ಎರಡೇ ವಾರಗಳಲ್ಲಿ 36 ಕಾರ್ಯಾಚರಣೆ; ಕಳಬಟ್ಟಿ  ಪತ್ತೆ

ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಅಬಕಾರಿ ಬೇಟೆ 

Team Udayavani, Mar 27, 2019, 12:05 PM IST

27-March-7

ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರ ಕಚೇರಿ.

ಬೆಳ್ತಂಗಡಿ : ಚುನಾವಣೆ ಹಿನ್ನೆಲೆಯಲ್ಲಿ ಎರಡೇ ವಾರಗಳಲ್ಲಿ 36 ಕಡೆ ತಾಲೂಕು ಅಬಕಾರಿ ಇಲಾಖೆ ಮಿಂಚಿನ ಕಾರ್ಯಾಚರಣೆ ನಡೆಸಿದೆ.
2018ರ ಮಾ. 10ರಂದು ಲೋಕಸಭಾ ಚುನಾವಣೆ ನೀತಿಸಂಹಿತೆ ಘೋಷಣೆ ಬಳಿಕ ಹೊಟೇಲ್‌, ಮನೆ ಹಾಗೂ ಇತರ ಕಡೆ ದಾಳಿ ನಡೆಸಿದೆ. ಈವರೆಗೆ ಮೂರು ಘೋರ ಪ್ರಕರಣಗಳು ದಾಖಲಾಗಿವೆ. ಘೋರ ಪ್ರಕರಣದಲ್ಲಿ ಅಕ್ರಮ ಎಂದು ಸಾಬೀತಾದವರ ಮೇಲೆ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಯಾಗಿಸಲಾಗುವುದು. 6 ಇತರ ಪ್ರಕರಣಗಳು ದಾಖಲಾಗಿವೆ. ಸಾಮಾನ್ಯ ಪ್ರಕರಣದ 6 ಮಂದಿಯನ್ನು ಠಾಣೆಯಲ್ಲಿ ಇತ್ಯರ್ಥಗೊಳಿಸಿ ಬಿಡುಗಡೆ ಮಾಡಲಾಗಿದೆ, 3 ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಶಿಕ್ಷೆ ವಿಧಿಸಲಾಗಿದೆ.
ತಾಲೂಕಿನ ವಿವಿಧೆಡೆ ಎರಡು ವಾರಗಳಲ್ಲಿ ನಡೆಸಿದ ಕಾರ್ಯಾಚರಣೆಗಳಲ್ಲಿ 7.790 ಲೀ. ಮದ್ಯ ವಶಪಡಿಸಿಕೊಳ್ಳಲಾಗಿದ್ದು, 110 ಲೀ. ಕೊಳೆ (ವೇಸ್ಟೇಜ್‌) ವಶಪಡಿಸಿ ನಾಶಮಾಡಲಾಗಿದೆ. ಇನ್ನುಳಿದಂತೆ 350 ಎಂಎಲ್‌ ಕಳ್ಳಬಟ್ಟಿ ವಶಪಡಿಸಿಕೊಂಡು ನಾಶಮಾಡಲಾಗಿದ್ದು, ಒಟ್ಟು 3,790 ರೂ. ಮೌಲ್ಯದ ಮದ್ಯ, ಕೊಳೆ ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣೆ ಘೋಷಣೆ ಎರಡು ದಿನ ಹಿಂದೆ ಮಾ. 8 ರಂದು 4.590 ಲೀ. ಮದ್ಯ ಹಾಗೂ 2.640 ಬಿಯರ್‌ ಮಾರಾಟ ಮಾಡಲು ಯತ್ನಿಸಿದ್ದನ್ನು ಪತ್ತೆಹಚ್ಚಲಾಗಿತ್ತು.
 ಕಳ್ಳಬಟ್ಟಿ ಸಾರಾಯಿ ಪತ್ತೆ
ಮಾ. 11ರಂದು ಕೊಕ್ಕಡದಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಸಲು ಗೇರುಹಣ್ಣು ಕೊಳೆ ದಾಸ್ತಾನು ಮಾಡಿರುವುದು ಪತ್ತೆಯಾಗಿತ್ತು. ಸುಮಾರು 50 ಲೀ. ಕೊಳೆ ಹಾಗೂ 0.350 ಲೀ. ಕಳ್ಳಬಟ್ಟಿ ಸಾರಾಯಿ ವಶಪಡಿಸಿ ನಾಶಪಡಿಸಲಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ  33 ಕಾರ್ಯಾಚರಣೆ
2018ರ ಮಾ. 27ರಿಂದ ಮೇ 18 ಚುನಾವಣೆ ಸಂದರ್ಭ ಹೊಟೇಲ್‌, ಮನೆ ಸಹಿತ ಒಟ್ಟು 33 ಕಡೆ ಕಾರ್ಯಾಚರಣೆ ನಡೆಸಲಾಗಿತ್ತು. ಇದರಲ್ಲಿ 3 ಘೋರ ಹಾಗೂ 1 ಸಾಮಾನ್ಯ ಪ್ರಕರಣ ದಾಖಲಿಸಲಾಗಿತ್ತು. ಈ ವೇಳೆ 68,046 ರೂ. ಮೌಲ್ಯದ 113.410 ಲೀಟರ್‌ ಅಕ್ರಮ ಬಿಯರ್‌ ಮತ್ತು 23.30 ಲೀಟರ್‌ ಮದ್ಯ ವಶಪಡಿಸಿಕೊಂಡು ನಾಶಪಡಿಸಲಾಗಿದೆ.
ಇಲಾಖೆಗಿಲ್ಲ ಸ್ವಂತ ಕಟ್ಟಡ
ಸರಕಾರಕ್ಕೆ ಅತಿ ಹೆಚ್ಚು ಆದಾಯ ತರುವ ಅಬಕಾರಿ ಇಲಾಖೆಗೆ ಇನ್ನೂ ಸ್ವಂತ ಕಟ್ಟಡವಿಲ್ಲ. ಕಳೆದ 10 ವರ್ಷಗಳಿಗಿಂತಲೂ ಹೆಚ್ಚು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿದೆ. ಮತ್ತೊಂದೆಡೆ ಅಬಕಾರಿ ವಾಹನ 3 ಲಕ್ಷ ಕಿ.ಮೀ. ಸಂಚರಿಸಿದ್ದು, ಯಾವುದೇ ಸಮಯದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಸರಕಾರ ಇತ್ತ ಗಮನ ಹರಿಸಬೇಕಾಗಿದೆ.
ಅನುಮತಿ ಪಡೆದಲ್ಲಿ ಲೈಸನ್ಸ್‌
ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮದ್ಯ ಸಾಗಾಟ ವೇಳೆ ಕಡ್ಡಾಯವಾಗಿ ಬಿಲ್‌ ಪಡೆದಿರಬೇಕು. ಅಕ್ರಮ ಮದ್ಯ ಪತ್ತೆಯಾದಲ್ಲಿ ಕಾನೂನು ಕ್ರಮ ಕೈಗೊಂಡು ಶಿಕ್ಷೆಗೆ ಗುರಿಪಡಿಸಲಾಗುವುದು. ಮದುವೆ ಸಹಿತ ಮನೆ ಕಾರ್ಯಕ್ರಮಗಳಿಗೆ ಮದ್ಯ ದಾಸ್ತಾನು ಮಾಡುವವರು ಅಬಕಾರಿ ಇಲಾಖೆಯಿಂದ ಅನುಮತಿ ಪಡೆದಲ್ಲಿ ಲೈಸನ್ಸ್‌ ನೀಡಲಾಗುತ್ತದೆ ಎಂದು ಅಬಕಾರಿ ನಿರೀಕ್ಷಕ ಗಿರೀಶ್‌ ಎಚ್‌.ಕೆ. ತಿಳಿಸಿದ್ದಾರೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.