ಮುನಿಯಪ್ಪ ಬೆಂಬಲಿಸಲು ಸಾಧ್ಯವೇ ಇಲ್ಲ


Team Udayavani, Apr 2, 2019, 5:00 AM IST

muniya

ಕೋಲಾರ: ಉಂಡ ಮನೆಗೆ ದ್ರೋಹ ಬಗೆಯುವ ಸಂಸ್ಕೃತಿಯ ಮಹಾನುಭಾವ ಕೆ.ಎಚ್‌.ಮುನಿಯಪ್ಪ ನಡವಳಿಕೆಗೆ ಅವರ ಕಾಂಗ್ರೆಸ್‌ ಪಕ್ಷದಲ್ಲೇ ಆಕ್ರೋಶವಿದೆ. ಇಂತಹ ಮಹಾದ್ರೋಹಿ ಜಗತ್ತಿನಲ್ಲೇ ಇಲ್ಲ ಎಂದು ಶಾಸಕ ಕೆ.ಶ್ರೀನಿವಾಸಗೌಡ ವಾಗ್ಧಾಳಿ ನಡೆಸುವ ಮೂಲಕ ಮೈತ್ರಿಗೆ ಸೆಡ್ಡು ಹೊಡೆದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಸೋಮವಾರ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, 2004ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಿಂದ ಕೇವಲ 9500 ಮತಗಳ ಅಂತರದಿಂದ ಮುನಿಯಪ್ಪ ಆಯ್ಕೆಯಾಗಿದ್ದರು. ಲೋಕಸಭೆ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಜನ ಇವರನ್ನು ತಿರಸ್ಕರಿಸಿದ್ದರು. ವೇಮಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಕೃಷ್ಣಬೈರೇಗೌಡರು 72000 ಮತಗಳ ಲೀಡ್‌ ಕೊಡಿಸಿದ್ದಕ್ಕೆ ಗೆದ್ದಿದ್ದರು ಎಂದು ತಿಳಿಸಿದರು.

ಕಾರ್ಯಕರ್ತರಿಗೆ ಗೊತ್ತಿದೆ: ಮುನಿಯಪ್ಪ ಗೆಲ್ಲಿಸಲು ಶ್ರಮಿಸಿದ ನಮ್ಮನ್ನೇ ಮುಗಿಸಲು ಕೆ.ಎಚ್‌.ಮುನಿಯಪ್ಪ ಕೋಲಾರ ವಿಧಾನಸಭೆ ಕ್ಷೇತ್ರಕ್ಕೆ ಒಬ್ಬರನ್ನು ಯಾವುದೋ ಊರಿನಿಂದ ತಂದುಬಿಟ್ಟು, ನನ್ನನ್ನು ಎರಡು ಬಾರಿ ಸೋಲಿಸಲು ಎಷ್ಟು ಕೆಲಸ ಮಾಡಿದರು ಎಂಬುದು ಕ್ಷೇತ್ರದ ಮತದಾರರಿಗೆ, ಜೆಡಿಎಸ್‌ ಕಾರ್ಯಕರ್ತರಿಗೆ ಗೊತ್ತಿದೆ ಎಂದು ಹೇಳಿದರು.

ಕಳೆದ ಬಾರಿಯೂ ಸಾಮಾಜಿಕ ನ್ಯಾಯದ ನೆಪದಲ್ಲಿ ಕೆ.ಎಚ್‌.ಮುನಿಯಪ್ಪ ಅಲ್ಪಸಂಖ್ಯಾತರನ್ನು ಕರೆತಂದರು. ಮನಸ್ಸಿನಲ್ಲಿ ಒಂದು ಇಟ್ಟುಕೊಂಡು ಸಾಮಾಜಿಕ ನ್ಯಾಯ ಎಂದು ನಾಟಕವಾಡಿದ್ದು, ಅವರ ಉದ್ದೇಶ ವರ್ತೂರು ಪ್ರಕಾಶ್‌ ಅವರನ್ನು ಗೆಲ್ಲಿಸುವುದಾಗಿತ್ತು. ಆದರೆ, ಕ್ಷೇತ್ರದ ಮತದಾರರು ಇದಕ್ಕೆ ಅವಕಾಶ ನೀಡಲಿಲ್ಲ. ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ನುಡಿದರು.

ಕೆಎಚ್‌ಎಂನಿಂದ ಸರ್ಕಾರ ನಡೆಯುತ್ತಿಲ್ಲ: ತಾನು ಬಡವ ಎಂದು ಹೇಳಿಕೊಂಡು ಸರ್ಕಾರದಿಂದ 4 ಎಕರೆ ಜಮೀನು ಪಡೆದುಕೊಂಡ ಈತ 410 ಎಕರೆ ಜಮೀನು ಮಾಡಿಕೊಂಡಿದ್ದಾರೆ. ಇಂತಹ ದರೋಡೆಕೋರಗೆ ಓಟ್‌ ಹಾಕಬೇಕೇ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಕೆಎಚ್‌ಎಂ ಅವರಿಂದ ಸರ್ಕಾರ ನಡೆಯುತ್ತಿಲ್ಲ, ಎರಡು ಪಕ್ಷದ ಶಾಸಕರು ಇದ್ದಾರೆ. ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತೀರ್ಮಾನಕ್ಕೆ ಬದ್ಧ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದೆ. ಲೋಕಸಭೆ ಚುನಾವಣೆಯುಲ್ಲಿ ಮೈತ್ರಿ ಮಾಡಿಕೊಂಡಿದ್ದರಿಂದ ಇಕ್ಕಟ್ಟಿನ ಸ್ಥಿತಿಯಲ್ಲಿದ್ದೇವೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಕ್ಷೇತ್ರದ ಕಾರ್ಯಕರ್ತರ ಸಭೆ ಕರೆದು ಚರ್ಚಿಸೋಣ. ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಕಾರ್ಯಕರ್ತರು, ನಾವ್ಯಾರೂ ಕೆ.ಎಚ್‌.ಮುನಿಯಪ್ಪ ಅವರಿಗೆ ಓಟ್‌ ಮಾಡುವುದಿಲ್ಲ. ಹತ್ತು ವರ್ಷಗಳಲ್ಲಿ ನಿಮಗೆ ಏನು ಕೆಲಸ ಕೊಟ್ಟಿದ್ದರು ಎಂಬುದು ಗೊತ್ತು. ಕೆರೆಗಳಲ್ಲಿ ನೀರಿಲ್ಲ, ಕೆ.ಸಿ. ವ್ಯಾಲಿ ಯೋಜನೆಯಡಿ ಬರುತ್ತಿದ್ದ ನೀರಿಗೂ ಅಡ್ಡಿ ಹಾಕಿದ್ದಾರೆ ಎಂದು ಘೋಷಣೆ ಕೂಗಿದರು.

ಹೊಡೆಯೋಕೆ ಬರ್ತಾರೆ: ನಮಗೆ ನೀರು ಕೊಡುವವರಿಗೆ ಓಟು ಹಾಕೋಣ ಎಂದು ನುಡಿದರೆ, ಹಳ್ಳಿಗಳಲ್ಲಿ ಕೆಎಚ್‌ಎಂಗೆ ಓಟು ಹಾಕಿ ಎಂದು ಮತ ಕೇಳಿದರೆ ಜನ ಹೊಡೆಯೋದಕ್ಕೆ ಬರುತ್ತಾರೆ. ಈ ಬಾರಿ ಬಿಜೆಪಿಗೆ ಮತ ನೀಡೋಣ, 5 ವರ್ಷಗಳಲ್ಲಿ ಕೆಲಸ ಮಾಡಿದ್ದರೆ ಮುಂದೆ ಅವರನ್ನೂ ಸೋಲಿಸೋಣ ಎಂದು ಬಹುತೇಕ ಕಾರ್ಯಕರ್ತರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಒಕ್ಕಲಿಗರ ಸಂಘದ ನಿರ್ದೇಶಕ ವಕ್ಕಲೇರಿ ರಾಮು, ಜೆಡಿಎಸ್‌ ತಾಲೂಕು ಅಧ್ಯಕ್ಷ ಮೂರಾಂಡಹಳ್ಳಿ ಗೋಪಾಲ್‌, ಮುಖಂಡ ಶ್ರೀಕೃಷ್ಣ, ಎಪಿಎಂಸಿ ಅಧ್ಯಕ್ಷ ವಡಗೂರು ನಾಗರಾಜ್‌, ಕೋಚಿಮುಲ್‌ ನಿರ್ದೇಶಕ ರಾಮಕೃಷ್ಣೇಗೌಡ,ಅಶ್ವತ್ಥ್, ಬೆಳಮಾರನಹಳ್ಳಿ ಆನಂದ್‌ ಉಪಸ್ಥಿತರಿದ್ದರು.

2004ರ ಲೋಕಸಭೆ ಚುನಾವಣೆಯಲ್ಲಿ ನಾವು ಯಾರನ್ನು ಗೆಲ್ಲಿಸಿದ್ದೆವೋ ಆತನೇ ನನ್ನನ್ನು ಪಕ್ಷದಿಂದ ಆಚೆಗೆ ಹಾಕಿದರು. ಕಳೆದ ಬಾರಿ ಕಾಂಗ್ರೆಸ್‌ಗೆ ಸೇರ್ಪಡೆ ಸಂಬಂಧ ದೆಹಲಿಗೆ ಕರೆದುಕೊಂಡು ಹೋಗಿ ರಾಹುಲ್‌ ಗಾಂಧಿ ಮನೆಯಲ್ಲಿ ಇದ್ದರೂ ಇಲ್ಲ ಎಂದು ಹೇಳಿ ಕಳುಹಿಸಿದ್ದರು. ನಂತರ ನಾನೇ ಹೋಗಿ ಭೇಟಿ ಮಾಡಿ ಬಂದಿದ್ದಾಯಿತು. ಇಂತಹ ದ್ರೋಹಿ ಈ ಜಗತ್ತಿನಲ್ಲೇ ಇಲ್ಲ.
-ಕೆ.ಶ್ರೀನಿವಾಸಗೌಡ, ಶಾಸಕ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.