ಕೇಂದ್ರದಿಂದ ಹೆಲಿಕಾಪ್ಟರ್ ಕೊರತೆ ಸೃಷ್ಟಿ
ಪ್ರಚಾರಕ್ಕೆ ಅಡ್ಡಿ ಮಾಡುತ್ತಿರುವ ಬಿಜೆಪಿ ಸರ್ಕಾರ ಎಂದ ಎಚ್ಡಿಕೆ
Team Udayavani, Apr 4, 2019, 6:00 AM IST
ಚನ್ನರಾಯಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರಿಗೆ ಹೆಲಿಕಾಪ್ಟರ್ ದೊರೆಯದಂತೆ ಕುತಂತ್ರ ಮಾಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗೆ ಹೆಲಿ ಕಾ ಪ್ಟರ್ ದೊರೆತಲ್ಲಿ ಹೆಚ್ಚು ಓಡಾಡುತ್ತಾರೆ. ಇದರಿಂದ ಹೆಚ್ಚು ಜನರಿಗೆ ತಲುಪುತ್ತಾರೆ
ಎಂಬ ಕಾರಣದಿಂದಾಗಿ ಹೆಲಿಕಾಪ್ಟರ್ಗಳ ಕೊರತೆ ಸೃಷ್ಟಿಸಲಾಗಿದೆ.ಈ ಮೂಲಕ ಬಿಜೆಪಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಚಿತ್ರ ನಟರು ಛತ್ರಿಯಿಂದ ಹೊರ ಬರಲಿ: ಮಂಡ್ಯದಲ್ಲಿ ಪ್ರಚಾರ ನಡೆಸುತ್ತಿ ರುವ ನಟ ಯಶ್ ಮತ್ತು ದರ್ಶನ್ ವಿರುದಟಛಿವೂ ಹರಿಹಾಯ್ದ ಅವರು,ನಟರಿಗೆ ಸಿನಿಮಾ ಚಿತ್ರೀಕರಣ ವೇಳೆ ಛತ್ರಿಯಲ್ಲಿ ಇದ್ದು ಅನುಭವವಾಗಿದೆ. ಅವರಿಗೆ ರೈತರು ಅನುಭವಿಸುವ ಕಷ್ಟ ಗೊತ್ತಿಲ್ಲ. ಈಗಲಾದರೂ ಛತ್ರಿಯಿಂದ ಹೊರ ಬಂದು ಬಿಸಿಲ ತಾಪಮಾನ ನೋಡಲಿ. ಆಗ ನಾಡಿನ ಜನರು ಅನುಭವಿಸುವ ಕಷ್ಟಗಳು ತಿಳಿಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು