ರೈತಸಂಘ ಬೆಂಬಲದಿಂದ ಅಮ್ಮನಿಗೆ ಆನೆಬಲ


Team Udayavani, Mar 31, 2019, 1:08 PM IST

raita-sang

ಪಾಂಡವಪುರ: ರೈತಸಂಘದ ಕಾರ್ಯಕರ್ತರ ಬೆಂಬಲದಿಂದ ನಮಗೆ ಆನೆ ಬಲ ಬಂದಿದೆ ಎಂದು ಅಮ್ಮ ಹೇಳುತ್ತಿದ್ದರು, ಈಗ ದರ್ಶನ್‌ಪುಟ್ಟಣ್ಣಯ್ಯನವರೂ ಪ್ರಚಾರದಲ್ಲಿ ತೊಡಗಿಕೊಂಡರೆ ಮತ್ತಷ್ಟು ಬಲ ಬಂದತಾಗುತ್ತೆಂದು ಅಭಿಷೇಕ್‌ ಅಂಬರೀಶ್‌ ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್‌ ರೈತ ಸಭಾಂಗಣದಲ್ಲಿ ಆಯೋಜಿಸಿದ್ದ ರೈತಸಂಘದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರೈತನಾಯಕ ದಿವಂಗತ ಕೆ.ಎಸ್‌.ಪುಟ್ಟಣ್ಣಯ್ಯ ಹಾಗೂ ಅಂಬರೀಶ್‌ ನಡುವೆ ಉತ್ತಮ ಬಾಂಧವ್ಯವಿತ್ತು. ಆ ಬಾಂಧವ್ಯ ಅಮ್ಮ ಸುಮಲತಾ ಹಾಗೂ ಸುನೀತಾಪುಟ್ಟಣ್ಣಯ್ಯನವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ನಮ್ಮ ಕುಟುಂಬಗಳ ಈ ಬಾಂಧವ್ಯ ಲೋಕಸಭಾ ಚುನಾವಣೆ ಮಾತ್ರವಲ್ಲ ಮುಂದಿನ ಚುನಾವಣೆಗಳಿಗೂ ಹೀಗೆಯೇ ಮುಂದುವರಿಯಲಿದೆ ಎಂದರು.

ಜೆಡಿಎಸ್‌ಗೆ ಬೆಂಬಲವಿಲ್ಲ: ರೈತನಾಯಕಿ ಸುನೀತಾಪುಟ್ಟಣ್ಣಯ್ಯ ಮಾತನಾಡಿ, ಕಾಂಗ್ರೆಸ್‌ ಪಕ್ಷದವರು ಕಳೆದ ಚುನಾವಣೆಯಲ್ಲಿ ನಾವು ನಿಮಗೆ ಬೆಂಬಲ ಕೊಟ್ಟಿದ್ದೇವೆ. ಈ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿ ಎಂದರು. ಕಾಂಗ್ರೆಸ್‌ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ನಾವು ಬೆಂಬಲ ನೀಡುತ್ತಿದ್ದೆವು.

ಜೆಡಿಎಸ್‌ ಅಭ್ಯರ್ಥಿಗೆ ನಾವು ಯಾವುದೇ ಕಾರಣಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದೇನೆ. ಸಕ್ಕರೆ ಕಾರ್ಖಾನೆಗಳ ಉಳಿವಿಗಾಗಿ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕೊಡಿಸುವುದಕ್ಕಾಗಿ, ರೈತರ ಸಂಕಷ್ಟದ ವಿರುದ್ಧ ಹೋರಾಟ ಮಾಡುವುದೂ ಸೇರಿದಂತೆ ಹಲವು ಷರತ್ತುಗಳೊಂದಿಗೆ ನಾವು ಸುಮಲತಾ ಅವರಿಗೆ ಬೆಂಬಲ ನೀಡಿದ್ದೇವೆ ಎಂದು ತಿಳಿಸಿದರು.

ಕೀಳುಮಟ್ಟದ ರಾಜಕಾರಣ: ರೈತಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್‌ ಮಾತನಾಡಿ, ಸುಮಲತಾ ಎಂಬ ಹೆಸರಿನ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸಿಎಂ ಕುಮಾರಸ್ವಾಮಿ ಜಿಲ್ಲೆಯಲ್ಲಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಅವರ ಘನತೆಗೆ ತಕ್ಕಂತೆ ಮಾತನಾಡಬೇಕು.

ಒಬ್ಬ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಚಿಂತನೆ ಮಾಡುವುದನ್ನು ಬಿಟ್ಟು ಪುತ್ರನನ್ನು ಗೆಲ್ಲಿಸಿಕೊಳ್ಳುವುದಕ್ಕಾಗಿ ಜಿಲ್ಲೆಯಲ್ಲಿ ಬೀಡು ಬಿಟ್ಟಿರುವುದು ಎಷ್ಟು ಸರಿ ಎಂದು ಕಿಡಿಕಾರಿದರು. ಕಾರ್ಯಕ್ರಮದಲ್ಲಿ ರೈತಸಂಘದ ತಾಲೂಕು ಅಧ್ಯಕ್ಷ ಎ.ಎಲ್‌.ಕೆಂಪೂಗೌಡ, ಮಂಡ್ಯ ತಾಲೂಕು ಅಧ್ಯಕ್ಷ ನಾಗಣ್ಣ, ಕಾಂಗ್ರೆಸ್‌ ಕಿಸಾನ್‌ ಘಟಕದ ಅಧ್ಯಕ್ಷ ಸಿ.ಆರ್‌.ರಮೇಶ್‌,

ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಲ್‌.ಸಿ.ಮಂಜುನಾಥ್‌, ಮುಖಂಡ ಡಿ.ಕೆ.ದೇವೇಗೌಡ, ರೈತ ಮುಖಂಡರಾದ ಕೆ.ಟಿ.ಗೋವಿಂದೇಗೌಡ, ಹರವು ಪ್ರಕಾಶ್‌, ಕೆ.ಎಸ್‌.ಪ್ರಕಾಶ್‌, ಪುರಸಭೆ ಸದಸ್ಯ ಪಾರ್ಥ ಕೆ.ಎಸ್‌.ದಯಾನಂದ, ವೀರಶೈವ ಮುಖಂಡ ಷಡಕ್ಷರಪ್ಪ ಮತ್ತಿತರರು ಹಾಜರಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಿವಂಗತ ಅಂಬರೀಶ್‌ ಕಾಲಿಗೆ ಬಿದ್ದು ಸಹಕಾರ ಪಡೆದು ಏಳು ಕ್ಷೇತ್ರ ಗೆದ್ದುಕೊಂಡ ಜೆಡಿಎಸ್‌ ಶಾಸಕರು, ಇದೀಗ ಅದೇ ಕುಟುಂಬದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಜಿಲ್ಲೆಯ ಜನತೆ ಇವರನ್ನು ಅರ್ಥಮಾಡಿಕೊಳ್ಳಬೇಕು.
-ಶಂಭೂನಹಳ್ಳಿ ಸುರೇಶ್‌

ನಾವು ಬೆಂಬಲ ನೀಡದೆ ಹೋದರೆ ನಿಮ್ಮ ಆಸ್ತಿಯ ಬಗ್ಗೆ ತನಿಖೆ ನಡೆಸುತ್ತೇವೆ ಎಂಬುದಾಗಿ ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆಲ್ಲಾ ನಾವು ಹೆದರುವುದಿಲ್ಲ. ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡುವವರ ವಿರುದ್ಧª ನಮ್ಮ ಹೋರಾಡುತ್ತೇವೆ.
-ಸುನೀತಾ ಪುಟ್ಟಣ್ಣಯ್ಯ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.