ನೀರು ಹರಿಸದಿದ್ದರೇ ಚುನಾವಣೆ ಬಹಿಷ್ಕಾರ


Team Udayavani, Apr 2, 2019, 5:00 AM IST

neeru

ಚಾಮರಾಜನಗರ: ತಾಲೂಕಿನ ಸುವರ್ಣಾವತಿ ಜಲಾಶಯದಿಂದ ಹಳೆ ಅಚ್ಚುಕಟ್ಟು ಪ್ರದೇಶದಗಳಿಗೆ ನೀರು ಹರಿಸದಿದ್ದರೆ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸುವುದಾಗಿ ಅಚ್ಚುಕಟ್ಟು ಪ್ರದೇಶದ ರೈತರು ಎಚ್ಚರಿಕೆ ನೀಡಿದ್ದಾರೆ.

ತಾಲೂಕಿನ ಹಳೇ ಆಲೂರು ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸೋಮವಾರ ನಡೆದ ಸುವರ್ಣಾವತಿ ಜಲಾಶಯದ ಅಚ್ಚುಕಟ್ಟುದಾರರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಆಲೂರಿನಲ್ಲಿ ಸಭೆ: ತಾಲೂಕಿನ ಸುವರ್ಣಾವತಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಗಳಿಗೆ ಇದುವರೆಗೆ ಎರಡು ಬಾರಿ ನೀರು ಕೊಡಬೇಕಾಗಿತ್ತು. ಆದರೆ ಈ ಬಾರಿ ಒಂದು ಬಾರಿಯೂ ನೀರು ಬಿಡದಿರುವುದರಿಂದ ಬೆಳೆಗಳು ಒಣಗುತ್ತಿವೆ. ಹೀಗಾಗಿ ಅಚ್ಚುಕಟ್ಟು ಪ್ರದೇಶದ ರೈತರು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ನೀರು ಹರಿಸಲು ಮನವಿ ಮಾಡಿದ್ದರು. ಆದರೆ ಈ ಬಗ್ಗೆ ಸ್ಪಷ್ಟ ಭರವಸೆ ದೊರಕದ ಹಿನ್ನೆಲೆಯಲ್ಲಿ ಸೋಮವಾರ ಆಲೂರಿನಲ್ಲಿ ಸಭೆ ನಡೆಸಿದರು.

ಮನವಿ ಮಾಡಿದರೂ ಪ್ರಯೋಜನವಾಗಿಲ್ಲ: ಸಭೆಯಲ್ಲಿ ಮಾತನಾಡಿದ ರೈತರು, ಈಗಾಗಲೇ ನೀರಿನ ಕೊರತೆಯಿಂದಾಗಿ ಸುವರ್ಣಾವತಿ ಹಳೆಯ ಅಚ್ಚುಕಟ್ಟು ಪ್ರದೇಶದಲ್ಲಿ ತೆಂಗಿನ ತೋಟ, ಇತರೆ ಬೆಳೆಗಳು ಒಣಗಿದ್ದು, ನಾಶವಾಗುವ ಹಂತ ತಲುಪಿವೆ. ಇನ್ನೊಂದೆಡೆ ಅಂತರ್ಜಲ ಕ್ಷೀಣಿಸಿದೆ. ಬೆಳೆದ ಬೆಳೆಗಳನ್ನು ಕಳೆದುಕೊಳ್ಳುವ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ನೀರಾವರಿ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡರು. ಸುವರ್ಣಾವತಿ ಜಲಾಶಯದಿಂದ ನಾಲೆಗೆ ನೀರು ಹರಿಸದಿದ್ದರೆ, ಲೋಕಸಭಾ ಚುನಾವಣೆಯ ಮತದಾನವನ್ನು ಅಚ್ಚುಕಟ್ಟುದಾರರು ಬಹಿಷ್ಕರಿಸೋಣ ಎಂಬ ನಿರ್ಧಾರ ಕೈಗೊಂಡರು.

ಎಂಜಿನಿಯರ್‌ ಭರವಸೆ: ಸಭೆ ನಡೆಯುತ್ತಿರುವ ವಿಷಯ ತಿಳಿದ ಸುವರ್ಣಾವತಿ ಕಾರ್ಯಪಾಲಕ ಎಂಜಿನಿಯರ್‌ ರಾಜೇಂದ್ರಪ್ರಸಾದ್‌ ಸ್ಥಳಕ್ಕೆ ಆಗಮಿಸಿ, ರೈತರ ಅಹವಾಲುಗಳನ್ನು ಆಲಿಸಿದರು. ಈ ಭಾಗದ ರೈತರ ತೆಂಗಿನ ತೋಟ, ಬಹುವಾರ್ಷಿಕ ಬೆಳೆ ಇತರ ಫ‌ಸಲುಗಳು ಒಣಗುತ್ತಿದ್ದು, ಇನ್ನೂ ಸ್ವಲ್ಪ ದಿನಗಳು ಕಳೆದರೆ ಬೆಳೆಗಳಿಗೆ ನಾಶವಾಗಲಿದೆ.

ಸುವರ್ಣಾವತಿ ಜಲಾಶಯದಿಂದ ನಾಲೆಗೆ ಕೂಡಲೇ ನೀರು ಹರಿಸಿ ತಮ್ಮ ಬೆಳೆಗಳನ್ನು ಉಳಿಸಿಕೊಡುವಂತೆ ಒತ್ತಾಯಿಸಿದ್ದಾರೆ. ಅಚ್ಚುಕಟ್ಟು ಪ್ರದೇಶದ ರೈತರ ಬೇಡಿಕೆಯಂತೆ ಮಂಗಳವಾರದಿಂದಲೇ ನಾಲೆಗೆ ನೀರು ಹರಿಸುವುದಾಗಿ ಭರವಸೆ ನೀಡಿದರು.

ನೀರು ಬಿಡದಿದ್ದರೆ ಮತದಾನ ಬಹಿಷ್ಕಾರ ಖಚಿತ: ಇಷ್ಟಕ್ಕೇ ಸುಮ್ಮನಾಗದ ರೈತರು, ಕಾರ್ಯಪಾಲಕ ಎಂಜಿನಿಯರ್‌ ತಮ್ಮ ಭರವಸೆಯಂತೆ ಒಂದು ವೇಳೆ ನಾಳೆಯೇ ನೀರು ಹರಿಸದಿದ್ದರೆ ಏ.18 ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುವರ್ಣಾವತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರವೀಶ್‌, ಸಹಾಯಕ ಎಂಜಿನಿಯರ್‌ ಮಹೇಶ್‌ ಹಾಗೂ ಆಲೂರು, ಸರಗೂರುಮೋಳೆ, ಕೂಡೂರು, ಕರಿಯನಕಟ್ಟೆ, ಹೊಮ್ಮ, ಕೋಟಂಬಳ್ಳಿ, ಮಲ್ಲೂಪುರ, ಹಂಡ್ರಕಳ್ಳಿಮೋಳೆ, ಕಣ್ಣೇಗಾಲ, ಬೂದಿತಿಟ್ಟು, ಲಿಂಗರಾಜಪುರ ಗ್ರಾಮಗಳ ಅಚ್ಚುಕಟ್ಟುಪ್ರದೇಶದ ರೈತರು ಹಾಜರಿದ್ದರು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.