ನಷ್ಟದಿಂದ ನಲುಗಿದ ಸಂಸ್ಥೆ: ಜೆಟ್‌ ಕುಸಿತ ದುರದೃಷ್ಟಕರ


Team Udayavani, Apr 4, 2019, 6:00 AM IST

c-12

ಜೆಟ್‌ ಏರ್‌ವೇಸ್‌ ಬಿಕ್ಕಟ್ಟು ದಿನ ಕಳೆದಂತೆ ಉಲ್ಬಣಿಸುತ್ತಿದೆ. ಇದೀಗ ಸಂಸ್ಥೆಯಲ್ಲಿ ಬರೀ 15 ವಿಮಾನಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎಂದು ಸ್ವತಃ ವಾಯುಯಾನ ಇಲಾಖೆಯ ಕಾರ್ಯದರ್ಶಿಯೇ ಒಪ್ಪಿಕೊಂಡಿದ್ದಾರೆ. ಚುನಾವಣಾ ಸಮಯದಲ್ಲಿ ಸರಕಾರಕ್ಕಂತೂ ಇದು ಕಹಿಯಾದ ಸುದ್ದಿ. ಜೆಟ್‌ ಸಂಪೂರ್ಣ ಖಾಸಗಿ ಕಂಪೆನಿಯಾಗಿದ್ದರೂ ಅದರ ಅಧಃಪತನ ಸರಕಾರದ ಉದ್ಯಮ ಸ್ನೇಹಿ ಎಂಬ ಹಿರಿಮೆಗೆ ಇನ್ನಿಲ್ಲದ ಹಾನಿ ಉಂಟು ಮಾಡಲಿದೆ.

ಒಂದು ಕಾಲದಲ್ಲಿ 119 ಜೆಟ್‌ ವಿಮಾನಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಹೆಚ್ಚುತ್ತಿರುವ ಸಾಲದ ಹೊರೆ ಮತ್ತು ನಷ್ಟದಿಂದಾಗಿ ಸಂಸ್ಥೆಯ ಬಳಿ ಈಗ ಸಿಬಂದಿಗಳಿಗೆ ವೇತನ ಪಾವತಿಸಲೂ ಹಣವಿಲ್ಲ. ಪ್ರತಿವಾರ 10-15ರಂತೆ ಜೆಟ್‌ ವಿಮಾನಗಳು ಹಾರಾಟ ಸ್ಥಗಿತಗೊಳಿಸುತ್ತಿವೆ. ಇದೇ ರೀತಿ ಮುಂದುವರಿದರೆ ಪರಿಸ್ಥಿತಿ ಏನಾಗಬಹುದು ಎನ್ನುವುದು ಗೋಡೆ ಮೇಲಿನ ಬರಹದಷ್ಟೇ ನಿಚ್ಚಳ. ಹೀಗಾಗಿ ಜೆಟ್‌ ಇನ್ನೊಂದು ಕಿಂಗ್‌ಫಿಶರ್‌ ಆಗಬಾರದೆಂದು ಸರಕಾರ ಮತ್ತು ಜೆಟ್‌ಗೆ ಸಾಲ ಕೊಟ್ಟಿರುವ ಬ್ಯಾಂಕ್‌ಗಳು ಈಗಾಗಲೇ ಕಾರ್ಯ ಪ್ರವೃತ್ತವಾಗಿವೆ. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ಜೆಟ್‌ನ್ನು ಪಾರು ಮಾಡುವುದು ಎಣಿಸಿದಷ್ಟು ಸುಲಭವಲ್ಲ.

ಜೆಟ್‌ ಬಿಕ್ಕಟ್ಟಿನಿಂದ ಪ್ರತ್ಯಕ್ಷವಾಗಿ 16,000 ಮತ್ತು ಪರೋಕ್ಷವಾಗಿ ಲಕ್ಷಾಂತರ ನೌಕರಿಗಳ ಮೇಲೆ ಪ್ರತಿಕೂಲ ಪರಿಣಾಮವಾಗಲಿದೆ. ಜತೆಗೆ ಬ್ಯಾಂಕುಗಳು ನೀಡಿರುವ ಸುಮಾರು 6000 ಕೋ. ರೂ. ಸಾಲದ ಮರು ವಸೂಲಿ ಹೇಗೆ ಎಂಬ ಚಿಂತೆ ಸರಕಾರಕ್ಕೆ. ಕಿಂಗ್‌ಫಿಶರ್‌ ಇದೇ ರೀತಿಯ ಪರಿಸ್ಥಿಯನ್ನು ಎದುರಿಸಿ ಮಾಲಕ ವಿದೇಶಕ್ಕೆ ಪಲಾಯನ ಮಾಡಿದ ಕಹಿ ಅನುಭವ ಎದುರಿಗೇ ಇರುವುದರಿಂದ ಜೆಟ್‌ಗೆ ಹೀಗಾಗದಂತೆ ತಡೆಯಲು ನಾನಾ ರೀತಿಯ ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ. ಆದರೆ ಇವುಗಳಲ್ಲಿ ಯಾವುದು ಸಫ‌ಲವಾಗಬಹುದು ಎನ್ನುವುದು ಸರಕಾರಕ್ಕೆ ಗೊತ್ತಿಲ್ಲ. ಜೆಟ್‌ ಸ್ಥಾಪಕ ನರೇಶ್‌ ಗೋಯಲ್‌ ಮತ್ತು ಅವರ ಪತ್ನಿ ಈಗಾಗಲೇ ನಿರ್ದೇಶಕ ಮಂಡಳಿಯಿಂದ ನಿರ್ಗಮಿಸಿ ಅಷ್ಟರಮಟ್ಟಿಗೆ ಸಂಸ್ಥೆಯನ್ನು ಪುನರುಜ್ಜೀವಗೊಳಿಸುವ ಪ್ರಯತ್ನಗಳಿಗೆ ಹಾದಿ ಮಾಡಿಕೊಟ್ಟಿದ್ದಾರೆ. ದಿವಾಳಿ ನಿಯಮವನ್ನು ಅನ್ವಯಿಸಿ ಕೋರ್ಟಿನಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸುವ ಅವಕಾಶ ಇದ್ದರೂ ಚುನಾವಣಾ ಕಾಲದಲ್ಲಿ ಪ್ರತಿಷ್ಠಿತ ಸಂಸ್ಥೆಯೊಂದನ್ನು ದಿವಾಳಿ ಎಂದು ಘೋಷಿಸುವುದು ರಾಜಕೀಯವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಸಮ ಎಂಬ ಕಾರಣಕ್ಕೆ ಸರಕಾರ ಈ ದಿಕ್ಕಿನಲ್ಲಿ ಯೋಚಿಸಿಲ್ಲ.

ಈ ಮಧ್ಯೆ ಜೆಟ್‌ ಏರ್‌ವೆಸ್‌ನ್ನು ಪಾರು ಮಾಡುವ ಸಲುವಾಗಿ ಬ್ಯಾಂಕ್‌ಗಳ ಒಕ್ಕೂಟ ರಚನೆಯ ಪ್ರಸ್ತಾವ ಇಡಲಾಗಿದೆ. ಕಿಂಗ್‌ಫಿಶರ್‌ ಸಾಲದ ಸುಳಿಯಲ್ಲಿ ತತ್ತರಿಸುತ್ತಿರುವಾಗಲೂ ಇದೇ ರೀತಿ 17 ಬ್ಯಾಂಕುಗಳು ಒಕ್ಕೂಟವನ್ನು ರಚಿಸಿ 9000 ಕೋ. ರೂ. ಹೊಸ ಸಾಲ ಮಂಜೂರು ಮಾಡಲಾಗಿತ್ತು. ಅನಂತರ ಏನಾಯಿತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ಹಿನ್ನೆಲೆಯಲ್ಲಿ ಜೆಟ್‌ಗೆ ಹೊಸ ಸಾಲ ನೀಡುವಾಗ ಬ್ಯಾಂಕ್‌ಗಳು ಎಚ್ಚರಿಕೆಯ ಹೆಜ್ಜೆ ಇಡುತ್ತಿವೆ.

1990ರ ದಶಕದಲ್ಲಿ ವಾಯುಯಾನ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ತೆರೆದ ಸಂದರ್ಭದಲ್ಲಿ ಪ್ರಾರಂಭವಾದ ಜೆಟ್‌ ದೇಶದ ಮೂರು ಅಗ್ರ ವಾಯುಯಾನ ಸಂಸ್ಥೆಗಳಲ್ಲಿ ಒಂದಾಗಿತ್ತು. ಆರಂಭದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿತ್ತು. ಜೆಟ್‌ ಸೇವೆಯೂ ಅಂತಾರಾಷ್ಟ್ರೀಯ ದರ್ಜೆಗನು ಗುಣವಾಗಿತ್ತು. ಪ್ರಯಾಣಿಕರಿಗೂ ಜೆಟ್‌ ಮೇಲೆ ಆದರಾಭಿಮಾನವಿತ್ತು. ಆದರೆ ಕಿಂಗ್‌ಫಿಶರ್‌ ಮಾದರಿಯಲ್ಲೇ ಜೆಟ್‌ ಕೂಡಾ ವಿದೇಶಿ ವಾಯುಯಾನ ಕಂಪೆನಿಗಳ ಸ್ಪರ್ಧೆಯನ್ನು ಎದುರಿಸುವಲ್ಲಿ ಎಡವಿತು. ದುಬಾರಿ ವೇತನ, ಹೆಚ್ಚಿದ ಇಂಧನ ಬೆಲೆ ಮತ್ತು ತೆರಿಗೆ ಹಾಗೂ 2000 ಇಸವಿಯಿಂದೀಚೆಗೆ ಪ್ರಾರಂಭವಾದ ದರ ಸಮರ ಇವೆಲ್ಲ ಭಾರತದ ವಾಯುಯಾನ ಸಂಸ್ಥೆಗಳಿಗೆ ಮಾರಕವಾಗಿ ಪರಿಣಮಿಸುತ್ತಿದೆ. ಸರಕಾರಿ ಸ್ವಾಮ್ಯದ ಏರ್‌ ಇಂಡಿಯಾ ಕೂಡಾ ಆರ್ಥಿಕ ಬಿಕ್ಕಟ್ಟಿನಿಂದ ಬಸವಳಿಯುತ್ತಿದೆ. ಇನ್ನುಳಿದ ಖಾಸಗಿ ವಿಮಾನ ಯಾನ ಸಂಸ್ಥೆಗಳ ಆರ್ಥಿಕ ಸ್ಥಿತಿಯೂ ತೃಪ್ತಿಕರವಾಗಿಲ್ಲ ಎನ್ನುವ ಅಂಶ ಕಳವಳಕಾರಿಯಾದದ್ದು.

ದೇಶದ ಪ್ರತಿಷ್ಠಿತ ವಿಮಾನಯಾನ ಕಂಪೆನಿಯಾಗಿದ್ದ ಜೆಟ್‌ ಏರ್‌ವೆàಸ್‌ಗೆ ಈ ದುರ್ಗತಿ ಬಂದಿರುವುದು ನಿಜಕ್ಕೂ ಬೇಸರದ ಸಂಗತಿ. ಸಂಪೂರ್ಣ ದೇಶೀಯ ಬಂಡವಾಳದಲ್ಲಿ ಪ್ರಾರಂಭವಾದ ಈ ಕಂಪೆನಿ ಹೊಸ ಉದ್ಯಮಗಳನ್ನು ಪ್ರಾರಂಭಿಸುವವರಿಗೆ ಒಂದು ಸ್ಫೂರ್ತಿ ಕತೆಯಂತಿತ್ತು. ಅದುವೇ ಈಗ ನೆಲಕಚ್ಚುತ್ತಿರುವುದು ಒಟ್ಟಾರೆ ದೇಶದ ಆರ್ಥಿಕತೆ ಅಭಿವೃದ್ಧಿಯ ದೃಷ್ಟಿಯಿಂದಲೂ ನಕಾರಾತ್ಮಕವಾದ ಬೆಳವಣಿಗೆ. ಈ ಸಂದರ್ಭದಲ್ಲಿ ನಷ್ಟದಲ್ಲಿರುವ ವಿಮಾನ ಯಾನ ಸಂಸ್ಥೆಗಳನ್ನು ಪಾರು ಮಾಡಲು ಯಾವೆಲ್ಲ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದಕ್ಕಿಂತಲೂ ಒಟ್ಟಾರೆಯಾಗಿ ವಿಮಾನ ಯಾನ ಕ್ಷೇತ್ರವನ್ನು ಬಿಕ್ಕಟ್ಟಿನಿಂದ ಪಾರು ಮಾಡುವ ಸಮಗ್ರ ನೀತಿಯೊಂದನ್ನು ರಚಿಸುವುದು ಅಗತ್ಯ. ಮುಂಬರುವ ಸರಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಲಿ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.