ವಿವಾದಕ್ಕೆ ಗುರಿಯಾಗಿದ್ದ ನಿಖಿಲ್‌ ನಾಮಪತ್ರ


Team Udayavani, Mar 29, 2019, 1:07 PM IST

vividakke

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‌ ಕುಮಾರಸ್ವಾಮಿ ನಿಯಮಬಾಹಿರವಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದು ವಿವಾದ ಸೃಷ್ಟಿಸಿತ್ತು.

ನಿಖಿಲ್‌ ನಾಮಪತ್ರ ಸಲ್ಲಿಸಿರುವ ಫಾರಂ ನಂ.26ರಲ್ಲಿರುವ ನೂನ್ಯತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಚುನಾವಣಾ ಏಜೆಂಟ್‌ ಮದನ್‌, ನಿಖಿಲ್‌ ಉಮೇದುವಾರಿಕೆಯಲ್ಲಿ ಫಾರಂ ನಂ.26 ನಿಯಮಬದ್ಧವಾಗಿಲ್ಲದ ಕಾರಣ ನಾಮಪತ್ರ ತಿರಸ್ಕರಿಸಬೇಕು ಎಂದು ನವದೆಹಲಿಯ ಚುನಾವಣಾ ಆಯುಕ್ತರು, ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಏನಿದು ಆಕ್ಷೇಪ?: ಬುಧವಾರ ನಾಮಪತ್ರ ಪರಿಶೀಲನೆ ಕಾರ್ಯ ನಡೆಯುತ್ತಿರುವ ಸಮಯದಲ್ಲಿ ನಿಖಿಲ್‌ ಸಲ್ಲಿಸಿರುವ ನಾಮಪತ್ರದ ಫಾರಂ ನಂ.26 ಅಫಿಡೆವಿಟ್‌ ನಿಯಮಬದ್ಧವಾಗಿಲ್ಲ ಎಂದು ಕಂಡುಬಂದಿದೆ. ಈ ವಿಷಯವನ್ನು ಸುಮಲತಾ ಪರ ಚುನಾವಣಾ ಏಜೆಂಟ್‌ ಮದನ್‌, ರಿಟರ್ನಿಂಗ್‌ ಆಫೀಸರ್‌ ಗಮನಕ್ಕೆ ತಂದು ಅಲ್ಲೇ ಆಕ್ಷೇಪಣೆ ಸಲ್ಲಿಸಿದ್ದಾರೆ.

ಈ ಆಕ್ಷೇಪಣೆ ನಡುವೆಯೂ ಚುನಾವಣಾಧಿಕಾರಿಗಳು ನಿಖಿಲ್‌ ನಾಮಪತ್ರವನ್ನು ಸಿಂಧು ಎಂದು ಘೋಷಿಸಿದ್ದರು. ನಾಮಪತ್ರ ಪರಿಶೀಲನೆ ವೇಳೆ ಈ ಲೋಪವನ್ನು ನಮಗೆ ಯಾರೂ ತೋರಿಸಲಿಲ್ಲ. ಅಂತಿಮವಾಗಿ ನೋಟಿಸ್‌ ಬೋರ್ಡ್‌ಗೆ ಹಾಕಿದಾಗ ಇದು ನಮ್ಮ ಗಮನಕ್ಕೆ ಬಂದಿತು ಎಂದು ತಿಳಿಸಿರುವ ಮದನ್‌, ಫಾರಂ ನಂ.26ನ ಮಾದರಿಯಲ್ಲಿ 5 ಕಲಂ ಇದ್ದು, ನಿಖಿಲ್‌ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಕೇವಲ 2 ಕಲಂ ಮಾತ್ರ ಭರ್ತಿ ಮಾಡಿ, ಉಳಿದ ಇನ್ನು 3 ಕಲಂನ್ನು ಖಾಲಿ ಬಿಟ್ಟಿದ್ದರು. ಅದಕ್ಕಾಗಿ ಈ ನಾಮಪತ್ರವನ್ನು ಅಸಿಂಧು ಎಂದು ಘೋಷಿಸಬೇಕು ಎಂದು ಮದನ್‌ ಚುನಾವಣಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ವಿಡಿಯೋ ಕ್ಲಿಪ್ಪಿಂಗ್‌: ಈ ದೂರಿನ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಗುರುವಾರ ರಿಟರ್ನಿಂಗ್‌ ಆಫೀಸರ್‌ ಹಾಗೂ ಅಬ್ಸರ್‌ವರ್‌ಗಳ ಸಭೆ ಕರೆದು ನಾಮಪತ್ರ ಪರಿಶೀಲನೆ ಕಾರ್ಯ ಕುರಿತಂತೆ ವಿವರಣೆ ನೀಡಿದರೂ ಅದನ್ನು ಒಪ್ಪದ ಮದನ್‌, ನಾಮಪತ್ರ ಪರಿಶೀಲನೆ ವೇಳೆ ತೆಗೆದಿರುವ ವಿಡಿಯೋ ಕ್ಲಿಪ್ಪಿಂಗ್‌ ನೀಡುವಂತೆ ಮನವಿ ಮಾಡಿದ್ದರು.

ಇನ್ನೊಮ್ಮೆ ಪರಿಶೀಲಿಸಿ: ನಾಮಪತ್ರ ಪರಿಶೀಲನೆ ಸಮಯದಲ್ಲೇ ನಿಖಿಲ್‌ ಸಲ್ಲಿಸಿರುವ ನಾಮಪತ್ರದ ಫಾರಂ ನಂ.26ನಲ್ಲಿ ಆಗಿರುವ ಲೋಪವನ್ನು ಗುರುತಿಸಿ ಅದನ್ನು ತಿರಸ್ಕರಿಸಬೇಕು ಎಂದು ಆಕ್ಷೇಪಣೆ ಸಲ್ಲಿಸಿದ್ದೇನೆ. ಆದರೆ, ಜಿಲ್ಲಾ ಚುನಾವಣಾಧಿಕಾರಿಗಳು ಬುಧವಾರ ರಾತ್ರಿ 10.50ಕ್ಕೆ ನೋಟಿಸ್‌ ಕಳುಹಿಸಿದ್ದು, ಅದರಲ್ಲಿ ನೀವು ಪರಿಶೀಲನೆ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ನಾಮಪತ್ರ ಪರಿಶೀಲನೆ ಸಮಯದಲ್ಲೇ ನಾವೇ ಈ ವಿಷಯವಾಗಿ ಆಕ್ಷೇಪಣಾ ಅರ್ಜಿ ಬರೆದುಕೊಟ್ಟಿದ್ದೇವೆ.

ಅದಕ್ಕೆ ಅಕ್ನಾಡ್ಜ್ಮೆಂಟ್‌ ಕೂಡ ನೀಡಿದ್ದೀರಿ. ಇನ್ನೊಮ್ಮೆ ಪರಿಶೀಲಿಸಿ ಉತ್ತರ ನೀಡುವಂತೆ ಮದನ್‌ ಕೋರಿಕೆ ಇಟ್ಟಿದ್ದಾರೆ. ಇದರ ಜೊತೆಗೆ ನಾಮಪತ್ರ ಪರಿಶೀಲನೆ ಕಾರ್ಯದ ಸಂಪೂರ್ಣ ವಿಡಿಯೋ ಕೊಡಿ. ನಾವೂ ನೋಡ್ತೇವೆ. ಆಗ ನಿಜವೋ, ಸುಳ್ಳೋ ಎನ್ನುವುದು ಗೊತ್ತಾಗಲಿದೆ ಎಂದು ತಿಳಿಸಿದ್ದೇವೆ. ಅದಕ್ಕೆ ನೋಡಲ್‌ ಆಫೀಸರ್‌ ಅನುಮತಿ ಪಡೆದು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಫಾರ್ಮೆಟ್‌ ಸರಿಯಾಗಿಲ್ಲ: ನಿಖಿಲ್‌ ಸಲ್ಲಿಸಿರುವ ನಾಮಪತ್ರದ ಅರ್ಜಿ ಸರಿಯಾಗಿಲ್ಲ. ಅದನ್ನು ಸರಿಯಾದ ಫಾರ್ಮೆಟ್‌ನಲ್ಲಿ ಸಲ್ಲಿಸಿಲ್ಲ. ಆ ಹಿನ್ನೆಲೆಯಲ್ಲಿ ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ. ನಾವು ಹೇಳಿದ ಮೇಲೆ ಅವರು ಹೊಸ ಅರ್ಜಿ ಹಾಕಿರಬಹುದು ಎಂಬ ಶಂಕೆ ಇದೆ. ಫಾರಂ ನಂ.26 ಫಾರ್ಮೆಟ್‌ ಸರಿಯಾಗಿಲ್ಲದಿದ್ದರೆ ನಾವು ಆಕ್ಷೇಪಣೆ ಸಲ್ಲಿಸಿದ ಸಮಯದಲ್ಲೇ ಅದನ್ನು ತೋರಿಸಬೇಕಿತ್ತು. ಆ ಸಮಯದಲ್ಲಿ ನಮಗೆ ಅದನ್ನು ತೋರಿಸಲಿಲ್ಲ.

ಅದಕ್ಕೆ ಅಲ್ಲೇ ದೂರು ಅರ್ಜಿ ಕೊಟ್ಟಿದ್ದೇವೆ. ಸಾರ್ವಜನಿಕ ಪ್ರಕಟಣಾ ಫ‌ಲಕದಲ್ಲಿ ಹಾಕಿರುವ ಫಾರ್ಮೆಟ್‌ ಸರಿಯಾಗಿಲ್ಲ. ಅದು ಸಿಂಧುವಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಮದನ್‌ ತಿಳಿಸಿದ್ದಾರೆ. ಇದರಲ್ಲಿ ಎಲ್ಲಾ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಅವರು ಶಾಮೀಲಾಗಿರುವುದರಿಂದಲೇ ಈ ಪ್ರಶ್ನೆ ಉದ್ಭವಿಸಿದೆ. ತಕ್ಷಣವೇ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಮದನ್‌ ಆಗ್ರಹಿಸಿದ್ದಾರೆ.

ನಿಖಿಲ್‌ ನಾಮಪತ್ರ ಸಲ್ಲಿಸಿರುವ ಫಾರಂ ನಂ.26 ಕ್ರಮಬದ್ಧವಾಗಿಲ್ಲ. ಈ ವಿಷಯವಾಗಿ ಚುನಾವಣಾ ಆಯುಕ್ತರು ಸೇರಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಗೂ ದೂರು ನೀಡಿದ್ದೇವೆ. ಇಲ್ಲಿ ನಮಗೆ ನ್ಯಾಯ ಸಿಗದಿದ್ದರೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತೇವೆ. ಅವರೂ ಅಂಬರೀಶ್‌ ಅಭಿಮಾನಿಗಳೇ. ನಮಗೆ ಸಹಾಯ ಮಾಡುವುದಕ್ಕೆ ಸ್ವಯಂಪ್ರೇರಿತವಾಗಿ ಮುಂದೆ ಬಂದಿದ್ದಾರೆ. ಅವರ ಸಲಹೆಯಂತೆ ನಡೆಯುತ್ತೇವೆ.
-ಮದನ್‌, ಸುಮಲತಾ ಪರ ಚುನಾವಣಾ ಏಜೆಂಟ್‌

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.