ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಸಾವು


Team Udayavani, Mar 31, 2019, 11:30 AM IST

kollamnalii

ತಿರುವನಂತಪುರ: ವರದಕ್ಷಿಣ ಪಿಡುಗಿಗೆ ಕೊಲ್ಲಂ ಜಿಲ್ಲೆಯಲ್ಲಿ ಗೃಹಿಣಿಯೊಬ್ಬರು ದಾರುಣ ಸಾವನ್ನಪ್ಪಿದ್ದಾರೆ. ತಿಂಗಳುಗಟ್ಟಲೆ ಉಪವಾಸ ಹಾಗೂ ದೈಹಿಕ ಹಿಂಸೆಯನ್ನು ಅನುಭವಿಸಿರುವ ಅವರು, ಸಾಯುವಾಗ ಕೇವಲ 20 ಕೆ.ಜಿ.ಗೆ ಇಳಿದಿದ್ದು ಅವರು ಅನುಭವಿಸಿರುವ ಹಿಂಸೆಗೆ ಸಾಕ್ಷಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ಗೃಹಿಣಿಯ ಹೆಸರು ತುಷಾರ (27). ಆರು ವರ್ಷಗಳ ಹಿಂದೆ ಕೊಲ್ಲಂ ಜಿಲ್ಲೆಯ ಒಯೂರ್‌ನ ಚಂಟು ಲಾಲ್‌ ಎಂಬ ನಿವಾಸಿಯೊಂದಿಗೆ ಅವರ ವಿವಾಹವಾಗಿತ್ತು. ವರದಕ್ಷಿಣೆಯ ಹುಚ್ಚು ಅಂಟಿಸಿಕೊಂಡಿದ್ದ ಚಂಟು ಲಾಲ್‌ ಹಾಗೂ ಆತನ ಅಪ್ಪ-ಅಮ್ಮ ಕೆಲವೇ ದಿನಗಳಲ್ಲಿ ತುಷಾರಾ ಅವರಿಗೆ ಕಿರುಕುಳ ಕೊಡಲಾರಂಭಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ತುಷಾರಾ ಹೊರಗೆ ಕಾಣಿಸಿಕೊಳ್ಳುವುದೇ ಅಪರೂಪವಾಗಿದ್ದು, ಕೆಲ ತಿಂಗಳಿಂದೀಚೆಗೆ ಆಕೆ ಮನೆಯಿಂದ ಹೊರಗೆ ಬಂದಿರಲಿಲ್ಲ. ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿ, ತಿಂಗಳುಗಟ್ಟಲೆ ಕೇವಲ ಸಕ್ಕರೆ ನೀರು ಹಾಗೂ ನೆನೆಸಿಟ್ಟ ಅಕ್ಕಿಯನ್ನು ನೀಡುತ್ತಿದ್ದರು ಎಂದು ತನಿಖೆಯ ವೇಳೆ ಬಹಿರಂಗವಾಗಿದೆ.

ತೀವ್ರ ಅಸ್ವಸ್ಥರಾಗಿದ್ದ ತುಷಾರಾರನ್ನು ಮಾ. 21ರಂದು ಕೊಲ್ಲಂ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆಸ್ಪತ್ರೆಗೆ ಸಾಗುವ ಮಾರ್ಗದಲ್ಲೇ ತುಷರಾ ಕೊನೆಯುಸಿರೆಳೆದಿದ್ದಾರೆ. ಆಕೆಯ ದೇಹ ಸ್ಥಿತಿಯನ್ನು ಕಂಡು ಅನುಮಾನಗೊಂಡ ವೈದ್ಯರು ಹೆಚ್ಚಿನ ತಪಾಸಣೆಗೆ ದೇಹವನ್ನು ತಿರುವಂತಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದಾಗ ಆಕೆ ಪಟ್ಟಿದ್ದ ಕಿರುಕುಳ ಬಹಿರಂಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ವೇಳೆ, ಚಂಟು ಲಾಲ್‌ ಹಾಗೂ ಆತನ ಮನೆಯವರು ಮಂತ್ರವಾದಿ ವಿದ್ಯೆಗಳ ಪ್ರಯೋಗಗಳನ್ನು ಮಾಡುತ್ತಿದ್ದುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.