ವಿರೋಧ ಪಕ್ಷಗಳಿಗೆ ವಿಜ್ಞಾನಿಗಳೆಂದರೆ ಅಲಕ್ಷ್ಯ: ನರೇಂದ್ರ ಮೋದಿ ಲೇವಡಿ
ದೇಶದ ಸಾಧನೆಯನ್ನು ಕೇಳಿ ಕೆಲವರು ನಿರಾಶೆಗೊಳ್ಳುತ್ತಾರೆ
Team Udayavani, Mar 30, 2019, 2:56 PM IST
ಹೊಸದಿಲ್ಲಿ: ನಾವು ಉಗ್ರರನ್ನು ಅವರ ನೆಲಕ್ಕೆ ಹೋಗಿ ಕೊಂದು ಬಂದಾಗ ವಿರೋಧ ಪಕ್ಷಗಳ ನಿಲುವು ಏನಿತ್ತು ಎಂದು ನೀವು ನೋಡಿದ್ದೀರಲ್ಲಾ. ಈಗ ವಿಜ್ಞಾನಿಗಳ ಸಾಧನೆಯ ಮೇಲೂ ವಿರೋಧ ಪಕ್ಷದವರು ಅದೇ ಅಲಕ್ಷ್ಯ ತೋರುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಮೇಲೆ ಟೀಕಾ ಪ್ರಹಾರ ನಡೆಸಿದರು. .
ಈಶಾನ್ಯ ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಧಾನಿ ಮೋದಿಯವರು ಶನಿವಾರ ಅರುಣಾಚಲ ಪ್ರದೇಶದಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು.
ತನ್ನ ಭಾಷಣದಲ್ಲಿ ವಿಪಕ್ಷಗಳನ್ನು ಟೀಕಿಸಿದ ಪ್ರಧಾನಿ ಮೋದಿಯವರು, ದೇಶವು ಯಾವುದೇ ಸಾಧನೆ ಮಾಡಿದಾಗ ನಿಮಗೆ ಸಂತೋಷವಾಗುತ್ತದಲ್ಲವೇ ? ಆದರೆ ಕೆಲವರು ದೇಶದ ಸಾಧನೆಯನ್ನು ಕೇಳಿ ನಿರಾಶೆಗೊಳ್ಳುತ್ತಾರೆ . ಇಂತವರಿಗೆ ನೀವು ಚುನಾವಣೆಯಲ್ಲಿ ಬುದ್ದಿ ಕಲಿಸಿ ಎಂದು ಜನರಿಗೆ ಕರೆ ಕೊಟ್ಟರು.
ನಿಮ್ಮ ಸರಕಾರ ನಿಮ್ಮ ನಂಬಿಕೆಗಳಿಗೆ ಗೌರವಿಸಿದೆ. ಸ್ವಾತಂತ್ರ್ಯ ಬಂದ ಏಳು ದಶಕದ ನಂತರ ಅರುಣಾಚಲ ಪ್ರದೇಶದಲ್ಲಿ ರೈಲು ಮಾರ್ಗಗಳ ಸುಧಾರಣೆಗೆ ಈ ಕಾವಲುಗಾರ ನೆರವಾಗಿದ್ದಾನೆ. ಇಷ್ಟು ವರ್ಷಗಳಲ್ಲಿ ಅರುಣಾಚಲ ಪ್ರದೇಶದ ಕೇವಲ 40 ಶೇಕಡಾದಷ್ಟು ಜನರಿಗೆ ವಿದ್ಯುತ್ ಸೌಲಭ್ಯವಿತ್ತು. ಆದರೆ ಈಗ ಪ್ರತಿಯೊಂದು ಮನೆಗೂ ವಿದ್ಯುತ್ ಸೌಲಭ್ಯ ಒದಗಿಸಲಾಗಿದೆ. ನಿಮ್ಮೆಲ್ಲರ ಆಶೀರ್ವಾದಿಂದ ಇದೆಲ್ಲಾ ಸಾಧ್ಯವಾಯಿತು ಎಂದರು.
2014ರ ಚುನಾವಣೆಯಲ್ಲಿ ಬಿಜೆಪಿ ಈಶಾನ್ಯ ರಾಜ್ಯಗಳಲ್ಲಿ ಒಟ್ಟು 14 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ
V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ
MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ
Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ
10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ
MUST WATCH
ಹೊಸ ಸೇರ್ಪಡೆ
Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ
Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್ ಖರ್ಗೆ
PSI Exam ರಾಜ್ಯದ 402 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್ನಲ್ಲಿ ಪರೀಕ್ಷೆ
Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್ಗೆ
Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು