ಬಿಜೆಪಿ ಅಭ್ಯರ್ಥಿ ಮಂಜು ವಿರುದ್ಧ ಪೌರ ಕಾರ್ಮಿಕರ ಪ್ರತಿಭಟನೆ


Team Udayavani, Mar 27, 2019, 12:58 PM IST

bjp-abyart

ಹಾಸನ: ಮಾಜಿ ಸಚಿವ, ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ತಮ್ಮ ಚುನಾವಣಾ ರಾಜಕಾರಣದ ಲಾಭಕ್ಕಾಗಿ ಪೌರ ಕಾರ್ಮಿಕರ ಪಾದಪೂಜೆಯ ಗಿಮಕ್‌ ಮಾಡಿದ್ದಾರೆ ಎಂದು ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಹೇಮಾವತಿ ಪ್ರತಿಮೆಯ ಬಳಿ ಸಿಐಟಿಯು ನೇತೃತ್ವದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮುನಿಸಿಪಲ್‌ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಧರ್ಮೇಶ್‌ ಆವರು,

ಎ.ಮಂಜು ಅವರು ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುವ ಮೊದಲು ಪೌರ ಕಾರ್ಮಿಕ ಚಂದ್ರು – ಅಶ್ವಿ‌ನಿ ದಂಪತಿ ಪಾದ ಪೂಜೆ ಮಾಡಿದ್ದಾರೆ. ಮಂಜು ಅವರ ಈ ಗಿಮಿಕ್‌ ಈಗಾಗಲೇ ಸಮಾಜದಲ್ಲಿ ಅಪಮಾನಕ್ಕೊಳಗಾಗಿರುವ ಪೌರ ಕಾರ್ಮಿಕರನ್ನು ವ ಮೂಲಕ ಅವರನ್ನು ಮತ್ತಷ್ಟು ಅವಮಾನ ಮಾಡಿದಂತಾಗಿದೆ. ಇದು ಖಂಡನೀಯ ಎಂದರು.

ಪೌರ ಕಾರ್ಮಿಕರ ಹಿತ ಕಾಪಾಡಿಲ್ಲ: ಮಾಜಿ ಸಚಿವ ಎ. ಮಂಜು ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅನುಸರಿಸಿದ್ದೇನೆ ಎಂದು ಹೇಳಿದ್ದಾರೆ. ಆದರೆ ತಾವು ಅಧಿಕಾರದಲ್ಲಿದ್ದಾಗ ಒಂದು ದಿನವಾದರೂ ಪೌರಕಾರ್ಮಿಕರ ಕಾಲೋನಿಗಳಿಗೆ ಹೋಗಲಿಲ್ಲ. ಅವರ ಕೆಲಸ ಕಾಯಂ ಮಾಡದೆ ಸುಪ್ರೀಂ ಕೋರ್ಟ್‌ ಆದೇಶದಂತೆ ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀತಿ ಜಾರಿ ಮಾಡದೆ, ಅವರಿಗೆ ವಾಸ ಮಾಡಲು ಉತ್ತಮ ವಸತಿಗಳು ಮತ್ತು ಉತ್ತಮ ಬಡಾವಣೆಗಳನ್ನು ನಿರ್ಮಿಸದೆ,

ಅನಾರೋಗ್ಯ ಮತ್ತು ಅವಮಾನಗಳಿಂದ ಜೀವನ ಸಾಗಿಸುತ್ತಿರುವ ಪೌರಕಾರ್ಮಿಕರಿಗೆ ಸ್ವಾಭಿಮಾನಿ ಹಾಗೂ ಘನತೆಯ ಬದುಕು ಕಲ್ಪಿಸುವ ಬದಲು ರಾಜಕೀಯದ ಆಟಕ್ಕೆ ಪೌರಕಾರ್ಮಿಕರ ಪಾದಪೂಜೆ ಮಾಡಿ ಅವರು ನರಕದ ಕೂಪದಲ್ಲಿ ಬದುಕಿರಬೇಕೆನ್ನುವುದು ನರೇಂದ್ರ ಮೋದಿ, ಎ. ಮಂಜು, ಬಿಜೆಪಿ ಮತ್ತು ಸಂಘ ಪರಿವಾರದ ಉದ್ದೇಶವಾಗಿದೆ ಎಂದು ಕಿಡಿ ಕಾರಿದರು.

ಪೌರ ಕಾರ್ಮಿಕರ ಸಂಕಷ್ಟ: ನರೇಂದ್ರ ಮೋದಿ ಸರ್ಕಾರ “ಸ್ವಚ್ಛ ಭಾರತ ಅಭಿಯಾನ’ ಎಂಬ ಹೆಸರಿನಲ್ಲಿ ಸಾವಿರಾರು ಕೋಟಿ ಸಾರ್ವಜನಿಕ ಹಣವನ್ನು ಖರ್ಚು ಮಾಡಿದೆ. ನಾಗರಿಕರಿಂದ ಸ್ವಚ್ಛಭಾರತ ಸೆಸ್‌ ಕಟ್ಟಿಸಿಕೊಳ್ಳುತ್ತಿದೆ. ಆದರೆ ಶೌಚಾಲಯ, ಶೌಚಾಲಯದ ಗುಂಡಿಗಳು, ಮ್ಯಾನ್‌ಹೋಲ್‌ ಮತ್ತು ಒಳಚರಂಡಿಗಳನ್ನು ಸ್ವಚ್ಛಮಾಡಲು ಅತ್ಯಾಧುನಿಕ ಯಂತ್ರಗಳನ್ನು ಬಳಸದೆ ಇಂದಿಗೂ ಪೌರಕಾರ್ಮಿಕರ ಕೈಗಳಿಂದಲೇ ಸ್ವಚ್ಛಗೊಳಿಸಲಾಗುತ್ತಿದೆ.

ಅವರಿಗೆ ಸುರಕ್ಷತಾ ಪರಿಕರಗಳನ್ನು ನೀಡಿಲ್ಲ. ಅವರ ಕೆಲಸ ಕಾಯಂ ಮಾಡಿ ಅವರಿಗೆ ಒಂದು ನ್ಯಾಯಯುತ ವೇತನ ನೀಡಿಲ್ಲ. ಅವರಿಗೆ ವಾಸಯೋಗ್ಯ ವಸತಿಗಳನ್ನು ನಿರ್ಮಿಸಿಕೊಟ್ಟಿಲ್ಲ. ಹಾಗಾದರೆ ಸಾವಿರಾರು ಕೋಟಿ ಸ್ವಚ್ಛತಾ ಅಭಿಯಾನದ ಹಣ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ: ಮನುವಾದದ ಪ್ರತಿಪಾದಕರಾದ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಅನಸರಿಸಿ ಎ. ಮಂಜು ಅವರು ಅಸ್ಪೃಶ್ಯರಾಗಿರುವ ಪೌರಕಾರ್ಮಿಕರನ್ನು ಮತ್ತಷ್ಟು ಅವಮಾನಿಸಿದ್ದಾರೆ ಎ.ಮಂಜು ಮತ್ತು ಬಿಜೆಪಿ ಮೇಲೆ ಚುನಾವಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಚುನಾವಣೆಯ ಆಟಗಳಿಗೆ ಪೌರಕಾರ್ಮಿಕರನ್ನು ಬಳಸಿಕೊಳ್ಳದಂತೆ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಬೇಕೆಂದೂ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸೇರಿದ್ದ ಪೌಕಾರ್ಮಿಕರು ‘ನಿಮ್ಮ ಕಳಂಕಿತ ಕೈಗಳಿಂದ ನಮ್ಮ ಪಾದಪೂಜೆ ಮಾಡಬೇಡಿ; ನಮ್ಮ ಕೆಲಸ ಕಾಯಂ ಮಾಡಿ’ ಎಂದು ಘೋಷಣೆ ಕೂಗಿದರು. ಕೆಪಿಆರ್‌ಎಸ್‌ನ ಜಿಲ್ಲಾಧ್ಯಕ್ಷ ಎಚ್‌.ಆರ್‌. ನವೀನ್‌ಕುಮಾರ್‌, ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್‌, ಎಸ್‌ಎಫ್ಐ‍ ಜಿಲ್ಲಾ ಜಂಟಿ ಕಾರ್ಯದರ್ಶಿ ವಿವೇಕ್‌, ಮುನಿಸಿಪಲ್‌ ಕಾರ್ಮಿರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ, ಜಿಲ್ಲಾ ಖಜಾಂಚಿ ಮಂಜುನಾಥ್‌ ಮತ್ತಿತರೆ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.