ನಾಗರಿಕ ಸೇವೆ ಪರೀಕ್ಷೆ ಎದುರಿಸಲು ಸಿದ್ಧರಾಗಿ


Team Udayavani, Mar 27, 2019, 1:05 PM IST

27-March-10
ನಾಗರಿಕ ಸೇವೆಗಳ ಪರೀಕ್ಷೆಗಳನ್ನು ಬರೆಯುವುದು ಎಂದರೆ ಕಬ್ಬಿಣದ ಕಡಲೆ ಎಂಬ ತಿಳುವಳಿಕೆ ಎಲ್ಲರಲ್ಲೂ ಇದೆ. ಆದರೆ ಕಷ್ಟ ಪಟ್ಟು ಓದಿದರೆ ಪರೀಕ್ಷೆ ಎದುರಿಸುವುದು ದೊಡ್ಡ ವಿಚಾರವಲ್ಲ ಎಂಬುದನ್ನು ಪರೀಕ್ಷೆಯಲ್ಲಿ ಉತ್ತೀರ್ಣರಾದ ಅನೇಕ ಮಂದಿ ಹೇಳುತ್ತಾರೆ.
ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವೆಗಳ ಪರೀಕ್ಷೆ (ಯುಪಿಎಸ್‌ಸಿ) ಪರೀಕ್ಷೆ ಎದುರಿಸಲು ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗುತ್ತದೆ. ಮೊದಲ ಬಾರಿಗೆ ಪೂರ್ವ ಭಾವಿ ಪರೀಕ್ಷೆ ಇರುತ್ತದೆ. ತಲಾ 200 ಅಂಕಗಳ ಎರಡು ಸಾಮಾನ್ಯ ಅಧ್ಯಯನ ಪ್ರಶ್ನೆ ಪತ್ರಿಕೆಗಳು ಇರುತ್ತದೆ. ಇವು ಬಹು ಆಯ್ಕೆ ವಸ್ತು ನಿಷ್ಠತೆಯ ಪ್ರಶ್ನೆಗಳು. ಸರಿಯಾದ ಉತ್ತರವನ್ನು ಪ್ರತ್ಯೇಕ ಹಾಳೆಯೊಂದರಲ್ಲಿ ಕೇವಲ ಗುರುತಿಸಬೇಕಾಗುತ್ತದೆ. ಇದು ಅರ್ಹತೆಯ ಪರೀಕ್ಷೆಯಾಗಿರುತ್ತದೆ. ಇಲ್ಲಿನ ಅಂಕಗಳನ್ನು ಅಂತಿಮ ರ್‍ಯಾಂಕ್‌ ನಿರ್ಧರಿಸಲು ಪರಿಗಣಿಸುವುದಿಲ್ಲ. ಬಳಿಕ ಮುಖ್ಯ ಪರೀಕ್ಷೆ ಇರುತ್ತದೆ. ಇದರಲ್ಲಿ ಐಚ್ಛಿಕ ವಿಷಯ ಹಾಗೂ ಸಾಮಾನ್ಯ ಅಧ್ಯಯನಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ. ಕೊನೆಯದಾಗಿ ಸಂದರ್ಶನ ಇರುತ್ತದೆ.
ಐಎಎಸ್‌, ಐಪಿಎಸ್‌ ಪರೀಕ್ಷೆಗಳ ಬಗ್ಗೆ ಎಲ್ಲರಿಗೂ ತಿಳಿದಿದ್ದು, ಐಇಎಸ್‌ ಹಾಗೂ ಐಎಸ್‌ಎಸ್‌ ಪರೀಕ್ಷೆಗಳ ಬಗ್ಗೆ ಹೆಚ್ಚು ಜನರಿಗೆ ಮಾಹಿತಿ ಇಲ್ಲ. ಇಂಡಿಯನ್‌ ಎಕಾನಾಮಿಕ್‌ ಸರ್ವಿಸ್‌ (ಐಇಎಸ್‌) ಪರೀಕ್ಷೆ ಬರೆದು ಉತ್ತೀರ್ಣರಾದಲ್ಲಿ ಆರ್ಥಿಕ ವಿಶ್ಲೇಷಣೆಗಳನ್ನು ನೀಡುವ ಕೆಲಸವನ್ನು ಮಾಡಲಾಗುತ್ತದೆ. ಯಾವುದೇ ಸರಕಾರಕ್ಕೆ ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದ ಸಲಹೆ ಸೂಚನೆಗಳನ್ನು ನೀಡುವ ಹಾಗೂ ಆಡಳಿತವನ್ನು ಬಲಿಷ್ಠಗೊಳಿಸಲು ಬೇಕಾದ ಸೂಚನೆಗಳನ್ನು ನೀಡುವ ಜವಾಬ್ದಾರಿ ಇವರಿಗೆ ಇರುತ್ತದೆ. ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಐಇಎಸ್‌ ಹಾಗೂ ಐಎಸ್‌ಎಸ್‌ (ಇಂಡಿಯನ್‌ ಸ್ಟಟಿಕಲ್‌ ಸರ್ವಿಸ್‌) ಪರೀಕ್ಷೆಗಳನ್ನು ಆಯೋಜಿಸುತ್ತದೆ. ಮೊದಲು ಲಿಖಿತ ಪರೀಕ್ಷೆ ಬಳಿಕ ಸಂದರ್ಶನ ಇರುತ್ತದೆ. ಎರಡರಲ್ಲೂ ಉತ್ತೀರ್ಣರಾದವರು ಉದ್ಯೋಗಕ್ಕೆ ಅರ್ಹರಾಗಿರುತ್ತಾರೆ.
ಹೆಚ್ಚಾಗಿ ಒಂದು ಸಲ ಪರೀಕ್ಷೆ ಬರೆದು ಉತ್ತೀರ್ಣರಾಗಿಲ್ಲ ಎಂದು ಕೈ ಚೆಲ್ಲುವವರು ಅನೇಕರಿರುತ್ತಾರೆ. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿರಂತರ ಬರೆಯುತ್ತಿದ್ದರೆ ಮಾತ್ರ ನಮ್ಮ ಅನುಭವ ಹೆಚ್ಚಾಗುವುದು. ಜತೆಗೆ ಪರೀಕ್ಷೆ ಎದುರಿಸುವ ಕಲೆ ತಿಳಿಯುವುದು. ಹೀಗಾಗಿ ಕೇಂದ್ರ ಲೋಕ ಸೇವಾ ಆಯೋಗ ನಡೆಸುವ ಪರೀಕ್ಷೆಗಳನ್ನು ನಿರಂತರ ಎದುರಿಸುತ್ತಿದ್ದರೆ ಮಾತ್ರ ಉತ್ತಮ ಅಂಕ ಗಳಿಕೆ ಸಾಧ್ಯವಾಗುತ್ತದೆ.
ನಿರ್ದಿಷ್ಟ ಗುರಿ ಇರಲಿ
ಸತತ ಪ್ರಯತ್ನ, ನಿಖರತೆ, ನಿರ್ದಿಷ್ಟ ಗುರಿ ಇದ್ದರೆ ಇಂತಹ ಪರೀಕ್ಷೆಗಳನ್ನು ಎದುರಿಸಬಹುದು. ಯುಪಿಎಸ್‌ಸಿ, ಐಎಸ್‌ಎಸ್‌, ಐಇಎಸ್‌ ಪರೀಕ್ಷೆಗಳನ್ನು ಎದುರಿಸಲು ಕೋಚಿಂಗ್‌ ಗೆ ಹೋಗಬೇಕು ಎಂದೆನಿಲ್ಲ. ಕೋಚಿಂಗ್‌ನಲ್ಲಿ ಟಿಪ್ಸ್‌ ಗಳು ಮಾತ್ರ ಸಿಗುತ್ತವೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾದವರು ಕಷ್ಟ ಪಟ್ಟು ಪರೀಕ್ಷೆ ಎದುರಿಸಬೇಕು.
– ವಿಕ್ರಮ್‌ ರೈ, ಸ್ಪರ್ಧಾತ್ಮಕ
ಪರೀಕ್ಷೆ ತರಬೇತುದಾರ 
ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.