ಆಸ್ತಿ ತೆರಿಗೆ ಸಂಗ್ರಹ ಗುರಿ ತಲುಪದ ಪಾಲಿಕೆ


Team Udayavani, Apr 2, 2019, 5:00 AM IST

proerty-tax

ಬೆಂಗಳೂರು: ತೆರಿಗೆ ವ್ಯಾಪ್ತಿಗೆ ಪ್ರತಿ ವರ್ಷ ಸಾವಿರಾರು ಆಸ್ತಿಗಳು ಸೇರ್ಪಡೆಯಾಗುತ್ತಿದ್ದರೂ, ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಾತ್ರ ಪಾಲಿಕೆ ಹಿಂದೆ ಬೀಳುತ್ತಿದೆ. ಜತೆಗೆ ತಾವೇ ಹಾಕಿಕೊಂಡ ಗುರಿ ಮುಟ್ಟುವಲ್ಲಿ ಪಾಲಿಕೆಯ ಅಧಿಕಾರಿಗಳು ಸಂಪೂರ್ಣವಾಗಿ ವಿಫ‌ಲವಾಗಿದ್ದಾರೆ.

2018-19ನೇ ಸಾಲಿನ ಆರ್ಥಿಕ ವರ್ಷ ಪೂರ್ಣಗೊಂಡಿದ್ದು, ಪಾಲಿಕೆಯಿಂದ ಹಾಕಿಕೊಂಡಿದ್ದ 3100 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಲು ಪಾಲಿಕೆಗೆ ಸಾಧ್ಯವಾಗಿಲ್ಲ. ಆದರೆ, ಕಳೆದ ಬಾರಿಗಿಂತಲೂ ಹೆಚ್ಚಿನ ಮೊತ್ತದ ಆಸ್ತಿ ತೆರಿಗೆ ಈ ವರ್ಷ ಸಂಗ್ರಹವಾಗಿದ್ದು, ಮಾರ್ಚ್‌ 31ರ ವೇಳೆಗೆ ಒಟ್ಟು 2,539 ಕೋಟಿ ರೂ. (ಶೇ.77.25) ತೆರಿಗೆ ಸಂಗ್ರಹವಾಗಿದೆ.

ತೆರಿಗೆ ಆಂದೋಲನ, ವಲಯವಾರು ಸಭೆ ಕರೆದು ಆಸ್ತಿ ತೆರಿಗೆ ಸಂಗ್ರಹಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಈ ಹಿಂದೆಯೇ ಮೇಯರ್‌ ಗಂಗಾಂಬಿಕೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು. ಜತೆಗೆ ಹೆಚ್ಚಿನ ತೆರಿಗೆ ಸಂಗ್ರಹಿಸುವಂತಹ ಅಧಿಕಾರಿಗಳಿಗೆ ಪ್ರಶಸ್ತಿ ನೀಡುವುದಾಗಿಯೂ ತಿಳಿಸಿದ್ದರು.

ಆದರೆ, ವಾರ್ಡ್‌ ಮಟ್ಟದ ಅಧಿಕಾರಿಗಳು ತೆರಿಗೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಯಾವುದೇ ರೀತಿಯ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಪಾಲಿಕೆ ಮತ್ತೂಮ್ಮೆ ಹಿಂದೆ ಬೀಳುವಂತಾಗಿದೆ. ಪಾಲಿಕೆಯು ರಾಜ್ಯ ಸರ್ಕಾರದಿಂದ ಬರುವ ಅನುದಾನವನ್ನು ನೆಚ್ಚಿಕೊಂಡು ಬಜೆಟ್‌ ಮಂಡನೆ ಮಾಡುತ್ತಿರುವುದರಿಂದ ಪಾಲಿಕೆಯ ಮೇಲೆ ಆರ್ಥಿಕ ಹೊರೆ ಬೀಳುತ್ತಿದ್ದು,

ಪಾಲಿಕೆಯ ಅಧಿಕಾರಿಗಳು ಸಹ ಆಸ್ತಿ ತೆರಿಗೆ ಗುರಿಯನ್ನು ಅವಾಸ್ತವಿಕವಾಗಿ ನಿಗದಿಪಡಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಅದರಂತೆ 2018-19ನೇ ಸಾಲಿನಲ್ಲಿ ಪಾಲಿಕೆಗೆ 2600 ಕೋಟಿ ರೂ. ಸಂಗ್ರಹವಾಗದಿದ್ದರೂ, 2019-20ನೇ ಸಾಲಿನಲ್ಲಿ 3,500 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿರುವುದು ಅವಾಸ್ತವಿಕ ಎಂಬುದು ಪ್ರತಿಪಕ್ಷ ಬಿಜೆಪಿಯ ಆರೋಪವಾಗಿದೆ.

ಆಸ್ತಿ ಸಂಖ್ಯೆ ಹೆಚ್ಚಳ: ವರ್ಷದಿಂದ ವರ್ಷಕ್ಕೆ ತೆರಿಗೆ ವ್ಯಾಪ್ತಿಗೆ ಬರುವ ಆಸ್ತಿಗಳ ಸಂಖ್ಯೆ ಹೆಚ್ಚುತ್ತಿದೆ. ಈಗಾಗಲೇ ಪಾಲಿಕೆಯ ವ್ಯಾಪ್ತಿಯಲ್ಲಿ 19 ಲಕ್ಷ ಆಸ್ತಿಗಳನ್ನು ಗುರುತಿಸಲಾಗಿದ್ದು, ಕಳೆದ ಎರಡು ವರ್ಷಗಳಲ್ಲಿ 2 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬಂದಿವೆ.

2017-18 ನೇ ಸಾಲಿನಲ್ಲಿ 1.58 ಲಕ್ಷ ಆಸ್ತಿಗಳು ಹಾಗೂ 2018-19ರಲ್ಲಿ 80 ಸಾವಿರ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಅವುಗಳಿಗೆ ತೆರಿಗೆ ನಿಗದಿಪಡಿಸಿ ಸಂಗ್ರಹಕ್ಕೆ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯ ತೋರಿರುವುದು ಒಂದೆಡೆಯಾದರೆ, ಕೆಲವೆಡೆಗಳಲ್ಲಿ ಬೃಹತ್‌ ಕಟ್ಟಡ ಮಾಲೀಕರೊಂದಿಗೆ ಶಾಮೀಲಾಗಿ ಪಾಲಿಕೆಗೆ ವಂಚಿಸುವುದು ಕಂಡುಬರುತ್ತಿದೆ.

ಏಪ್ರಿಲ್‌ ನಂತರ ಶೇ.5 ರಿಯಾಯಿತಿ ಅನುಮಾನ: ಏ.1ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಏ.1ರಿಂದ 30ರೊಳಗೆ ಆಸ್ತಿಗೆ ತೆರಿಗೆ ಪಾವತಿಸುವವರಿಗೆ ಪಾಲಿಕೆಯಿಂದ ಶೇ.5ರಷ್ಟು ರಿಯಾಯಿತಿ ದೊರೆಯಲಿದೆ.

ಜತೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 25ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಆ ಹಿನ್ನೆಲೆಯಲ್ಲಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆಯಾಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಶೇ.5ರಷ್ಟು ರಿಯಾಯಿತಿ ಪಡೆಯಬಯಸುವವರು ಏ.30ರೊಳಗೆ ತೆರಿಗೆ ಪಾವತಿಸುವುದು ಉತ್ತಮ.

ಐದು ವರ್ಷಗಳ ತೆರಿಗೆ ಸಂಗ್ರಹ ವಿವರ
ವರ್ಷ ಗುರಿ ಸಂಗ್ರಹ (ಕೋಟಿ ರೂ.ಗಳಲ್ಲಿ )
-2014-15 2,900 1,810
-2015-16 2,456 1,900
-2016-17 2,300 2,156
-2017-18 2,600 2,165
-2018-19 3,100 2,539

ಟಾಪ್ ನ್ಯೂಸ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.