ವಿಜೃಂಭಣೆಯ ಲಕ್ಷ್ಮೀದೇವಿ ಬಂಡಿ ಉತ್ಸವ


Team Udayavani, Mar 28, 2019, 5:14 PM IST

man
ಪಾಂಡವಪುರ: ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದೇವತೆ ಶ್ರೀಲಕ್ಷ್ಮೀದೇವಿ ಬಂಡಿ ಉತ್ಸವ ಸಂಭ್ರಮದಿಂದ ನೆರವೇರಿತು.
ಜಾತ್ರೆಯಲ್ಲಿ ಹಾರೋಹಳ್ಳಿ- ಶಂಭೂವಿನಹಳ್ಳಿ, ಕೆ.ಬೆಟ್ಟಹಳ್ಳಿ, ಡಾಮಡಹಳ್ಳಿ, ಹುಲ್ಕೆರೆ ಗ್ರಾಮದ ಎತ್ತಿನ ಬಂಡಿಗಳ ವಿಶೇಷ
ಉತ್ಸವ ಮೆರಗು ನೀಡಿತು. ಜಾತ್ರೆಯಲ್ಲಿ ಭಕ್ತರು ಶಿಳ್ಳೆ ಹೊಡೆದು, ಕುಣಿದು ಕುಪ್ಪಳಿಸಿದರು.
ಪ್ರತಿವರ್ಷದಂತೆ ಜಾತ್ರೆಯ ಹಿಂದಿನ ದಿನ ಮಂಗಳವಾರ ರಾತ್ರಿಯೆ ಹಣ್ಣಿನ ಹೆಡಿಗೆಗಳನ್ನು ಎತ್ತಿನ ಬಂಡಿಯ ಮೂಲಕ
ಗ್ರಾಮದ ಶ್ರೀಲಕ್ಷ್ಮೀದೇವಿಯ ದೇವಸ್ಥಾನಕ್ಕೆ ತಂದು ಪದ್ಧತಿಯಂತೆ ಪೂಜಾ ಕಾರ್ಯದಲ್ಲಿ ಭಾಗಿಯಾದರು.
ಭಕ್ತರಿಂದ ಬಾಯಿಬೀಗ: ಜಾತ್ರಾ ಮಹೋತ್ಸವದಲ್ಲಿ ನೂರಾರು ಭಕ್ತರು ಬಾಯಿಬೀಗ ಹಾಕಿಕೊಂಡು ದೇವಸ್ಥಾನದು ಸುತ್ತ ಮೂರು ಪ್ರದಕ್ಷಿಣೆ ಸುತ್ತಿ ದೇವರ ಹರಕೆ ತೀರಿಸಿದರು. ಸುತ್ತಮುತ್ತಲಿನ ಗ್ರಾಮಗಳಿಂದ ಎತ್ತಿನ ಬಂಡಿ ಹೊಡೆದುಕೊಂಡು ಬಂದಿರುವಂತಹ ಭಕ್ತರು ಶ್ರೀಲಕ್ಷ್ಮೀದೇವಿ ದೇವಸ್ಥಾನವನ್ನು ಮೂರು ಸುತ್ತು ಪ್ರದಕ್ಷಿಣೆ ಮಾಡಿ, ಬಳಿಕ ಎತ್ತಿನ ಬಂಡಿಯಲ್ಲಿ ತಂದಿದ್ದ ಹೂವು, ಹಣ್ಣು ದೇವಸ್ಥಾನಕ್ಕೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಹಣ್ಣು ದವನ ಸಮರ್ಪಣೆ: ಜಾತ್ರೆಯ ಅಂಗವಾಗಿ ಬುಧವಾರ ಕೆ.ಬೆಟ್ಟಹಳ್ಳಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ
ಮುಂದೆ ಅಪಾರ ಜನಸೋಮ ಬಂದು ಸೇರಿದ್ದರು. ಮೊದಲು ನಾಲ್ಕು ಗ್ರಾಮದ ದೇವರ ಪೂಜೆ ಹೊತ್ತು
ಲಕ್ಷ್ಮೀದೇವಿಯ ದೇವಸ್ಥಾನದ ಸುತ್ತ ಮೆರವಣಿಗೆ ನಡೆಸಲಾಗುತ್ತದೆ. ಈ ವೇಳೆ ಭಕ್ತರು ಹಣ್ಣು ದವನ ದೇವರಿಗೆ
ಸಮರ್ಪಿಸಿ ಪೂಜೆ ಸಲ್ಲಿಸಿದರು.  ಪೂಜಾ ಕುಣಿತ, ಪೂಜಾ ವಿಧಾನಗಳು ಮುಗಿಯುತ್ತಿದ್ದಂತೆಯೇ ಜಾತ್ರೆಯ ಮುಖ್ಯಭಾಗವಾದ
ಎತ್ತಿನ ಬಂಡಿ ಉತ್ಸವ ದೇವರಗುಡ್ಡರು ಮುಂದೆ ನಡೆಸುತ್ತಿದ್ದಾಗ ಯುವಕರು ಪಟಾಕಿ ಸಿಡಿಸಿ ಊಘೇ ಊಘೇ ಎಂದು ಕೂಗಿದರು. ಎತ್ತುಗಳು ಬಂಡಿಗಳನ್ನು ಹೊತ್ತು ಲಕ್ಷ್ಮೀದೇವಿ ದೇವಸ್ಥಾನದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಿದವು.
ಬಂಡಿ ಉತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮನ್ನೆಚ್ಚರಿಕೆ ಕ್ರಮ  ವಹಿಸಿದರು. ಬಳಿಕ ಬಂಡಿ ಉತ್ಸವ ಭಕ್ತರು ತಮ್ಮ ತಮ್ಮ ಊರಿಗೆ ತೆರಳಿದರು ಬಳಿಕ ಲಕ್ಷ್ಮೀದೇವಿ ಜಾತ್ರೆಗೆ ತೆರೆಬಿದ್ದಿತು.
ಜಾತ್ರಾ ಮಹೋತ್ಸವಕ್ಕೆ ಕೆ.ಬೆಟ್ಟಹಳ್ಳಿ ಗ್ರಾಮದ ಅಕ್ಕಪಕ್ಕದ ಗ್ರಾಮಗಳಾದ ಹಾರೋಹಳ್ಳಿ, ಎಂ.ಬೆಟ್ಟಹಳ್ಳಿ, ಜಾಗಶೆಟ್ಟಹಳ್ಳಿ,
ವಡ್ಡರಹಳ್ಳಿ, ಹರವು, ಅರಳಕುಪ್ಪೆ, ಡಾಮಡಹಳ್ಳಿ, ಶಂಭೂನಹಳ್ಳಿ ಮತ್ತು ಹುಲ್ಕೆರೆ, ಹುಲ್ಕರೆಕೊಪ್ಪಲು, ಶ್ಯಾದನಹಳ್ಳಿ, ಗ್ರಾಮಗಳು ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಗ್ರಾಮಗಳಿಂದ ಸಾವರಾರು ಭಕ್ತರು ಆಗಮಿಸಿ ಜಾತ್ರೆಯನ್ನು
ಯಶಸ್ವಿಗೊಳಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.