ಓಲಾ ಅಮಾನತು ಆದೇಶ ಹಿಂದಕ್ಕೆ?


Team Udayavani, Mar 25, 2019, 12:15 PM IST

ola-ama

ಬೆಂಗಳೂರು: ಆ್ಯಪ್‌ ಆಧಾರಿತ ಟ್ಯಾಕ್ಸಿ ಓಲಾ ಸಂಸ್ಥೆ ಸೇವೆಯನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಕೇವಲ ಮೂರು ದಿನಗಳ ಅಂತರದಲ್ಲಿ ಸರ್ಕಾರ, ತನ್ನ ನಿರ್ಧಾರ ಹಿಂಪಡೆಯಲು ಮುಂದಾಗಿದೆ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳನ್ನು ಉಲ್ಲಂ ಸಿದ ಆರೋಪದ ಹಿನ್ನೆಲೆಯಲ್ಲಿ ಓಲಾ ಸಂಸ್ಥೆಗೆ ನೀಡಿದ್ದ ಪರವಾನಗಿಯನ್ನು ಆರು ತಿಂಗಳು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.

ಆದೇಶ ಸ್ವೀಕರಿಸಿದ ಮೂರು ದಿನಗಳಲ್ಲಿ ಪರವಾನಗಿಯನ್ನು ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ ವಾಪಸ್‌ ನೀಡಬೇಕು ಎಂದು ಸೂಚಿಸಿತ್ತು. ಆದರೆ, ಮೂರು ದಿನಗಳಲ್ಲಿ ತಾನು ನೀಡಿದ್ದ ಆದೇಶವನ್ನೇ ಹಿಂಪಡೆಯಲು ಉದ್ದೇಶಿಸಿದೆ.

“ಹೀಗೆ ಏಕಾಏಕಿ ಸೇವೆ ಸ್ಥಗಿತಗೊಳಿಸುವುದರಿಂದ ಅವಲಂಬಿತ 75 ಸಾವಿರಕ್ಕೂ ಚಾಲಕರು ಅತಂತ್ರರಾಗಲಿದ್ದಾರೆ. ಆದ್ದರಿಂದ ಈ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಮನದಟ್ಟು ಮಾಡಲಾಗಿದೆ.

ಅಲ್ಲದೆ, ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್‌ ಭಾಸ್ಕರ್‌ ಅವರೊಂದಿಗೂ ಚರ್ಚಿಸಿದ್ದು, ಸರ್ಕಾರ ಶೀಘ್ರ ಈ ಆದೇಶವನ್ನು ಹಿಂಪಡೆಯಲಿದೆ’ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಅಲ್ಲದೆ, “ಓಲಾ ಕ್ಯಾಬ್‌ಗಳು ಇಂದಿನಿಂದ (ಭಾನುವಾರದಿಂದ) ಎಂದಿನಂತೆ ಕಾರ್ಯಾಚರಣೆ ಆರಂಭಿಸಿವೆ. ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮತ್ತು ಉದ್ದಿಮೆಗಳೊಂದಿಗೆ ಸರ್ಕಾರವು ಕೈಜೋಡಿಸಿ ಕೆಲಸ ಮಾಡಲು ಪೂರಕವಾದ ನೀತಿಗಳ ಅವಶ್ಯಕತೆ ಇದೆ’ ಎಂದೂ ಅವರು ಟ್ವೀಟ್‌ ಮಾಡಿದ್ದಾರೆ.

ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿದ ಟಿ.ಎಂ. ವಿಜಯ್‌ ಭಾಸ್ಕರ್‌, “ಓಲಾ ಸಂಸ್ಥೆಯ ಸೇವೆಗಳನ್ನು ಇದುವರೆಗೆ ಸ್ಥಗಿತಗೊಳಿಸಿಲ್ಲ. ಸೋಮವಾರ ಆ ಸಂಸ್ಥೆ ಮುಖ್ಯಸ್ಥರು ಸಾರಿಗೆ ಆಯುಕ್ತರು ಭೇಟಿ ಮಾಡಿ, ಚರ್ಚೆ ನಡೆಸಲಿದ್ದಾರೆ.

ತದನಂತರ ಸಾರಿಗೆ ಆಯುಕ್ತರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು. ಇದೆಲ್ಲದರ ಮಧ್ಯೆ ಓಲಾ ಸೇವೆ ಎಂದಿನಂತೆ ಮುಂದುವರಿದಿದೆ. ಓಲಾ ಸಂಸ್ಥೆಯು ತನ್ನ ಸೇವಾ ವ್ಯಾಪ್ತಿ ವಿಸ್ತರಿಸುವ ಭರದಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ಆ್ಯಪ್‌ ಆಧಾರಿತ ಬೈಕ್‌ ಸೇವೆ ಆರಂಭಿಸಿತ್ತು.

ಈ ಬಗ್ಗೆ ವಿವಿಧ ಟ್ಯಾಕ್ಸಿ ಚಾಲಕರ ಸಂಘಗಳು ಸಾರಿಗೆ ಇಲಾಖೆಗೆ ದೂರು ನೀಡಿದ್ದವು. ಈ ಹಿನ್ನೆಲೆಯಲ್ಲಿ ನಿಯಮಗಳನ್ನು ಉಲ್ಲಂ ಸಿದ ಆರೋಪದ ಮೇರೆಗೆ “ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳು -2018ರ 11 (1)’ರ ಅಡಿ ಸಂಸ್ಥೆಗೆ ನೀಡಲಾಗಿದ್ದ ಪರವಾನಗಿ ಅಮಾನತುಗೊಳಿಸಿ, ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸಬೇಕೆಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಈ ವಿಷಯದ ಗಂಭೀರತೆ ಅರಿಯದೆ, ಸರ್ಕಾರದ ಉನ್ನತ ಅಧಿಕಾರಿಗಳ ಗಮನಕ್ಕೂ ತರದೆ ಕೆಳಹಂತದ ಅಧಿಕಾರಿ ಏಕಾಏಕಿ ಆದೇಶ ಹೊರಡಿಸಿದ್ದು, ಇದು ಗೊಂದಲಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಓಲಾ ಕ್ಯಾಬ್‌ ಪರವಾನಗಿ ನಿಯಮಗಳ ಉಲ್ಲಂಘನೆ ವಿಚಾರದ ಬಗ್ಗೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿದ್ದು, ಶೀಘ್ರ ಬಗೆಹರಿಸುವಂತೆ ಸೂಚಿಸಿದ್ದೇನೆ. ಹಾಗಾಗಿ, ಆದಷ್ಟು ಬೇಗ ಇತ್ಯರ್ಥಗೊಳ್ಳಲಿದೆ.
-ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.