ಮಹಿಳೆಯರಿಗಾಗಿ ಸಖಿ ಮತಗಟ್ಟೆ
Team Udayavani, Mar 27, 2019, 12:58 PM IST
ಕೆಜಿಎಫ್: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಈ ಬಾರಿ ಮಹಿಳೆಯರಿಗಾಗಿ ಕಮ್ಮಸಂದ್ರ ಮತ್ತು ಇಟಿ ಬ್ಲಾಕ್ನಲ್ಲಿ ಸಖೀ ಮತಗಟ್ಟೆಗಳನ್ನು ತರೆಯಲಾಗುತ್ತಿದೆ ಎಂದು ನಗರಸಭೆ ಆಯುಕ್ತ ಆರ್.ಶ್ರೀಕಾಂತ್ ಹೇಳಿದರು.
ನಗರಸಭೆಯಲ್ಲಿ ಸ್ವೀಪ್ ಸಮಿತಿ ಸದಸ್ಯರು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಇಲ್ಲಿ ಕಾರ್ಯನಿರ್ವಹಿಸುವವರೆಲ್ಲರೂ ಮಹಿಳೆಯರೇ ಆಗಿರುವುದು ವಿಶೇಷ. ಅದೇ ರೀತಿಯಲ್ಲಿ ಅಂಗವಿಕಲರಿಗೂ ಪ್ರತ್ಯೇಕ ಮತಗಟ್ಟೆಯನ್ನು ಪ್ರಾರಂಭಿಸಲಾಗುವುದು. ಅಲ್ಲಿ ಕೂಡ ಅಂಗವಿಕಲ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು. ಈ ರೀತಿ ಹಲವು ವಿಧದಲ್ಲಿ ಹೆಚ್ಚಿನ ಮತದಾನವಾಗಲು ಪ್ರಯತ್ನ ನಡೆಸಲಾಗುತ್ತಿದೆ. ಸರ್ವರೂ ಸಹಕರಿಸಬೇಕು ಎಂದು ಹೇಳಿದರು.
ಎಲ್ಲಾ 234 ಮತಗಟ್ಟೆಗಳಲ್ಲಿ ವ್ಹೀಲ್ಚೇರ್ ನೀಡುತ್ತಿದ್ದೇವೆ. ನಗರ ಮಟ್ಟದಲ್ಲಿ ಮತದಾನ ಜಾಗೃತಿ ಮೂಡಿಸಲು ಹಲವು ವಿಧಾನದಲ್ಲಿ ಕೆಲಸ ಮಾಡಬೇಕಾಗಿದೆ. ಮತದಾನ ಮಾಡಲು ಆಂದೋಲನವನ್ನು ಸೂರಜ್ಮಲ್ ವೃತ್ತದಲ್ಲಿ ನಡೆಸುತ್ತೇವೆ. ಮತದಾರರಿಗೆ ಆಹ್ವಾನ ಪತ್ರ ನೀಡುತ್ತೇವೆ. ಹೆಚ್ಚಿನ ಮತದಾನವಾಗಲು ಎಲ್ಲಾ ರೀತಿಯ ತಂತ್ರಗಳನ್ನು ಅನುಸರಿಸಬೇಕು ಎಂದರು.
ಸ್ವೀಪ್ ಸಮಿತಿಯ ಉದ್ದೇಶ ಮತದಾನ ಮಾಡಲು ಏನೂ ಸಾಧ್ಯವೋ ಅಷ್ಟನ್ನೂ ಮಾಡಲಾಗುವುದು. ಸಂತೆಗಳಲ್ಲಿ ಭಾಗವಹಿಸಿ, ಪ್ರಚಾರ ಮಾಡಿ ಎಂದು ಸದಸ್ಯರಿಗೆ ತಿಳಿಸಿದರು. ನಗರಸಭೆ ಆವರಣದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಂಜೆ ಪಂಜಿನ ಮೆರವಣಿಗೆ ನಡೆಯಿತು. ಸ್ಕೂಲ್ ಆಫ್ ಮೈನ್ಸ್ನಲ್ಲಿ ಅರಿವು ಕಾರ್ಯಕ್ರಮ ಇರುತ್ತದೆ ಎಂದು ತಿಳಿಸಿದರು. ತಹಶೀಲ್ದಾರ್ ಕೆ.ರಮೇಶ್, ಅಶ್ವತ್ಥ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ