ತಂಪು ನೀರು-ನೆರಳಿಗೆ ಹುಡುಕಾಟ


Team Udayavani, Mar 25, 2019, 12:17 PM IST

gul-7
ವಾಡಿ: ಮಳೆಗಾಲದಲ್ಲಿ ಮಳೆಯಾಗದ್ದಕ್ಕೆ ಬೇಸಿಗೆಯಲ್ಲಿ ಬಿಸಿಲ ಹೊಡೆತ ಅನುಭವಿಸುವಂತಾಗಿದೆ. ಕಾಂಕ್ರಿಟ್‌ ರಸ್ತೆಗಳು ಕೆಂಡದ ಹಾಸಿಗೆಯಂತಾಗಿದ್ದರೆ, ಮುಖಕ್ಕೆ ಉಗಿಯುತ್ತಿರುವ ಬಿಸಿಗಾಳಿ ಉಸಿರುಗಟ್ಟಿಸಿ ಸಾಯಿಸುತ್ತಿದೆ.
ಹಾಸುಗಲ್ಲಿಗೆ ಹೆಸರುವಾಸಿಯಾಗಿರುವ ಕಲ್ಲು ಗಣಿನಾಡು ವಾಡಿ ಪಟ್ಟಣದಲ್ಲೀಗ ಖಡಕ್‌ ಬಿಸಿಲಿನದ್ದೇ ಹವಾ. ಬೇಸಿಗೆಯ ಆರಂಭದ ದಿನಗಳಲ್ಲೇ ಬಿಸಿಲು ತನ್ನ ರೌದ್ರಾವತಾರ ಪ್ರದರ್ಶಿಸಿದ್ದು, ಜನ ಜನುವಾರು ಬಾಯಾರಿಕೆಯಿಂದ ಬಸವಳಿಯುವಂತಾಗಿದೆ. ತಂಪು ನೀರು ನೆರಳಿಗಾಗಿ ಪರದಾಡುತ್ತಿರುವ ದೃಶ್ಯಗಳು ಎಲ್ಲೆಡೆ ಕಂಡುಬರುತ್ತಿವೆ. ಬೆವರಿಳಿಸುವ ಬಿಸಿಲ ಪ್ರತಾಪ ಒಂದೆಡೆಯಾದರೆ, ನೆರಳಿನಲ್ಲೂ ನರಳಾಡುವಂತೆ ಮಾಡುವ ಧಗೆಯಿಂದ ದೇಹ ತತ್ತರಿಸುವಂತಾಗಿದೆ.
ಪಟ್ಟಣ ವ್ಯಾಪ್ತಿಯಲ್ಲಿ 36 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದ್ದು, ಕೆಂಡ ಕಾರುತ್ತಿರುವ ಭಯಂಕರ ರಣಬಿಸಿಲು, ಜೀವಸಂಕುಲಗಳ ಪ್ರಾಣಕ್ಕೆ ಕುತ್ತು ತರುವಷ್ಟು ತಾಪ ಹೊಂದಿದೆ. ಪರ್ಸಿ ಕಲ್ಲಿನ ಹಾಸಿಗೆ ಹೊಂದಿರುವ ನಗರದ ನೆಲದಿಂದ ಬೆಂಕಿಯ ಉಗ ಹಾರುತ್ತಿದೆ. ಪಾದ ನೆಲಕ್ಕಿಟ್ಟರೆ ಅಗ್ನಿಕುಂಡುದ ಅನುಭವ. ನೆತ್ತಿ ಸುಡುವ ನೇಸರ ಜನರಿಗೆ ನೀರು ನೆರಳಿನತ್ತ ಓಡಿಸುತ್ತಿದ್ದಾನೆ.
ಸಾರ್ವಜನಿಕರು ನೆರಳಿಗಾಗಿ ಪರಿತಪಿಸುವಂತಾಗಿದೆ. ಬಿಸಿಲ ಝಳದಿಂದ ಬೇಸತ್ತು ಮಹಿಳೆಯರು ಮುಖಕ್ಕೆ ಬಟ್ಟೆ ಸುತ್ತಿಕೊಂಡು ಓಡಾಡುತ್ತಿದ್ದಾರೆ. ಹಿರಿಯರು ತಲೆಯ ಮೇಲೆ ಟವಲ್‌ ಹಾಕಿಕೊಂಡು  ಸುಡುಬಿಸಿಲಿನಿಂದ ರಕ್ಷಣೆ ಪಡೆಯುತ್ತಿದ್ದಾರೆ. ಮಕ್ಕಳು ಮತ್ತು ವೃದ್ಧರು ಉರಿಬಿಸಿಲು, ಬಿಸಿಗಾಳಿಗೆ ಬಸವಳಿದು ಆಸ್ಪತ್ರೆಗೆ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ದುಬಾರಿ ಬೆಲೆಗೆ ನೀರಿನ ದಂಧೆ: ಬಿಸಿಲು ಮತ್ತು ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡಿರುವ ಮಿನರಲ್‌ ನೀರು ವ್ಯಾಪಾರಿಗಳು, ಗ್ರಾಹಕರ ಸುಲಿಗೆಗೆ ನಿಂತಿದ್ದಾರೆ. ಈ ಮಧ್ಯೆ ತಂಪು ಪಾನೀಯಗಳ ಬೇಡಿಕೆ ಹೆಚ್ಚಿದೆ. ನಕಲಿ ಮಿನರಲ್‌ ನೀರಿನ ಬಾಟಲಿ ದಂಧೆಗೆ ರೆಕ್ಕೆಗಳು ಬಂದಿವೆ. ರೈಲು ನಿಲ್ದಾಣ ಮತ್ತು ಬಸ್‌ ನಿಲ್ದಾಣಗಳಲ್ಲಿ ದುಬಾರಿ ಬೆಲೆಗೆ ನೀರು ಮಾರಾಟವಾಗುತ್ತಿದೆ.
ಬಾಯಾರಿಕೆ ತಣಿಸಿಕೊಳ್ಳುವ ನೆಪದಲ್ಲಿ ಗ್ರಾಹಕರು, ವರ್ತಕರ ಮೋಸಕ್ಕೆ ಬಲಿಯಾಗುತ್ತಿದ್ದಾರೆ. ನದಿ, ಹಳ್ಳಗಳು ಜಲವಿಲ್ಲದೆ ಭಣಗುಡುತ್ತಿದ್ದರೆ, ಇತ್ತ ಬಾವಿ, ಬೋರ್‌ವೆಲ್‌ಗ‌ಳ ಅಂತರ್ಜಲ ಪಾತಾಳಕ್ಕೆ ಸೇರಿಕೊಂಡಿದೆ. ಕಾದ ಹೆಂಚಿನಂತಾಗಿರುವ ನೆಲ ಪಾದಚಾರಿಗಳ ಬೆವರಿಳಿಸುತ್ತಿದೆ. ಕುಡಿಯಲು ನೀರಿಗೆ ಹಾಹಾಕಾರ ಭುಗಿಲೆದ್ದಿರುವಾಗ ರಸ್ತೆಗೆ ನೀರು ಸಿಂಪರಣೆ ಮಾಡಿ ತಾಪಮಾನ ತಣ್ಣಗಾಗಿಸುವುದು ಅಸಾಧ್ಯದ ಕೆಲಸ. ತಕ್ಷಣಕ್ಕೆ ಮಳೆಯಾಗಿ ಭೂಮಿ ನೀರುಂಡರೆ ಮಾತ್ರ ಬಿಸಿಲ ತಾಪ ತುಸು ತಣ್ಣಗಾಗಬಹುದು ಎನ್ನುತ್ತಾರೆ ಸ್ಥಳೀಯರು.
ಕಳೆದ ವರ್ಷಕಿಂತ ಈ ವರ್ಷ ಬಿಸಿಲು ಭಯಂಕರವಾಗಿದೆ. ಮನೆ ಬಿಟ್ಟು ಹೊರಗೆ ಬರಲಾಗದಂತಹ ಪರಸ್ಥಿತಿ ಸೃಷ್ಟಿಯಾಗಿದೆ. ತಂಪು ಗಾಳಿ ಮತ್ತು ತಂಪು ಪಾನೀಯಗಳ ಮೊರೆ ಹೋಗುವ ಮೂಲಕ ಜನರು ಬಾಯಾರಿಕೆ ನಿವಾರಿಸಿಕೊಳ್ಳುತ್ತಿದ್ದಾರೆ. ಸಂತೆ ಮತ್ತು ವ್ಯಾಪಾರಕ್ಕೆಂದು ಪಟ್ಟಣಕ್ಕೆ ಬರುವ ವಿವಿಧ ಗ್ರಾಮಗಳ ಜನರಿಗಾಗಿ ನೀರಿನ ಸೌಕರ್ಯ ಇಲ್ಲವಾಗಿದೆ. ಪುರಸಭೆ ವತಿಯಿಂದ ಪ್ರಮುಖ ಸ್ಥಳಗಳಲ್ಲಿ ಮಡಿಕೆಯಿಟ್ಟು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.
ಸಿದ್ಧು ಪಂಚಾಳ, ಸ್ಥಳೀಯ ನಿವಾಸಿ
ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.