ಇವಿಎಂ ಬಗ್ಗೆ ಹಾದಿ-ಬೀದಿ ಚರ್ಚೆ ಬೇಡ


Team Udayavani, Mar 30, 2019, 7:43 AM IST

5-f.

ಬೆಂಗಳೂರು: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಗ್ಗೆ ರಾಜಕೀಯ ಪಕ್ಷಗಳು
ಅಥವಾ ಜನಸಾಮಾನ್ಯರು ಸುಖಾಸುಮ್ಮನೆ ಆರೋಪ ಮಾಡುವುದು ಮತ್ತು ಇದರ
ಬಗ್ಗೆಹಾದಿ-ಬೀದಿಯಲ್ಲಿಮಾತನಾಡುವುದು ಸರಿಯಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇವಿಎಂ-ವಿವಿಪ್ಯಾಟ್‌ಗಳ ತಾಂತ್ರಿಕ ವಿಷಯ
ಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತ
ನಾಡಿದ ಅವರು, ಇವಿಎಂನ ತಾಂತ್ರಿಕ ಹಾಗೂ ಆಡಳಿತಾತ್ಮಕ ವಿಷಯಗಳನ್ನು ಬಲವಾಗಿ ಸಮರ್ಥಿಸಿಕೊಂಡರು. ನಮ್ಮ ದೇಶದಲ್ಲಿ ಬಳಕೆ ಆಗುತ್ತಿರುವ ಇವಿಎಂಗಳು
ಇಡೀ ಪ್ರಪಂಚದಲ್ಲೇ ಅತ್ಯಂತ ಸುಧಾರಿತ ಮತ್ತು ತಾಂತ್ರಿಕವಾಗಿ ಸುರಕ್ಷಿತ ಇವಿಎಂಗಳಾಗಿವೆ. ಇವುಗಳನ್ನು ಹ್ಯಾಕ್‌ ಮಾಡಲು, ತಿರುಚಲು, ದುರ್ಬಳಕೆ ಮಾಡಿಕೊಳ್ಳಲು ಯಾವ ಕಾರಣಕ್ಕೂ, ಯಾವ ಹಂತದಲ್ಲೂ ಸಾಧ್ಯ ವಿಲ್ಲ. ಇವುಗಳ ಬಗೆಗಿನ ಎಲ್ಲ ಆರೋಪ, ಆಕ್ಷೇಪ ಮತ್ತು ಅಪಸ್ವರಗಳಿಗೆ ತಾಂತ್ರಿಕ ಉತ್ತರಗಳು ಸಿಕ್ಕಿವೆ. ಮೇಲಾಗಿ ಇದಕ್ಕೆ ನ್ಯಾಯಾಲ ಯದ ಸಮರ್ಥನೆ ಸಿಕ್ಕಿದೆ ಎಂದರು.

ಇವಿಎಂ ಬಗ್ಗೆ ರಾಜಕೀಯ ಪಕ್ಷಗಳಿಂದ ಹಾಗೂ ಜನಸಾಮಾನ್ಯರಿಂದ ಸಾಕಷ್ಟು
ದೂರುಗಳು ಬಂದಿವೆ. ಅನುಮಾನಗಳನ್ನು ವ್ಯಕ್ತಪಡಿಸಲಾಗಿದೆ. ಆದರೆ, ಅದೆಲ್ಲದರ ಬಗ್ಗೆ
ತಾಂತ್ರಿಕ ತಜ್ಞರಿಂದ ಸಮಂಜಸವಾದ ಉತ್ತರ ಮತ್ತು ಸ್ಪಷ್ಟನೆಗಳನ್ನು ಕೊಡಲಾಗಿದೆ.
ಇವಿಎಂ ಹ್ಯಾಕ್‌ ಬಗ್ಗೆ ಬಲವಾದ ಆರೋಪಗಳು ಕೇಳಿ ಬಂದಿದ್ದಾಗ ಕೇಂದ್ರ ಚುನಾವಣಾ
ಆಯೋಗ “ಓಪನ್‌ ಹ್ಯಾಕಥಾನ್‌’ಗೆ ಕರೆ ಕೊಟ್ಟಿತ್ತು. ಆರೋಪ ಮಾಡಿದ್ದ ಯಾರೊಬ
ºರೂ ಅಲ್ಲಿಗೆ ಬಂದಿಲ್ಲ. ಇವಿಎಂ ಬಗ್ಗೆ ಇಲ್ಲಿವರೆಗೆ ಮಾಡಲಾದ ಯಾವ ಆರೋಪವ
ನ್ನೂ ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದರು.

ಈ ವೇಳೆ, ಉಪ ಮುಖ್ಯ ಚುನಾವಣಾಧಿಕಾರಿ ವಿ.ರಾಘ ವೇಂದ್ರ ಅವರು
ಇವಿಎಂ-ವಿವಿಪ್ಯಾಟ್‌ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ವಾರ್ತಾ ಇಲಾಖೆ ನಿರ್ದೇಶಕ
ಭೃಂಗೀಶ್‌ ಮತ್ತಿತರರು ಇದ್ದರು.

5 ಕೋಟಿ ಮಂದಿಗೆ ಪ್ರಾತ್ಯಕ್ಷಿಕೆ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯಾದ್ಯಂತ 3.5 ಕೋಟಿ ಜನರಿಗೆ ಇವಿಎಂ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಈ ಬಾರಿ ಇಲ್ಲಿವರೆಗೆ 3 ಕೋಟಿಗೂ ಹೆಚ್ಚು ಜನರಿಗೆ ಪ್ರಾತ್ಯಕ್ಷಿಕೆ ನೀಡಲಾಗಿದ್ದು, 5 ಕೋಟಿಗೂ ಹೆಚ್ಚು ಜನರಿಗೆ ಪ್ರಾತ್ಯಕ್ಷಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ. ವಿವಿಪ್ಯಾಟ್‌ ಬಳಕೆಯಿಂದ ಮತದಾನದ ಖಾತರಿ ಸಿಗಲಿದೆ. ಒಬ್ಬ ಮತದಾರ ಮತ ಚಲಾಯಿಸಿದಾಗ ವಿವಿಪ್ಯಾಟ್‌ನ ಗಾಜಿನ ಕಿಂಡಿಯಲ್ಲಿ ಏಳು ಸೆಕೆಂಡ್‌ ವರೆಗೆ ಮತದಾನದ ವಿವರ ಪ್ರದರ್ಶನಗೊಳ್ಳುತ್ತದೆ. ಇವಿಎಂ ಮತಯಂತ್ರಗಳನ್ನು ಜಿಪಿಎಸ್‌ ವ್ಯವಸ್ಥೆ ಅಳವಡಿಸಿರುವ ವಾಹನಗಳಲ್ಲಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ
ಸಾಗಿಸಲಾಗುತ್ತದೆ. ರಾಜಕೀಯ ಪಕ್ಷದ ಪ್ರತಿನಿಧಿಗಳ ಬೆಂಗಾವಲಿಗೂ ಅವಕಾಶವಿರುತ್ತದೆ ಎಂದು ಸಂಜೀವ ಕುಮಾರ್‌ ವಿವರಿಸಿದರು.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.