‘ಕೈ’ಗೆ ಅಧಿಕಾರ ಕೊಟ್ಟರೆ ವರ್ಷಕ್ಕೆ 72 ಸಾವಿರ ನಿಮ್ಮ ಅಕೌಂಟಿಗೆ ಜಮೆ!
ದೇಶದ 20% ಕಡುಬಡ ವರ್ಗಕ್ಕೆ ಬಂಪರ್ ಆಫರ್ ಘೋಷಿಸಿದ ರಾಗಾ
Team Udayavani, Mar 25, 2019, 3:05 PM IST
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದರೆ ದೇಶದ ಕಡು ಬಡ ಕುಟುಂಬಗಳಿಗೆ ವಾರ್ಷಿಕ 72ಸಾವಿರ ರೂಪಾಯಿಗಳನ್ನು ಅವರ ಅಕೌಂಟಿಗೆ ಜಮಾ ಮಾಡುವ ವಿನೂತನ ಆಶ್ವಾಸನೆಯೊಂದನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾಡಿದ್ದಾರೆ. ಆ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಗಾ ಅವರು ದೇಶದ ಬಡವರ್ಗದ ಮತದಾರರನ್ನು ಓಲೈಸುವ ಕಾರ್ಯತಂತ್ರಕ್ಕೆ ಕೈ ಹಾಕಿದ್ದಾರೆ.
ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ರಾಹುಲ್ ಗಾಂಧಿ ಅವರು ಈ ವಿಚಾರವನ್ನು ಬಹಿರಂಗಪಡಿಸಿದರು. ‘ಈ ದೇಶದ ಬಡವರ ಕುರಿತಾಗಿ ನಮ್ಮ ಪಕ್ಷಕ್ಕೆ ಅತೀವ ಕಾಳಜಿ ಇದ್ದು ಅವರ ಸಮಸ್ಯೆಗಳನ್ನು ನಿವಾರಿಸಲು ನಾವು ಬಹುವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ’ ಎಂದು ಅವರು ಹೇಳಿದರು. ಮತ್ತೆ ಮುಂದುವರೆದು ‘ಕನಿಷ್ಠ ತಲಾ ಆದಾಯ ಯೋಜನೆಯಡಿಯಲ್ಲಿ ವರ್ಷಕ್ಕೆ 72,000 ರೂಪಾಯಿಗಳನ್ನು ಈ ದೇಶದಲ್ಲಿರುವ 20% ಕಡು ಬಡ ಕುಟುಂಬಗಳ ಬ್ಯಾಂಕ್ ಅಕೌಂಟ್ ಗಳಿಗೆ ಜಮಾ ಮಾಡಲಾಗುವುದು’ ಎಂಬ ಆಶ್ವಾಸನೆಯನ್ನು ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಪರವಾಗಿ ನೀಡಿದರು. ಈ ಯೋಜನೆ ಜಾರಿಗೆ ಸಂಬಂಧಿಸಿದಂತೆ ಎಲ್ಲಾ ಲೆಕ್ಕಾಚಾರಗಳನ್ನೂ ನಾವು ಮಾಡಿದ್ದೇವೆ. ಪ್ರಪಂಚದ ಯಾವುದೇ ದೇಶದಲ್ಲಿ ಈ ರೀತಿಯ ಯೋಜನೆ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಟೀಕಾಪ್ರಹಾರವನ್ನು ಮುಂದುವರೆಸಿದ ರಾಹುಲ್ ಗಾಂಧಿ ಅವರು, ‘ಮೋದಿ ಈ ದೇಶದ ಶ್ರೀಮಂತರಿಗೆ ಹಣ ನೀಡಬಹುದಾದರೆ, ನಾವೂ ಸಹ ಈ ದೇಶದ ಬಡವರಿಗೆ ಹಣ ನೀಡಬಹುದು. ಈ ನಮ್ಮ ಹೊಸ ಯೋಜನೆಯಿಂದ 5 ಕೋಟಿ ಕುಟುಂಬಗಳಲ್ಲಿರುವ 25 ಕೋಟಿ ಜನರಿಗೆ ಸಹಾಯವಾಗಲಿದೆ. ಮತ್ತು ತಿಂಗಳಿಗೆ 12,000 ಕ್ಕಿಂತ ಕಡಿಮೆ ಆದಾಯವಿರುವ ಕುಟುಂಬಗಳಿಗಾಗಿ ಈ ಯೋಜನೆಯನ್ನು ರೂಪಿಸಲಾಗಿದೆ’ ಎಂದು ರಾಹುಲ್ ಗಾಂಧಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’