ದೇವರ ಅನುಗ್ರಹವಿದ್ದರೆ ಸಂಕಷ್ಟವಿಲ್ಲ: ಡಾ| ಬಲ್ಲಾಳ್
ಕಪ್ಪೆಟ್ಟು ಗರಡಿ ಬ್ರಹ್ಮಕಲಶ ಧಾರ್ಮಿಕ ಸಭೆ
Team Udayavani, Mar 30, 2019, 6:05 AM IST
ಮಲ್ಪೆ: ಆಧ್ಯಾತ್ಮಿಕ ಚಿಂತನೆಗಳ ಮೂಲಕ ಮಾನಸಿಕ ಶಕ್ತಿ ತುಂಬಿದವರು ಕೋಟಿ ಚೆನ್ನಯ್ಯರು. ಅವರಂತೆ ನಾವು ದೈಹಿಕ, ಮಾನಸಿಕವಾಗಿ ಗಟ್ಟಿಯಾದಾಗ, ದೇವರ ಅನುಗ್ರಹ ಇದ್ದಾಗ ಯಾವ ತೊಂದರೆಯೂ ಬರಲು ಸಾಧ್ಯವಿಲ್ಲ ಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.
ಕಪ್ಪೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಶ್ರೀ ಬ್ರಹ್ಮ ಬೈದರ್ಕಳ ಶ್ರೀ ವ್ಯಾಘ್ರ ಚಾಮುಂಡೀ ಮತ್ತು ಮಯಿಂದಾಲ ಪರಿವಾರ ಶಕ್ತಿಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಕುತ್ಯಾರು ಪ್ರಸಾದ್ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಗರೋಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಸಕ ಲಾಲಾಜಿ ಆರ್. ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಸಮಿತಿಯ ಗೌರವಾಧ್ಯಕ್ಷ ಪುರುಷೋತ್ತಮ ಶೆಟ್ಟಿ, ಗೌರವ ಸಲಹೆಗಾರ ಸೀತಾರಾಮ ಶೆಟ್ಟಿ, ಆಡಳಿತ ಸಮಿತಿ ಗೌರವಾಧ್ಯಕ್ಷ ಗುಂಡು ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಉದ್ಯಮಿ ಹರಿಯಪ್ಪ ಕೋಟ್ಯಾನ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ನ್ಯಾಯವಾದಿ ಜಯಪ್ರಕಾಶ್ ಕೆದ್ಲಾಯ, ಅಂಬಲಪಾಡಿ ಗ್ರಾ.ಪಂ. ಅಧ್ಯಕ್ಷ ಪ್ರಮೋದ್ ಸಾಲ್ಯಾನ್, ಗ್ರಾ. ಪಂ. ಸದಸ್ಯರಾದ ವಿಜಯ ಶೆಟ್ಟಿ ಕಪ್ಪೆಟ್ಟು, ರೋಹಿಣಿ ಎಸ್. ಪೂಜಾರಿ ಉಪಸ್ಥಿತರಿದ್ದರು.
ಸಮ್ಮಾನ
ಗರೋಡಿಗಾಗಿ ಅವಿರತ ಸೇವೆ ಮಾಡಿರುವ ಶಂಕರಣ ಪಂಬದ, ಸಂಜೀವ ಪೂಜಾರಿ ಮತ್ತು ಮುದ್ದು ಪೂಜಾರಿ ಅವರನ್ನು ಸಮ್ಮಾನಿಸ ಲಾಯಿತು.
ಆಡಳಿತ ಸಮಿತಿಯ ಅಧ್ಯಕ್ಷ ಸೂರ್ಯಪ್ರಕಾಶ್ ಕೆ. ಸ್ವಾಗತಿಸಿದರು. ಉಪನ್ಯಾಸಕ ದಯಾನಂದ ವಂದಿಸಿ ದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ