ಬಂಡಿಮಠದಲ್ಲಿ ಪೋಲಾಗುತ್ತಿದೆ ನೀರು … ಕೇಳುವವರಿಲ್ಲ ಯಾರೂ !

ಶಿಥಿಲಗೊಂಡಿರುವ ಕಲ್ಲೊಟೆ ರಸ್ತೆ ಬಳಿಯ ಸಂಪ್‌

Team Udayavani, Mar 26, 2019, 6:30 AM IST

tank

ಕಾರ್ಕಳ: ಹನಿ ನೀರು ಅಮೂಲ್ಯ ವಾಗಿರುವ ಈ ಬೇಸಗೆಯಲ್ಲೂ ಕಾರ್ಕಳದ ಬಂಡಿಮಠ ಸಂಪ್‌ನಿಂದ ಭಾರೀ ಪ್ರಮಾಣದ ನೀರು ಹರಿದು ಪೋಲಾಗುತ್ತಿರುವ ದೃಶ್ಯ ಕಂಡುಬರುತ್ತಿದೆ.

ಬಿರು ಬಿಸಿಲಿಗೆ ಕೆರೆಬಾವಿ ನೀರು ಬತ್ತಿ ನೀರಿಗಾಗಿ ಪರಿತಪಿಸುತ್ತಿರುವ ಈ ಸಮಯದಲ್ಲಿ ಪುರಸಭಾ ವ್ಯಾಪ್ತಿಯ ಕಲ್ಲೊಟೆ ರಸ್ತೆ ಪಕ್ಕದಲ್ಲಿರುವ ಸಂಪ್‌ ಅಡಿಪಾಯ ಶಿಥಿಲಗೊಂಡು ನೀರು ಸಂಪ್‌ನಿಂದ ಯಥೇತ್ಛವಾಗಿ ಹರಿದು ಚರಂಡಿ ಸೇರುತ್ತಿದೆ.

ಬೃಹತ್‌ ಟ್ಯಾಂಕ್‌
10 ಲಕ್ಷ ಲೀ. ನೀರು ತುಂಬುವ ಸಾಮರ್ಥ್ಯ ಹೊಂದಿರುವ ಬೃಹತ್‌ ಟ್ಯಾಂಕ್‌ಗೆ ಪಕ್ಕದಲ್ಲೇ ಇರುವ ಸಂಪ್‌ನಿಂದ ಪಂಪ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ಟ್ಯಾಂಕ್‌ ತುಂಬಲು 7 ಗಂಟೆ ಸಮಯಾವಕಾಶ ಬೇಕಾಗಿರುವ ಕಾರಣ 7 ಗಂಟೆ ಕಾಲ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಜೀವಜಲ ಪೋಲಾಗುತ್ತಿದೆ. ಅದಲ್ಲದೇ ಟ್ಯಾಂಕ್‌ನಲ್ಲೂ ನೀರು ಸೋರಿಕೆಯಾಗಿ ಮಳೆನೀರು ಬಿದ್ದಂತೆ ಸುರಿಯುತ್ತಿದೆ.

ಮುಂಡ್ಲಿಯಿಂದ ನೀರು
ಕಾರ್ಕಳ ಪುರಸಭಾ ವ್ಯಾಪ್ತಿಗೆ ದುರ್ಗ ಗ್ರಾಮದ ಮುಂಡ್ಲಿ ಜಲಾಶಯದಿಂದ ನೀರು ಪೂರೈಕೆಯಾಗುತ್ತಿದೆ. ಪುರಸಭಾ ವ್ಯಾಪ್ತಿಗೆ ಮುಂಡ್ಲಿ ಜಲಾಶಯವೇ ನೀರಿನ ಮೂಲ. ಮುಂಡ್ಲಿ ಜಲಾಶಯದಲ್ಲೂ ಹೂಳು ತುಂಬಿದ್ದ ಕಾರಣ ನೀರಿನ ಶೇಖರಣೆ ಪ್ರಮಾಣ ಎಂದಿನಂತಿಲ್ಲ.

ಪರಿಣಾಮ ಬೀರಲಿದೆ
ನೀರಿನ ಬವಣೆ ಎಲ್ಲೆಡೆ ಅತಿಯಾಗಿಯೇ ಕಂಡುಬರುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ನೀರನ್ನು ವೃಥಾ ಪೋಲು ಮಾಡುವುದರಿಂದ ಸದ್ಯವೇ ಘೋರ ಪರಿಣಾಮ ಎದುರಿಸಬೇಕಾದ ಸ್ಥಿತಿ ಬರಬಹುದು. ನೀರಿನ ಮಿತಬಳಕೆ, ನೀರಿನ ಸಂರಕ್ಷಣೆ, ಜಾಗೃತಿ ಕಾರ್ಯಾಗಾರ ನಡೆಸುತ್ತಿರುವ ಆಡಳಿತ ವರ್ಗ ತಮ್ಮ ಕಣ್ಣೆದುರೇ ನೀರು ಪೋಲಾಗುತ್ತಿದ್ದರೂ ಯಾವುದೇ ಕ್ರಮ ವಹಿಸದೇ, ತಮ್ಮ ಕಾರ್ಯವಲ್ಲ ಎಂಬಂತೆ ನಿಶ್ಚಿಂತೆಯಿಂದ ಇದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಯಾಕೆ ನಿರ್ಲಕ್ಷ é?
ಪುರಸಭಾ ವ್ಯಾಪ್ತಿಯ ಈ ಸಂಪ್‌ ಅನ್ನು ಪುರಸಭೆ ನಿರ್ವಹಿಸಬೇಕಾಗಿದೆ. ಸರಕಾರ ನೀರಾವರಿ ಯೋಜನೆ ಹೆಸರಿನಲ್ಲಿ ಕೋಟಿ ಕೋಟಿ ರೂ. ಅನುದಾನ ಮೀಸಲಿರಿಸಿದ್ದರೂ ನೀರನ್ನು ಸಂಗ್ರಹಿಸುವ ಸಂಪ್‌, ಟ್ಯಾಂಕ್‌ ಅನ್ನು ವ್ಯವಸ್ಥಿತವಾಗಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವುದೇ ಅಚ್ಚರಿಯ ಸಂಗತಿ. ನೀರಾವರಿ ಇಲಾಖೆ, ಪುರಸಭೆ ಅಧಿಕಾರಿಗಳು ಮುಂಜಾಗ್ರತೆ ವಹಿಸುವಲ್ಲಿ ಉದಾಸೀನ ತೋರ್ಪಡಿಸುವುದು ಸರಿಯಲ್ಲ. ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.

ದುರಸ್ತಿಪಡಿಸಲಾಗುವುದು
ಪುರಸಭೆ ವತಿಯಿಂದ ಈಗಾಗಲೇ ಟ್ಯಾಂಕ್‌ ದುರಸ್ತಿಪಡಿಸುವಂತೆ ವಾಟರ್‌ ಸಪ್ಲೆ„ ಬೋರ್ಡ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಂಡಿಮಠದ 50 ಸಾವಿರ ಲೀ. ನೀರಿನ ಸಾಮರ್ಥ್ಯವಿರುವ ಸಂಪ್‌ ರಿಪೇರಿಗೆ 2.5 ಲಕ್ಷ ರೂ., 1 ಲಕ್ಷ ಲೀಟರ್‌ ಸಾಮರ್ಥ್ಯವಿರುವ ಸಂಪ್‌ಗೆ 6 ಲಕ್ಷ ರೂ. ಅಂದಾಜು ಪಟ್ಟಿ ತಯಾರಿಸಲಾಗಿದೆ. ಓವರ್‌ ಹೆಡ್‌ ಟ್ಯಾಂಕ್‌ ದುರಸ್ತಿಗೆ 3.80 ಲಕ್ಷ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು 2019-20 ಸಾಲಿನ ಅನುದಾನದಲ್ಲಿ ಹಣ ಕಾಯ್ದಿರಿಸಿ ದುರಸ್ತಿಪಡಿಸಲಾಗುವುದು.
-ಮೇಬಲ್‌ ಡಿ’ಸೋಜಾ, ಪುರಸಭೆ ಮುಖ್ಯಾಧಿಕಾರಿ

-ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.