ಅಂಬರೀಶ್ ಜೊತೆ ತಾಳ್ಮೆಯಿಂದ 27 ವರ್ಷ ಸಂಸಾರ ನಡೆಸಿದ್ದೇನೆ : ಸುಮಲತಾ
ಒಳ್ಳೆಯ ಕೆಲಸಗಳು ನಮ್ಮ ಬಗ್ಗೆ ಹೇಳಬೇಕು : ಸಮಲತಾ ಸುದ್ದಿಗೋಷ್ಠಿ
Team Udayavani, Apr 4, 2019, 2:23 PM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಮುಲತಾ ಅಂಬರೀಶ್ ಅವರು ಬೆಂಗಳೂರು ಪ್ರಸ್ಕ್ಲಬ್ನಲ್ಲಿ ಸುದೀರ್ಘ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜನರ ಅಭಿಪ್ರಾಯದಂತೆ ರಾಜಕೀಯ ಪ್ರವೇಶಿಸಿದ್ದೇನೆ . ರಾಜಕೀಯ ಪ್ರವೇಶ ಮಾಡಿ ತಾಳ್ಮೆ ಕಲಿತಿಲ್ಲ. ತಾಳ್ಮೆ ಅನ್ನುವುದು ನನ್ನ ಹುಟ್ಟುಗುಣ, ಅಂಬರೀಶ್ ಅವರನ್ನು ಮದುವೆಯಾಗಿ 27 ವರ್ಷ ಸಂಸಾರ ನಡೆಸಿದ್ದೇನೆ ಇದಕ್ಕೆ ನನ್ನ ತಾಳ್ಮೆಯೆ ಕಾರಣ ಎಂದು ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದರು.
ಮೂವರು ಸುಮಲತಾರಿಂದ ಜೆಡಿಎಸ್ಗೆ ಮತಗಳು ಬೀಳುವುದಿಲ್ಲ. ಇನ್ನೊಂದು ಸುಮಲತಾಗೆ ಮಾತ್ರ ವೋಟು ಬೀಳುತ್ತದೆ ಎಂದರು.
ನಾನು ಮೊದಲು ಬರೀ ಸುಮಲತಾ ಆಗಿದ್ದೆ. ಮದುವೆ ಆದ ಮೇಲೆ ಸುಮಲತಾ ಅಂಬರೀಶ್ ಆದೆ ಎಂದರು.
ಅಂಬರೀಶ್ ಅವರು ಎಂದೂ ಅವಕಾಶವಾದಿ ರಾಜಕಾರಣಿ ಆಗಿರಲಿಲ್ಲ ಎಂದರು.
ನಾನು ಗೆದ್ದ ಬಳಿಕ ಅನುದಾನದ ಬಗ್ಗೆ ಉತ್ತರಿಸುತ್ತೇನೆ. ಅಂಬರೀಶ್ ಅವರು ಎಂದೂ ತಮ್ಮ ಕೆಲಸದ ಬಗ್ಗೆ ಹೇಳಿಕೊಂಡಿರಲಿಲ್ಲ. ನಮ್ಮ ಒಳ್ಳೆಯ ಕೆಲಸಗಳೇ ನಮ್ಮ ಬಗ್ಗೆ ಹೇಳಬೇಕು ಅನ್ನುತ್ತಿದ್ದರು ಎಂದರು.
ಅಂಬರೀಶ್ ಬಗ್ಗೆ ಗೌರವದಿಂದ ಬೆಂಬಲ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿರುವುದಾಗಿ ತಿಳಿಸಿದರು.
ಅಂಬರೀಶ್ ಅವರು ಅಜಾತ ಶತು ಆಗಿದ್ದರು. ಅವರ ಬಗ್ಗೆ ಯಾರೂ ಮಾತನಾಡುತ್ತಿರಲಿಲ್ಲ. ಆದರೆ ನನಗೆ ನೋವು ಕೊಡುವ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಮಂಡ್ಯದ ಸಮಸ್ಯೆಗಳ ಬಗ್ಗೆ ದೆಹಲಿಯಲ್ಲಿ ಹೋರಾಡಲು ಸಿದ್ದನಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ