ಕತ್ತಿ ಸಹೋದರರು ಸಂಪರ್ಕದಲ್ಲಿದ್ದರೆ ತಪ್ಪೇನು?
Team Udayavani, Apr 3, 2019, 3:00 AM IST
ಬೆಳಗಾವಿ: “ಮಾಜಿ ಸಂಸದ ರಮೇಶ ಕತ್ತಿಗೆ ಕಾಂಗ್ರೆಸ್ ನಾಯಕರು ಕರೆ ಮಾಡಿರಬಹುದು. ಪಕ್ಷಕ್ಕೆ ಬರ್ತಿರಾ ಎಂದು ಕೇಳಿರಬಹುದು. ನಾನೂ ಕತ್ತಿ ಸಹೋದರರ ಜತೆಗೆ ಆಗಾಗ ಸಂಪರ್ಕದಲ್ಲಿ ಇರುತ್ತೇನೆ’ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕತ್ತಿ ಅವರನ್ನು ಸಂಪರ್ಕಿಸಿರುವುದನ್ನೇ ದೊಡ್ಡದಾಗಿ ಮಾಡುವುದು ತಪ್ಪಲ್ಲ. ಅಸಮಾಧಾನ ಇದ್ದಾಗ ಈ ರೀತಿ ಕೇಳುವುದು ಸಹಜ. ಬೇರೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಕತ್ತಿ ಸಹೋದರರ ಜತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಕತ್ತಿ ಅವರನ್ನು ಈ ಹಿಂದೆ ಜಿದ್ದಾಜಿದ್ದಿಗಾಗಿ ಸೋಲಿಸಿದ್ದೇವೆ ಎಂದು ಹೇಳಿದರು.
ರಾಹುಲ್ ಗಾಂಧಿ ಅವರಿಗೆ ಬಚ್ಚಾ ಎನ್ನುವ ಹೇಳಿಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದು ಅವರ ಸಂಸ್ಕೃತಿ, ಪ್ರಬುದ್ಧತೆ ತೋರಿಸುತ್ತದೆ.
ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗಳು ಕೂಡ ಹೀಗೆಯೇ ಇರುತ್ತವೆ. 30 ವರ್ಷದಿಂದ ಭವಿಷ್ಯ ಹೇಳುತ್ತಿದ್ದಾರೆ. ಇನ್ನೂವರೆಗೆ ಯಾವುದೂ ನಿಜವಾಗಿಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡದಿರುವುದೇ ಒಳ್ಳೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ