ಬಾಹ್ಯಾಕಾಶ ತ್ಯಾಜ್ಯದ ಬಗ್ಗೆ ಅಮೆರಿಕ, ವಿಶ್ವಸಂಸ್ಥೆ ಕಳವಳ

ಬಾಹ್ಯಾಕಾಶ ತ್ಯಾಜ್ಯ ವಿಲೇವಾರಿಯ ನಿಯಮಾವಳಿ ಪಾಲನೆಗೆ ವಿಶ್ವಸಂಸ್ಥೆ ಸಲಹೆ

Team Udayavani, Mar 29, 2019, 6:17 AM IST

s-11

ಹೊಸದಿಲ್ಲಿ: ಶತ್ರುಗಳ ಉಪಗ್ರಹವನ್ನು ಬಾಹ್ಯಾಕಾಶದಲ್ಲೇ ಹೊಡೆದುರುಳಿಸುವ ತಂತ್ರಜ್ಞಾನ ಅಳವಡಿಸಿಕೊಂಡಿರುವುದನ್ನು ಭಾರತ ಜಗಜ್ಜಾಹೀರು ಮಾಡಿದ ಬೆನ್ನಿಗೆ, ಅಮೆರಿಕ ಹಾಗೂ ವಿಶ್ವಸಂಸ್ಥೆ, ಬಾಹ್ಯಾಕಾಶ ತ್ಯಾಜ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿವೆ.

“ಮಿಷನ್‌ ಶಕ್ತಿ’ (ಉಪಗ್ರಹ ಧ್ವಂಸ ತಂತ್ರಜ್ಞಾನ) ತಂತ್ರಜ್ಞಾನವನ್ನು ಅಳವಡಿಸಿಕೊಂಡ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದರು. ಇದಕ್ಕೆ ಗುರುವಾರ ಪ್ರತಿಕ್ರಿಯಿಸಿರುವ ಅಮೆರಿಕ, “ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತದೊಂದಿಗಿನ ಬಾಂಧವ್ಯ ಹಾಗೂ ಸಹಕಾರಗಳನ್ನು ಅಮೆರಿಕ ಎಂದೆಂದಿಗೂ ಗೌರವಿಸುತ್ತದೆ. ಆದರೆ, ಭಾರತದ ಇತ್ತೀಚಿನ ನಡೆಯಿಂದ ಉಂಟಾಗಿರುವ ಬಾಹ್ಯಾಕಾಶ ತ್ಯಾಜ್ಯದ ಬಗ್ಗೆ ಕಳವಳ ಉಂಟಾಗಿದೆ’ ಎಂದು ಹೇಳಿದೆ.

ಇನ್ನು, ವಿಶ್ವಸಂಸ್ಥೆಯ ನಿಶ್ಶಸ್ತ್ರೀಕರಣ ಸಂಶೋಧನಾ ಸಂಸ್ಥೆ (ಯುಎನ್‌ಐಡಿಐಆರ್‌) ಸಹ ಇದೇ ಮಾದರಿಯ ಆತಂಕ ವ್ಯಕ್ತಪಡಿಸಿದ್ದು, “ಉಪಗ್ರಹಗಳನ್ನು ಧ್ವಂಸ ಮಾಡುವ ತಂತ್ರಜ್ಞಾನ ಹೊಂದುವ ದೇಶ ಬಾಹ್ಯಾಕಾಶ ತ್ಯಾಜ್ಯಗಳ ನಿಗ್ರಹದ ಬಗ್ಗೆ ರೂಪಿಸಲಾಗಿರುವ ನಿಯಮಾವಳಿಗಳನ್ನು ಪಾಲಿಸಬೇಕು. ನಿಯಮಗಳನ್ನು ಪಾಲಿಸುವುದರಿಂದ ಇತರ ದೇಶಗಳ ಉಪಗ್ರಹಗಳಿಗೆ ಆಗುವ ತೊಂದರೆಯನ್ನು ಹಾಗೂ ಇತರ ದೇಶಗಳಲ್ಲಿ ಉಂಟಾಗುವ ಕಳವಳಗಳನ್ನು ತಪ್ಪಿಸಬಹುದು’ ಎಂದು ಹೇಳಿದೆ. ಈ ಕುರಿತು ಬುಧವಾರವೇ ಸ್ಪಷ್ಟನೆ ನೀಡಿದ್ದ ಭಾರತದ ವಿದೇಶಾಂಗ ಇಲಾಖೆ, “ಪರೀಕ್ಷೆಯನ್ನು ಕೆಳಮಟ್ಟದಲ್ಲಿ ಮಾಡಲಾಗಿದ್ದು, ಬಹುತೇಕ ತ್ಯಾಜ್ಯಗಳು ಕ್ರಮೇಣ ಕೆಲವು ವಾರಗಳಲ್ಲೇ ಭೂಮಿಗೆ ಬೀಳಲಿವೆ’ ಎಂದು ಹೇಳಿದೆ.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.