ತುಳುನಾಡ ಸೇವಾ ಸಮಾಜ ಮೀರಾ-ಭಾಯಂದರ್‌ ಜಾನಪದ ನೃತ್ಯ ಸ್ಪರ್ಧೆ-ಸಮ್ಮಾನ


Team Udayavani, Mar 28, 2019, 5:57 PM IST

2703mum03

ಮುಂಬಯಿ: ಜಾತಿ, ಮತ, ಪಂಗಡಗಳನ್ನು ಮೀರಿ ನಿಂತ ತುಳು ಭಾಷೆಗೆ ಜನರನ್ನು ಸಂಘಟಿಸುವ ವಿಶೇಷ ಶಕ್ತಿ ಇದೆ. ಭಾರತೀಯ ಸಂಸ್ಕೃತಿಯೊಂದಿಗೆ ಸಮ್ಮಿಲಿತಗೊಂಡಿರುವ ಮನುಷ್ಯನ ವಿಕಾಸಕ್ಕೆ ಸಹಾಯವಾಗುವಂತಹ ಗುಣವನ್ನು ತುಳು ಸಂಸ್ಕೃತಿ ಹೊಂದಿದೆ.. ತುಳುವರು ಪ್ರಕೃತಿ ಮತ್ತು ಇತರ ಜೀವಿಗಳ ಸಂಬಂಧಗಳನ್ನು ನಂಬಿಕೆ, ನಡವಳಿಕೆ, ಆಚರಣೆಗಳ ಮೂಲಕ ಇಂದಿನ ಬದಲಾವಣೆಯ ಸಮಯದಲ್ಲೂ ಉಳಿಸಿಕೊಂಡಿ¨ªಾರೆ ಎಂದು ಜನಪ್ರಿಯ ಸಂಘಟಕ, ಬಂಟ್ಸ್‌ ಫೋರಂನ ಮೀರಾ ಭಾಯಂದರ್‌ ಇದರ ಸ್ಥಾಪಕ ಅಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ ತಿಳಿಸಿದರು.

ಮಾ. 23ರಂದು ಸಂಜೆ ಮೀರಾರೋಡು ಪೂರ್ವದ ಜಹಗೀಡ್‌ ವೃತ್ತದ ಸಮೀಪದ ನಾರಾಯಣ ಗುರು ಸಭಾಗೃಹದಲ್ಲಿ ತುಳುನಾಡ ಸೇವಾ ಸಮಾಜ ಮೀರಾ ಭಾಯಂದರ್‌ ಇದರ ಸಂಸ್ಥಾಪಕ ದಿನಾಚರಣೆ, ವಿಶ್ವ

ಮಹಿಳಾ ದಿನಾಚರಣೆ, ಅರಸಿನ ಕುಂಕುಮ, ಸಮ್ಮಾನ ಮತ್ತು ಜಾನಪದ ನೃತ್ಯ ಸ್ಪರ್ಧೆಯ ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಆರಾಧನೆಗಳ ಬೀಡಾಗಿರುವ ತುಳುನಾಡು ಮಾನವೀಯ ಸಂಬಂಧಗಳ ಕೊಂಡಿಯಾಗಿದೆ. ಶ್ರೀಮಂತ ಬದುಕಿನ ತುಳು ಸಂಸ್ಕೃತಿಯನ್ನು ಶಾಶ್ವತಗೊಳಿಸುವ ತುಳುನಾಡ ಸೇವಾ

ಸಮಾಜದ ದುಡಿಮೆಗೆ ನಾವೆಲ್ಲ ಕೈ

ಜೋಡಿಸೋಣ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜರಗಿದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಮೀರಾ ಭಾಯಂದರ್‌ ಶಾಖೆ ಪ್ರಥಮ ಸ್ಥಾನ ಪಡೆದುಕೊಂಡಿತು. ಬಿಲ್ಲವರ ಅಸೋಸಿಯೋಶನ್‌ ಮಂಬಯಿ ಇದರ ಮೀರಾರೋಡ್‌ ಸ್ಥಳೀಯ ಸಮಿತಿಯು ದ್ವಿತೀಯ ಸ್ಥಾನಕ್ಕೆ ಭಾಜನವಾಯಿತು. ಬಂಟ್ಸ್‌ ಪೋರಂ ಮೀರಾ ಭಾಯಂದರ್‌ ಮೂರನೇ ಸ್ಥಾನವನ್ನು ತನ್ನದಾಗಿಸಿಕೋಡಿತು. ಚಿಣ್ಣರ ಬಿಂಬ ಮಕ್ಕಳ ಪಾಲಕರ ಭಾಯಂದರ್‌ ಶಿಬಿರ, ವಿಶ್ವ ಡಾನ್ಸ್‌ ಆಕಾಡೆಮಿ ಭಾಯಂದರ್‌ ಮತ್ತು ಕರ್ನಾಟಕ ಮಹಾಮಂಡಳ ಮೀರಾ ಭಾಯಂದರ್‌ ತಂಡಕ್ಕೆ ಸಮಾಧಾನಕರ ಬಹುಮಾನದೊಂದಿಗೆ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಮಾನವ ಹಕ್ಕುಗಳ ಅಧ್ಯಕ್ಷ, ಸಮಾಜ ರತ್ನ, ಲಯನ್‌ ಡಾ| ಶಂಕರ್‌ ಕೆ. ಟಿ. ವಹಿಸಿದ್ದರು, ಮುಖ್ಯ ಅತಿಥಿಯಾಗಿ ಕರ್ನಾಟದ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ವಸಾಯಿ ಇದರ ಕಾರ್ಯಾಧ್ಯಕ್ಷ ಭಾಸ್ಕರ ಕೆ. ಶೆಟ್ಟಿ, ಗೌರವ ಅತಿಥಿಯಾಗಿ ಮುಂಬಯಿ ಬಿಲ್ಲವರ ಅಸೋಸಿಯೇಶನಿನ ಮಾಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಶಕುಂತಲಾ ಕೋಟ್ಯಾನ್‌, ಮುಂಬಯಿ ಬಿಲ್ಲವರ ಅಸೋಸಿಯೇಶನಿನ ಮಾಹಿಳಾ ವಿಭಾಗದ ಮಾಜಿ ಉಪ ಕಾರ್ಯಾಧ್ಯಕ್ಷೆ ವಿಲಾಸಿನಿ ಸಾಲ್ಯಾನ್‌, ಉದ್ಯಮಿ ಶಂಕರ ಪೂಜಾರಿ, ಸಮ್ಮಾನಿತರಾದ ರಂಗ ಭೂಮಿ ಕಲಾವಿದೆಯರಾದ ಪ್ರತಿಮಾ ಬಂಗೇರ ಮತ್ತು ಸುನೀತಾ ಎ. ಸುವರ್ಣ, ಸಮಾಜ ಸೇವಕಿ ವಾಣಿ ಡಿ. ಶೆಟ್ಟಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಜನ ತರಬೇತಿ ನೀಡಿದ ಭಾರತಿ ಉಡುಪ ಅವರನ್ನು ಗುರು ಕಾಣಿಕೆಯೊಂದಿಗೆ ಸತ್ಕರಿಸಲಾಯಿತು.

ಸಮ್ಮಾನ ಪತ್ರವನ್ನು ಕುಶಲಾ ಎಸ್‌ ಶೆಟ್ಟಿ, ರೋಹಿಣಿ ರೈ, ಶಾಲಿನಿ ಶೆಟ್ಟಿ ವಾಚಿಸಿದರು. ತುಳುನಾಡ ಸೇವಾ ಸಮಾಜದ ಅಧ್ಯಕ್ಷ ಡಾ|ರವಿರಾಜ ಸುವರ್ಣ ಸ್ವಾಗತಿಸಿ ಪರಿಚಯಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಮಿತಾ ಎಸ್‌. ಶೆಟ್ಟಿ ಅವರು ಸಿದ್ದಿ ಸಾಧನೆಗಳ ಬಗ್ಗೆ ವಿವರಿಸಿದರು. ಗೌರವಾಧ್ಯಕ್ಷ ಶಂಭು ಕೆ. ಶೆಟ್ಟಿ, ಕಾರ್ಯದರ್ಶಿ ಶೋಭಾ ಉಡುಪ, ಕೋಶಾಧಿಕಾರಿ ರವೀಂದ್ರ ಶೆಟ್ಟಿ ಸೂಡ, ಪದಾಧಿಕಾರಿಗಳಾದ ಲೀಲಾ ಡಿ. ಪೂಜಾರಿ, ರವಿ ಶೆಟ್ಟಿ ಶೃಂಗೇರಿ, ಬಿ. ಕೆ. ಶೆಟ್ಟಿ, ದಾûಾಯಿಣಿ , ರಾಮಚಂದ್ರ ಉಚ್ಚಿಲ್‌, ಶೈಲೇಶ್‌ ಉದ್ಯಾವರ ಅವರು ಅತಿಥಿಗಳನ್ನು ಗೌರವಿಸಿದರು.

ಸತ್ಯಪಾಲ್‌ ರೈ ಕಾರ್ಯಕ್ರಮ ನಿರ್ವಹಿಸಿ ದರು. ತೀರ್ಪುಗಾರರಾಗಿ ವಿನಯಾ ಭಟ್‌ ಮತ್ತು ಅನಿಲ್‌ ಸಸಿಹಿತ್ಲು ಸಹಕರಿಸಿದರು. ಪದಾಧಿಕಾರಿಗಳಾದ ವಸಂತ ಶೆಟ್ಟಿ, ನಾರಾಯಾಣ ಮೂಡಬಿದಿರೆ, ಜಯಪ್ರಕಾಶ್‌ ಪೂಜಾರಿ, ಜಯಾಲಕ್ಷ್ಮೀ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಭಜನೆ, ಅರಸಿನ ಕುಂಕುಮ, ವಿಜಯ ಶೆಟ್ಟಿ ಮೂಡುಬೆಳ್ಳೆ ಅವರಿಂದ ಸುಗಮ ಸಂಗೀತ, ವೈವಿಧ್ಯಮಯ ನೃತ್ಯ ಪ್ರದರ್ಶನಗೊಂಡಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.