ಡಿಕೆಶಿ ಸಹೋದರರ ಆಸ್ತಿ ದಾಖಲೆ ಪರಿಶೀಲನೆ


Team Udayavani, Mar 29, 2019, 1:06 PM IST

dkshi-sah

ಕನಕಪುರ: ಕಳೆದ ಎರಡು ವರ್ಷಗಳ ಹಿಂದೆ ಸಚಿವ ಡಿಕೆಶಿ ಕುಟುಂಬ ಮತ್ತು ಆಪ್ತರ ಮನೆಗಳ ಮೇಲೆ ದಾಳಿ ರಾಜ್ಯದಲ್ಲಿ ಸದ್ದು ಮಾಡಿತ್ತು. ಈ ಸಂಬಂಧ ಮುಂದುವರಿದ ತನಿಖೆಯಾಗಿ ತಾಲೂಕು ಕಚೇರಿಗೆ ಭೇಟಿ ನೀಡಿದ ಆದಾಯ ತೆರಿಗೆ ಅಧಿಕಾರಿಗಳ ತಂಡ ಡಿಕೆಶಿ ಕುಟುಂಬದ ಆಸ್ತಿಗಳ ದಾಖಲೆಗಳು ಮತ್ತು ಆದಾಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ಮಾಡಿದೆ.

ನಗರದ ಸಂಗಮ ರಸ್ತೆಯಲ್ಲಿನ ತಾಲೂಕು ಕಚೇರಿಗೆ ಬೆಳಗ್ಗೆ 11 ಗಂಟೆ ಆಗಮಿಸಿದ ಆದಾಯ ತೆರಿಗೆ ಅಧಿಕಾರಿಗಳ ನಾಲ್ಕು ಜನರ ತಂಡ, ತಹಶೀಲ್ದಾರ್‌ ಕುನಾಲ್‌ ಅವರನ್ನು ಭೇಟಿ ಮಾಡಿ ಪ್ರಕರಣವೊಂದರ ಸಂಬಂಧ ಲಿಖೀತ ಮನವಿ ನೀಡಿ, ಪ್ರಕರಣಕ್ಕೆ ಅಗತ್ಯವಾದ ಜಮೀನಿನ ದಾಖಲೆಗಳನ್ನು ಕಲೆ ಹಾಕಿದರು ಎಂದು ತಿಳಿದು ಬಂದಿದೆ.

ತಾಲೂಕು ದಂಡಾಧಿಕಾರಿಗಳ ಕಚೇರಿಗೆ ತೆರಿಗೆ ಅಧಿಕಾರಿಗಳು ಲಿಖೀತವಾಗಿ ತಾಲೂಕಿನ ಕೋಡಿಹಳ್ಳಿ, ಉಯ್ಯಂಬಹಳ್ಳಿ, ಸಾತನೂರು ಹೋಬಳಿಗಳ ವ್ಯಾಪ್ತಿಯಲ್ಲಿನ ಸರ್ವೆ ನಂಬರ್‌ಗಳ ಸಚಿವ ಡಿಕೆಶಿ ಕುಟುಂಬದ ಆಸ್ತಿಗೆ ಸಂಬಂಧಿಸಿದ ಜಮೀನಿನ ದಾಖಲೆಗಳನ್ನು ಪಡೆಯಲು ಮನವಿ ನೀಡಿ, ನಂತರ ತಹಶೀಲ್ದಾರ್‌ ಅವರಿಂದ ಹಲವು ವಿಷಯಗಳನ್ನು ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ತನಿಖೆಯ ವೇಳೆ ಯಾರಿಗೂ ಅವಕಾಶ ನೀಡದ್ದರಿಂದ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ಡಿಕೆಶಿ ರಾಜಕೀಯ ಓಟಕ್ಕೆ ಕಡಿವಾಣ: ಲೋಕಸಭಾ ಚುನಾವಣೆಗೆ ಹತ್ತಿರದಲ್ಲಿ ಡಿಕೆಶಿಯನ್ನು ಬಂಧಿಸಲು ಪ್ರಕರಣ ತನಿಕೆ ಮೂಲಕ ಕಾನೂನಿನ ಕುಣಿಕೆಯನ್ನು ಗಟ್ಟಿಗೊಳಿಸುತ್ತಿದ್ದಾರೆ ಎನ್ನುವ ಮಾತುಗಳು ಅಲ್ಲಲ್ಲಿ ಹರಿದಾಡುತ್ತಿತ್ತು. ಕೆಲವು ಸಭೆಗಳಲ್ಲಿ ಆಪ್ತರ ಬಳಿ ತಮ್ಮ ನೋವನ್ನು ಸಚಿವ ಡಿ.ಕೆ. ಶಿವಕುಮಾರ್‌ ಹೊರಹಾಕಿದ್ದರು. ಈ ಹಿಂದೆ ಘರ್ಜಿಸುತ್ತಿದ್ದ ಡಿಕೆಶಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಂತರ ಶಾಂತವಾಗಿದ್ದರು ಎನ್ನಲಾಗುತ್ತಿದ್ದು, ದಿನ ಕಳೆದಂತೆ ಕಾನೂನಿನ ಕುಣಿಕೆ ಗಟ್ಟಿಯಾಗುತ್ತಿದ್ದು, ಗುರುವಾರದ ತನಿಖೆ ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ. ಡಿಕೆಶಿ ರಾಜಕೀಯದ ಓಟಕ್ಕೆ ಕಡಿವಾಣ ಹಾಕಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ದಾಖಲೆಗಳಲ್ಲಿ ಸಿಕ್ಕಿಬಿದ್ದರಾ?: ಐಟಿ ದಾಳಿ ನಂತರ ದೇಶದ ಪ್ರತಿಷ್ಠಿತ ಕಾನೂನು ಪಂಡಿತರು, ಅಕೌಂಟೆಂಟ್‌ಗಳು ಹಾಗೂ ವಕೀಲರು ಸೇರಿದಂತೆ ಹತ್ತಾರು ನ್ಯಾಯಾಲಯಗಳನ್ನು ಅಲೆಯುವಂತೆ ಮಾಡಿದ್ದಾರೆ ಎಂದು ಕಾರ್ಯಕ್ರಮವೊಂದರಲ್ಲಿ ಒಪ್ಪಿಕೊಂಡಿದ್ದರು ಡಿಕೆಶಿ. ಅಂದು ತಾತ್ಕಾಲಿಕವಾಗಿ ಕೃಷಿ ಆದಾಯ ಎಂದು ಘೋಷಿಸಿಕೊಂಡು ಚುನಾವಣೆಗೆ ಸ್ಪರ್ಧಿಸಿದಾಗ ತಾವೇ ದೃಢೀಕರಿಸಿದ್ದರು. ತಾಲೂಕು ದಂಡಾಧಿಕಾರಿಗಳಿಂದ ಕೃಷಿ ಆದಾಯದ ದಾಖಲೆಗಳನ್ನು ನೀಡಿ, ಆದಾಯ ತೆರಿಗೆ ಅಧಿಕಾರಿಗಳ ತನಿಖೆಯಲ್ಲಿ ಸಿಕ್ಕಿಬಿದ್ದರಾ ಎನ್ನುವ ಅನುಮಾನಗಳು ಕಾಡುತ್ತಿದೆ. ನಗದು ರೂಪದಲ್ಲಿ ಸಿಕ್ಕಿದ್ದ ಹಣದ ಮೂಲವನ್ನು ಹುಡುಕಾಟದಲ್ಲಿರುವ ಅಧಿಕಾರಿಗಳಿಗೆ ದಾಖಲೆಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಆಧಾರದಲ್ಲಿ ಆದಾಯ ಪ್ರಮಾಣ ಪತ್ರ: ಈ ಹಿಂದೆ ಪ್ರತಿ ವರ್ಷ ಡಿಕೆಶಿ ಸಹೋದರರ ಕೃಷಿ ಆದಾಯದ ಮೂಲವನ್ನು ಇವರ ಸರ್ವೆ ನಂಬರ್‌ಗಳಲ್ಲಿ ಯಾವ ಜಮೀನಿನಲ್ಲಿ ಯಾವ ಬೆಳೆ ಹಾಕಲಾಗಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾನೂನಿನ ಪ್ರಕಾರವೇ ಕೃಷಿ ಆದಾಯದ ದಾಖಲೆಗಳನ್ನು ನೀಡಲಾಗಿದೆ. ಕೃಷಿ , ತೋಟಗಾರಿಕೆ ಸೇರಿದಂತೆ ಯಾವ ಬೆಳೆ ಎಂದು ಅರ್ಜಿಯಲ್ಲಿ ಕೇಳಿರುತ್ತಾರೆಯೋ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿಯ ಆಧಾರದಲ್ಲಿ ಆದಾಯಪ್ರಮಾಣ ಪತ್ರ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.