ಕರಾವಳಿ ಭಾಗದ ಅಪರಾಧ ಸುದ್ದಿಗಳು


Team Udayavani, Mar 30, 2019, 6:00 AM IST

Suicide-dd

ಉಡುಪಿ: 27 ವಾರಂಟ್‌ ಆರೋಪಿಗಳ ಸೆರೆ
ಉಡುಪಿ:ಜಿಲ್ಲೆಯ ವಿವಿಧ ಠಾಣೆಗಳಿಗೆ ಸಂಬಂಧಿಸಿದಂತೆ, ಒಟ್ಟು 27 ವಾರಂಟ್‌ ಆರೋಪಿಗಳನ್ನು ಎಸ್‌ಪಿ ನೇತೃತ್ವದ ತಂಡ ಪತ್ತೆ ಹಚ್ಚಿ ಬಂಧಿಸಿದೆ.

ಈ ಆರೋಪಿಗಳ ಬಂಧನಕ್ಕೆ ಹೊರ ರಾಜ್ಯಗಳಿಗೆ ಪೊಲೀಸ್‌ ಉಪನಿರೀಕ್ಷಕರ ನೇತೃತ್ವದ ಮೂರು ತಂಡ ಹಾಗೂ ಹೊರಜಿಲ್ಲೆಗಳಿಗೆ ಎ.ಎಸ್‌.ಐ.ನೇತೃತ್ವದ 5 ತಂಡಗಳನ್ನು ಮಾ.23ರಂದು ಕಳುಹಿಸಲಾಗಿತ್ತು.ಮಧ್ಯಪ್ರದೇಶದ ಇಂದೋರ್‌ನಿಂದ ಇಬ್ಬರು, ಮಹಾರಾಷ್ಟ್ರದ ಸಾಂಗ್ಲಿಯಿಂದ ಓರ್ವ ಮತ್ತು ಕೇರಳದಿಂದ ಮೂವರನ್ನು ಸಹಿತ ಒಟ್ಟು 27 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಈ ಪೈಕಿ ಕಾಸರಗೋಡಿನಲ್ಲಿ ಬಂಧಿತನಾದ ಅಮೀರ್‌ ಅಲಿ 26 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಬೈಂದೂರು ಠಾಣೆಗೆ ಸಂಬಂಧಿಸಿದ ಕಳವು ಪ್ರಕರಣದ ಪ್ರಧಾನ ಆರೋಪಿ.ಇದೇ ಪ್ರಕರಣದ ಇನ್ನೋರ್ವ ಆರೋಪಿ ಕೆ.ಪಿ. ಯೂಸುಫ್ ಎಂಬಾತ ಮೃತಪಟ್ಟಿರುವ ಬಗ್ಗೆ ಖಚಿತಪಡಿಸಿಕೊಂಡ ತಂಡ, ಆತನ ಮರಣ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ.

ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ:ಇಬ್ಬರ ಬಂಧನ
ಮಂಗಳೂರು: ಪಣಂಬೂರು ಸಮೀಪದ ಮೀನಕಳಿಯದ ಸಮುದ್ರ ಕಿನಾರೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ ನಿರತರಾ ಗಿದ್ದ ಕುಳಾಯಿ ಐಸ್‌ಪ್ಲಾಂಟ್‌ ಬಳಿಯ ನಿವಾಸಿ ಭರತೇಶ್‌ ಎಸ್‌. ಶ್ರೀಯಾನ್‌ (28) ಮತ್ತು ಕದ್ರಿ ದೇವಸ್ಥಾನ ರಸ್ತೆಯ ಮಿತ್ತಬಿತ್ತಿಲ್‌ ಮನೆಯ ಮಹಾಂತೇಶ್‌ ಅಮೀನ್‌ (28) ಅವರನ್ನು ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹ ದಳ ಮತ್ತು ಪಣಂಬೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅವರಿಂದ 3 ಮೊಬೈಲ್‌ ಫೋನ್‌ ಮತ್ತು 43 ಸಾ. ರೂ.ಸಹಿತ ಒಟ್ಟು 68 ಸಾ.ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟಿಪ್ಪರ್‌ ಢಿಕ್ಕಿ:ಸಾವು
ಕಾಸರಗೋಡು: ಕೊಳಬೈಲಿನಲ್ಲಿ ಟಿಪ್ಪರ್‌ ಲಾರಿ ಢಿಕ್ಕಿ ಹೊಡೆದು ಬೈಕ್‌ ಸವಾರ ಹೊಸದುರ್ಗ ಕೊಳವಯಲ್‌ನ ಅಸೀಸ್‌ ಅವರ ಪುತ್ರ ಖಲೀಲ್‌(22) ಅವರು ಆಸ್ಪತ್ರೆ ಯಲ್ಲಿ ಸಾವಿಗೀಡಾಗಿದ್ದಾರೆ.

ಉಡು ಪಿ: ಕಾಲೇಜು ವಿದ್ಯಾರ್ಥಿ ನಾಪತ್ತೆ
ಉಡುಪಿ: ಉಡುಪಿಯ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಖೀಲ್‌ (17) ನಿಗೂಢವಾಗಿ ನಾಪತ್ತೆಯಾಗಿದ್ದಾನೆ. ಈತ ಮೂಲತಃ ತಮಿಳುನಾಡಿನವನಾಗಿದ್ದು, ಎರಡು ದಿನಗಳಿಂದ ನಾಪತ್ತೆಯಾಗಿದ್ದಾನೆ ಎಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ?
ಬೆಳ್ತಂಗಡಿ: ಸಾಲ ಕೊಡಿ ಸುವುದಾಗಿ ವಂಚಿಸಿ ಬೆಳ್ತಂಗಡಿ ಪರಿಸರದ ಅಮಾಯಕರಿಂದ ದಾಖಲೆ ಪಡೆದು ಖಾಸಗಿ ಫೈನಾನ್ಸ್‌ ಸಂಸ್ಥೆಯೊಂ ದರ ಮೂಲಕ ಇಎಂಐ (ಮಾಸಿಕ ಕಂತು) ಆಧಾರದಲ್ಲಿ ಎಲೆಕ್ಟ್ರಾನಿಕ್ಸ್‌ ಉತ್ಪನ್ನ ಖರೀದಿಸಿ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ತಿಳಿದು ಬಂದಿದೆ.

ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಮಳಿಗೆಯೊಂದರ ಸಿಬಂದಿ ಸಹಾಯದಿಂದ ವಂಚಕರ ಜಾಲ ಕಾರ್ಯನಿರ್ವಹಿಸಿದ್ದು, ಸುಮಾರು 12 ಲ.ರೂ.ಗಳ ವರೆಗೆ ವಂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಸಹಕಾರ ಸಂಘಗಳಿಂದ ಸಾಲ ಕೊಡಿಸುವುದಾಗಿ ಜನರಿಗೆ ಭರ ವಸೆ ನೀಡಿ, ಅವರಿಂದ ದಾಖಲೆ ಹಾಗೂ ಸಹಿ ಪಡೆಯಲಾ ಗಿತ್ತು. ಜತೆಗೆ ಅವರ ಮೊಬೈಲ್‌ನಿಂದ ಒಟಿಪಿ ಪಡೆದು ಸಾಲದ ರೂಪದಲ್ಲಿ ವಂಚಕರೇ ಎಲೆಕ್ಟ್ರಾ ನಿಕ್ಸ್‌ ಉತ್ಪನ್ನಗಳನ್ನು ಖರೀದಿಸಿ ಅರ್ಧ ಬೆಲೆಗೆ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮೋಸಕ್ಕೊಳಗಾದ ಕೆಲವರ ಖಾತೆಗ ಳಿಂದ ಮೊತ್ತ ಕಡಿತ ಗೊಳ್ಳುವಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಫೈನಾನ್ಸ್‌ ಸಂಸ್ಥೆಗೆ ಈಗಷ್ಟೇ ವಂಚನೆ ವಿಚಾರ ತಿಳಿದಿದ್ದು,ಪೊಲೀಸ್‌ ದೂರು ನೀಡಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.