ತನಿಖೆ ಮುಗಿದರೂ ಕೈಸೇರದ ಹಣ


Team Udayavani, Apr 4, 2019, 3:00 AM IST

tanike

ಬೆಂಗಳೂರು: ಪ್ರತಿ ತಿಂಗಳು ಶೇ.5ರಿಂದ 20ರಷ್ಟು ಬಡ್ಡಿ, ಅಲ್ಪಾವಧಿಯಲ್ಲಿ ಹಣ ದ್ವಿಗುಣ ಹಾಗೂ ಅತೀ ಕಡಿಮೆ ಬೆಲೆಗೆ ಮನೆ ಅಥವಾ ನಿವೇಶನ ಕೊಡಿಸುವುದಾಗಿ ಸಾವಿರಾರು ಜನರಿಂದ ಕೋಟ್ಯಂತರ ರೂ. ಸಂಗ್ರಹಿಸಿ ವಂಚಿಸಿರುವ ಸುಮಾರು 10 ಕಂಪನಿಗಳ ವಿರುದ್ಧ ಸಿಐಡಿ ತನಿಖೆ ಮುಕ್ತಾಯಗೊಳಿಸಿದ್ದರೂ, ವಂಚನೆಗೊಳಗಾವದರಿಗೆ ಮಾತ್ರ ಹಣ ಕೈಸೇರಿಲ್ಲ.

ಇದುವರೆಗೂ ಮೋಸ ಮಾಡಿದ ಆರೋಪ ಹೊತ್ತಿರುವ ಕಂಪನಿಗಳಲ್ಲಿ ಅಗ್ರಿಗೋಲ್ಡ್‌, ಹಿಂದೂಸ್ತಾನ್‌ ಇನ್‌ಫ್ರಾಕನ್‌, ಮೈತ್ರಿ ಪ್ಲಾಂಟೇಷನ್‌ ಮತ್ತು ಹಾರ್ಟಿಕಲ್ಚರ್‌ ಪ್ರೈ.ಲಿ, ಗ್ರೀನ್‌ ಬಡ್ಸ್‌ ಆಗ್ರೋ ಫಾರಂ ಲಿಮಿಟೆಡ್‌, ಹರ್ಷ ಎಂಟರ್‌ಟೈನ್‌ಮೆಂಟ್‌, ಡ್ರೀಮ್ಸ್‌ ಇನ್‌ಫ್ರಾ, ಟಿಜಿಎಸ್‌, ಗೃಹ ಕಲ್ಯಾಣ, ಸೆವನ್‌ ಹಿಲ್ಸ್‌, ವೃಕ್ಷ ಬಿಜಿನೆಸ್‌ ಸಲ್ಯೂಶನ್‌, ವಿನಿವಿಂಕ್‌, ಇನ್‌ವೆಸ್ಟೆಕ್‌, ವಿಕ್ರಂ ಇನ್‌ವೆಸ್ಟ್‌ಮೆಂಟ್‌ ಪ್ರಮುಖವಾದುವು.

ಈ ಪೈಕಿ ಕೆಲವು ಕಂಪನಿಗಳು ಜನಸಾಮಾನ್ಯರಿಂದ ಹಣ ಪಡೆದು ವಂಚಿಸಿದ ಆರೋಪ ಎದುರಿಸಿದರೆ, ಇನ್ನೂ ಕೆಲವು ಕಂಪನಿಗಳ ಟಾರ್ಗೆಟ್‌ “ಆರ್ಥಿಕ ಸ್ಥಿತಿವಂತರು’. ಅಲ್ಪಾವಧಿಯಲ್ಲಿ ಹಣ ಗಳಿಸಲು ಹಪಾಹಪಿಸುವವರು, ಜತೆಗೆ ಗಣ್ಯರು, ಕ್ರೀಡಾಪಟುಗಳು, ಸಿನಿ ತಾರೆಯರು, ರಾಜಕೀಯ ಮುಖಂಡರು.

ಈ ವಂಚನೆ ಪ್ರಕರಣಗಳ ತನಿಖೆ ನಡೆಸಿರುವ ಪೊಲೀಸರು, ಹತ್ತಾರು ಮಂದಿ ಆರೋಪಿಗಳನ್ನು ಜೈಲಿಗಟ್ಟಿದ್ದು, ಅವರ ಆಸ್ತಿ-ಪಾಸ್ತಿ ಜಪ್ತಿ ಮಾಡಿದ್ದಾರೆ. ಆದರೆ, ಹಣ ಕಳೆದುಕೊಂಡವರಿಗೆ ಅಸಲು ಸಹ ಸಿಕ್ಕಿಲ್ಲ. ಕೆಲವು ಪ್ರಕರಣಗಳಲ್ಲಿ ವಂಚನೆ ಮೊತ್ತಕ್ಕೂ ಜಪ್ತಿ ಮಾಡಿಕೊಂಡ ಆಸ್ತಿ-ಪಾಸ್ತಿ ಮೌಲ್ಯಕ್ಕೂ ತುಲನೆಯಾಗದ ಕಾರಣ ಹಣ ಹೂಡಿಕೆ ಮಾಡಿದವರಿಗೆ ಮರಳಿಸಲು ಸಾಧ್ಯವಾಗಿಲ್ಲ.

ಮತ್ತೂಂದೆಡೆ ಕೆಲ ವಂಚಕ ಕಂಪನಿಗಳ ವಿರುದ್ಧ ತನಿಖೆ ನಡೆಸಿದ ಸಿಐಡಿ, ಕರ್ನಾಟಕ ರಾಜ್ಯ ಠೇವಣಿದಾರರ ಹಿತಾಸಕ್ತಿ ಸಂರಕ್ಷಣ ಅಧಿನಿಯಮ 2004ರ ಕಲಂ 3ರ ಅಡಿಯಲ್ಲಿ ಆರೋಪಿತ ಸಂಸ್ಥೆಗಳು ಮತ್ತು ಮಾಲೀಕರು ಅಥವಾ ನಿರ್ದೇಶಕರ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಮತ್ತು ಅವುಗಳ ಹರಾಜು ಪ್ರಕ್ರಿಯೆ ನಡೆಸಿ ಬರುವಂತ ಹಣವನ್ನು ಹೂಡಿಕೆದಾರರಿಗೆ ಹಿಂದಿರುಗಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಹರಾಜು ಹಾಕಲು ಸರ್ಕಾರದಿಂದ ಸಕ್ಷಮ ಪ್ರಾಧಿಕಾರ ಕೂಡ ರಚಿಸಲಾಗಿದೆ. ಆದರೆ, ಸಕ್ಷಮ ಪ್ರಾಧಿಕಾರದ ಹರಾಜು ಪ್ರಕ್ರಿಯೆಯಲ್ಲಿ ಯಾವುದೇ ಪ್ರಗತಿ ಕಂಡು ಬಂದಿಲ್ಲ.

ಹರಾಜು ಹಾಕುವ ಅಧಿಕಾರ ಇಲ್ಲ: ವಂಚಕ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿ, ಆರೋಪಿಗಳು ಅಕ್ರಮವಾಗಿ ಸಂಪಾದಿಸಿದ ಸ್ಥಿರಾಸ್ತಿ ಅಥವಾ ಚರಾಸ್ತಿಗಳನ್ನು ಜಪ್ತಿ ಮಾಡುವ ಅಧಿಕಾರ ಪೊಲೀಸರಿಗಿದೆ. ಅದನ್ನು ಮುಟ್ಟುಗೋಲು ಹಾಕಿಕೊಂಡು ಹರಾಜು ಹಾಕುವ ಅಧಿಕಾರ ಸರ್ಕಾರ ಹೊರತು ಪಡಿಸಿ ಬೇರೆ ಯಾವುದೇ ತನಿಖಾ ಸಂಸ್ಥೆಗಳಿಗಿಲ್ಲ.

ಆದರೆ, ಸರ್ಕಾರವೇ ರಚಿಸಿರುವ ಸಕ್ಷಮ ಪ್ರಾಧಿಕಾರ ಈ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದನ್ನು ಅರಿಯದ ಹೂಡಿಕೆದಾರರು ತನಿಖಾ ಸಂಸ್ಥೆಗಳ ಮೇಲೆ ಆರೋಪ ಮಾಡುತ್ತಾರೆ ಎಂದು ಸಿಐಡಿ ಅಧಿಕಾರಿಯೊಬ್ಬರು ಹೇಳಿದರು.

3,273 ಕೋಟಿ ರೂ. ಹೂಡಿಕೆ: ಇದುವರೆಗೂ ಅಗ್ರೀಗೋಲ್ಡ್‌, ಹಿಂದೂಸ್ಥಾನ್‌ ಇನ್‌ಫ್ರಾಕನ್‌, ಮೈತ್ರೀಪ್ಲಾಂಟೇಷನ್‌ ಮತ್ತು ಹಾರ್ಟಿಕಲ್ಚರ್‌ ಪ್ರೈ.ಲಿ, ಗ್ರೀನ್‌ ಬಡ್ಸ್‌ ಆಗ್ರೋ ಫಾರಂ ಲಿಮಿಟೆಡ್‌, ಹರ್ಷ ಎಂಟರ್‌ಟೈನ್‌ಮೆಂಟ್‌, ಡ್ರೀಮ್ಸ್‌ ಇನ್‌ಫ್ರಾ, ಟಿಜಿಎಸ್‌, ಗೃಹ ಕಲ್ಯಾಣ, ಸೆವನ್‌ ಹಿಲ್ಸ್‌, ವೃಕ್ಷ ಬಿಜಿನೆಸ್‌ ಸಲ್ಯೂಶನ್‌ ವಿರುದ್ಧ ರಾಜ್ಯದ ವಿವಿಧೆಡೆ ದಾಖಲಾಗಿದ್ದ 422 ಪ್ರಕರಣಗಳ ತನಿಖೆ ನಡೆಸಿರುವ ಸಿಐಡಿ, 17,93,480 ಮಂದಿ 3,273 ಕೋಟಿ ರೂ.ಗಿಂತ ಅಧಿಕ ಹಣ ಹೂಡಿಕೆ ಮಾಡಿರುವುದನ್ನು ಪತ್ತೆ ಹಚ್ಚಿದೆ. ಈ ಕಂಪನಿಗಳಿಗೆ ಸಂಬಂಧಿಸಿದ ಸುಮಾರು 594.10 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಗುರುತಿಸಿದೆ.

ಕಂಪನಿ ವಂಚನೆ ಮೊತ್ತ (ಅಂದಾಜು, ಕೋಟಿ ರೂ.ಗಳಲ್ಲಿ)
-ಅಗ್ರಿಗೋಲ್ಡ್‌ 1,640
-ಹಿಂದೂಸ್ತಾನ್‌ ಇನ್‌ಫ್ರಾಕಾನ್‌ 389
-ಸೆವನ್‌ ಹಿಲ್ಸ್‌ 81
-ಡ್ರೀಮ್ಸ್‌ ಇನ್‌ಫ್ರಾ 573
-ಟಿಜಿಎಸ್‌ 260
-ಗೃಹ ಕಲ್ಯಾಣ 277
-ವೃಕ್ಷ ಬಿಜಿನೆಸ್‌ 30
-ಹರ್ಷ ಎಂಟರ್‌ಟೈನ್‌ಮೆಂಟ್‌ 136
-ಮೈತ್ರಿ ಪ್ಲಾಂಟೆಷನ್‌ 10
-ಗ್ರೀನ್‌ ಬಡ್ಸ್‌ ಆಗ್ರೋ ಫಾರಂ 54
-ವಿನಿವಿಂಕ್‌ 203
-ಇನ್‌ವೆಸ್ಟೆಕ್‌ 200
-ವಿಕ್ರಂ ಇನ್‌ವೆಸ್ಟ್‌ಮೆಂಟ್‌ 500

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.