಾಡು ವರು. ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಸೋಮ ವಾರ ಮತ್ತೂಂದು ಸೆಟ್‌ ನಾಮಪತ್ರ ಸಲ್ಲಿಸುವರು.

ತುಮಕೂರು
ತುಮಕೂರು ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಯಾಗಿ ಮಾಜಿ ಪ್ರಧಾನಿ ದೇವೇ ಗೌಡ ಸ್ಪರ್ಧಿಸುತ್ತಿರುವುದ ರಿಂದ ಈ ಕ್ಷೇತ್ರ ಇಡೀ ದೇಶದ ಗಮನ ಸೆಳೆಯುತ್ತಿದೆ. ಬಿಜೆಪಿ ಅಭ್ಯರ್ಥಿ  ಜಿ.ಎಸ್‌. ಬಸವರಾಜ್‌ ಅವರು ಪೈಪೋಟಿ ನೀಡಲಿದ್ದಾರೆ. ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರು ವುದರಿಂದ ಆಕ್ರೋಶ­ಗೊಂಡಿ­   ರುವ ಹಾಲಿ ಸಂಸದ ಎಸ್‌.ಪಿ.­ ಮುದ್ದ ಹನುಮೇ ಗೌಡ ಸೋಮವಾರ ನಾಮಪತ್ರ ಸಲ್ಲಿ ಸಲು ಮುಂದಾ ಗಿ ದ್ದಾರೆ.

ದೇವೇಗೌಡರನ್ನು ಗೆಲ್ಲಿಸುವ ಹೊಣೆ ಹೊತ್ತಿರುವ ಡಿಸಿಎಂ ಡಾ| ಜಿ. ಪರಮೇಶ್ವರ್‌, ದೇವೇ ಗೌಡರು ಈ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಇನ್ನೊಮ್ಮೆ ಮನವಿ ಮಾಡಿರುವುದು ಕುತೂಹಲಕಾರಿ ಬೆಳವಣಿಗೆ. ಮುದ್ದಹನುಮೇಗೌಡ ಬೆಂಬ ಲಿತ ಕಾಂಗ್ರೆಸ್‌ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ
ರಾಜ್ಯದಲ್ಲಿಯೇ ಹೈವೋಲ್ಟೆàಜ್‌ ಕ್ಷೇತ್ರ ವಾಗಿರುವ ಕಲಬುರಗಿ ಕ್ಷೇತ್ರದಲ್ಲಿ ಚುನಾವಣೆ ಕಾವು ಬಿಸಿಲಿನಂತೆ ಪ್ರಖರ ಗೊಳ್ಳುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್‌ ರವಿ ವಾರ ಕ್ಷೇತ್ರದಲ್ಲಿರದೆ ಇದ್ದರೂ ಕಾರ್ಯ ಕರ್ತರ ಮೂಲಕ ಪ್ರಚಾರ ಚುರುಕು­ಗೊಳಿಸಿ ದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಟಿಕೆಟ್‌ ಪಟ್ಟಿ ಅಂತಿಮಗೊಳಿಸುವುದರ ಜತೆಗೆ ಮಹಾರಾಷ್ಟ್ರದ ಎಐಸಿಸಿ ಉಸ್ತುವಾರಿ ಇರುವುದರಿಂದ ಆ ರಾಜ್ಯದ ಟಿಕೆಟ್‌ ಪಟ್ಟಿ ಅಂತಿಮಗೊಳಿಸಲು ದಿಲ್ಲಿ ಯಲ್ಲಿ ಬಿಡಾರ ಹೂಡಿದ್ದಾರೆ. ಬಿಜೆಪಿ ಅಭ್ಯರ್ಥಿ, ಶಾಸಕ ಡಾ| ಉಮೇಶ ಜಾಧವ್‌ ಅವರಿಗೆ ಮಾ. 24 ಜನ್ಮ ದಿನ. ಹೀಗಾಗಿ ಬೆಂಗಳೂರಿ ನಲ್ಲಿಯೇ ಸರಳವಾಗಿ ಜನ್ಮದಿನ ಆಚರಿಸಿಕೊಂಡರು.

ಬೆಂಗಳೂರು ದ.
ಪ್ರತಿ ಸಲವೂ ತುರುಸಿನ ಸ್ಪರ್ಧೆಗೆ ಹೆಸರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರ ಈ ಸಲ ಮತ್ತಷ್ಟು ಕುತೂಹಲ ಕೆರಳಿಸಿದೆ.

ಕೇಂದ್ರದಲ್ಲಿ ಸಚಿವರಾಗಿದ್ದ ಅನಂತಕುಮಾರ್‌ ನಿಧನದ ಅನಂತರ ಅವರ ಪತ್ನಿ ತೇಜಸ್ವಿನಿ ಇಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳ ಲಾಗಿತ್ತು. ಆದರೆ ಬಿಜೆಪಿಯ ಮೊದಲ ಪಟ್ಟಿಯಲ್ಲಿ ಇವರ ಹೆಸರಿಲ್ಲದ ಕಾರಣ ಕುತೂಹಲ ಮತ್ತಷ್ಟು ಕೆರಳಿತು. ಈ ನಡುವೆ, ಸ್ವತಃ ಪ್ರಧಾನಿ ಮೋದಿ ಅವರೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂಬ ವರದಿಗಳು ಈ ಕ್ಷೇತ್ರವನ್ನು ಮತ್ತಷ್ಟು ಹಾಟ್‌ ಮಾಡಿದೆ. ಮೋದಿ ಬದಲು ಮತ್ತೋರ್ವ ಸರ್‌ಪ್ರೈಸ್‌ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ರವಿವಾರ ಹರಿದಾಡುತಿತ್ತು. ಈ ಬೆನ್ನಲ್ಲೇ, ಕಾಂಗ್ರೆಸ್‌ ರವಿವಾರ ಬಿ.ಕೆ. ಹರಿಪ್ರಸಾದ್‌ ಅವರನ್ನು ಕಣಕ್ಕಿಳಿಸಿದೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.