ಖಾಸಗಿ ಶಾಲೆ ಬಂದ್: ಪೋಷಕರ ಪ್ರತಿಭಟನೆ
Team Udayavani, Mar 30, 2019, 3:12 PM IST
ಅರಸೀಕೆರೆ: ನಗರದಲ್ಲಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಕನ್ನಿಕಾ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಏಕಾಎಕಿ ಶಾಲೆಯನ್ನು ಮುಚ್ಚಲು ಮುಂದಾಗಿರುವುದರಿಂದ ಈ ಶಾಲೆಗೆ ಆರ್ಟಿಇ (ಶಿಕ್ಷಣ ಹಕ್ಕು ಕಾಯ್ದೆ )ಯೋಜನೆಯಡಿ ಸೇರ್ಪಡೆಯಾಗಿದ್ದ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಭವಿಷ್ಯದಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಬಿಇಒ ಮೋಹನ್ ಕುಮಾರ್ ಅವರಿಗೆ ಮನವಿಪತ್ರ ಸಲ್ಲಿಸಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಗುಂಪು ಸೇರಿದಂತೆ ಪೋಷಕರು ನಗರದಲ್ಲಿರುವ ಕನ್ನಿಕಾ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಮುಂದಿನ ಶೈಕ್ಷಣಿಕ ವರ್ಷದಿಂದ ಕನ್ನಿಕಾ ಶಾಲೆಯನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಕ್ಷೇತ್ರ ಶಿಕ್ಷಾಧಿಕಾರಿಗಳ ಕಚೇರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ತಾವುಗಳು ನಮ್ಮ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಬಗ್ಗೆ ತುಂಬಾ ಆತಂಕ ವ್ಯಕ್ತವಾಗುತ್ತಿದೆ ಎಂದು ಹಲವಾರು ಪೋಷಕರು ಕ್ಷೇತ್ರಶಿಕ್ಷಣಾಧಿಕಾರಿಗಳ ಮುಂದೆ ಅಳು ತೋಡಿಕೊಂಡರು.
ಬಡ ಮಕ್ಕಳಿಗೆ ತೊಂದರೆ: ನಾವುಗಳು ಬಡಕುಟುಂಬದವರಾಗಿದ್ದು, ಸರ್ಕಾರದ ಆರ್ಟಿಇ ಯೋಜನೆಯಡಿ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ದೊರಕುತ್ತಿದೆ ಎಂಬ ನಂಬಿಕೆಯಿಟ್ಟು ಶಾಲೆಗೆ ಸೇರಿಸಿದ್ದು ಈ ಶಾಲೆಯಲ್ಲಿ ಸುಮಾರು 131 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಲ್ಲಿ 68 ಮಂದಿ ವಿದ್ಯಾರ್ಥಿಗಳು ಸರ್ಕಾರದ ಆರ್ಟಿಇ ಯೋಜನೆಯಡಿ ದಾಖಲಾದ ವಿದ್ಯಾರ್ಥಿಗಳು ಆಗಿದ್ದಾರೆ.
ಆದರೆ ಈಗ ಏಕಾಎಕಿ ಶಾಲೆಯ ಆಡಳಿತ ಮಂಡಳಿ ಇಲ್ಲಸಲ್ಲದ ನೆಪ ಮಾಡಿಕೊಂಡು ಶಾಲೆಯನ್ನು ಮುಚ್ಚುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಇಂತಹ ಸೌಲಭ್ಯದಿಂದ ಸಂಪೂರ್ಣವಾಗಿ ವಂಚಿತರಾಗುತ್ತಿದ್ದು,ಅವರುಗಳ ಭವಿಷ್ಯದ ಬಗ್ಗೆ ಸರ್ಕಾರದ ಅಧಿಕಾರಿಗಳು ಹಾಗೂ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಚಿಂತನೆ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಕ್ಕಳ ಪೋಷಕರಾದ ವಿರೂಪಾಕ್ಷಪ್ಪ, ಎಸ್.ಕೆ.ರವಿ, ಅಮ್ಜದ್, ಪ್ರಕಾಶ್,ಅಶೋಕ್, ಮಮತಾ, ಗೌಸೀಯಾ, ಸಹೀನಾ, ಉಷಾ ಹಾಗೂ ಇನ್ನಿತರರು ಇದ್ದರು
ನಂತರ ಪ್ರತಿಭಟನಕಾರರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ಕುಮಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಬಿಇಒ ಸ್ಪಷ್ಟನೆ: ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಬಿಇಒ ಮೋಹನ್, ಶಾಲೆಗೆ ವಿದ್ಯಾರ್ಥಿಗಳ ದಾಖಲಾತಿ ಇಳಿಮುಖವಾಗುತ್ತಿರುವ ಕಾರಣ ಶಾಲೆ ನಡೆಸಲು ಆಗುತ್ತಿಲ್ಲ ಎಂದು ಶಾಲೆ ಆಡಳಿತ ಮಂಡಳಿ ಪತ್ರ ಬರೆದಿದೆ.
ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯನ್ನು ಕರೆದು ಮಕ್ಕಳಿಗೆ ತೊಂದರೆ ಉಂಟಾಗುತ್ತಿರುವ ವಿಷಯವನ್ನು ಗಮನಕ್ಕೆ ತರುತ್ತೇನೆ. ಆದರೂ ಶಾಲೆ ಮುಚ್ಚುವ ತೀರ್ಮಾನವೇ ಅಂತಿಮವಾದರೆ ವಿದ್ಯಾರ್ಥಿಗಳನ್ನು ಬೇರೆ ಬೇರೆ ಶಾಲೆಗಳಿಗೆ ಸೇರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ
Hassan ಕ್ಯಾನ್ಸರ್ ಸೋಲಿಸಿ ಮಿಸ್ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್
Rain: ಸಕಲೇಶಪುರದಲ್ಲಿ 10 ದಿನದಿಂದ ನಿತ್ಯ ಮಳೆ
Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ
Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಆರು ಜನರು
MUST WATCH
ಹೊಸ ಸೇರ್ಪಡೆ
Rajkot ದುರಂತ; ಗುಜರಾತ್ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್ ತರಾಟೆ
Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು
ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್ ಆಗ್ರಹ
76,000 ಅಂಕ ತಲುಪಿದ್ದ ಬಿಎಸ್ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ
Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ