ಕನ್ನಡ ಕೋಗಿಲೆ ಖ್ಯಾತಿಯ ಕುಮಾರಿ ಅಪೇಕ್ಷಾ ಪೈಗೆ ಸನ್ಮಾನ

ಸಿಂಧೂರ ಯುವಕ ವೃಂದದ 18 ನೇ ವಾರ್ಷಿಕೋತ್ಸವ

Team Udayavani, Apr 4, 2019, 3:35 PM IST

apeksha

ಬದಿಯಡ್ಕ : ಬೇಳ ವಿಷ್ಣುಮೂರ್ತಿ ನಗರದಲ್ಲಿ 2001ರಲ್ಲಿ ಸ್ಥಾಪನೆಗೊಂಡ ಸಿಂಧೂರ ಯುವಕ ವೃಂದವು ಇದೀಗ ಎ. 5 ರಂದು ನಡೆಯುವ ಒತ್ತೆಕೋಲದಂದು ಬಹು ವಿಜೃಂಭಣೆಯ 18 ನೇಯ ವರ್ಷಾಚರಣೆ ಹಮ್ಮಿಕೊಂಡಿದೆ. ಊರಿನ ಬಾಲಪ್ರತಿಭೆ ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಕುಮಾರಿ ಅಪೇಕ್ಷಾ ಪೈ ಅವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ

ವಿಷ್ಣು ಮೂರ್ತಿ ನಗರದ ಯುವಕರನ್ನು ಒಗ್ಗೂಡಿಸಿದ ಬೇಳ ದಿ| ದೂಮಣ್ಣ ಮಾಸ್ತರ್‌, ದಿ| ನಾರಾಯಣ ಪೋಲೀಸ್‌ ಹಾಗೂ ದಿ| ಗೋವಿಂದ ಮಣಿಯಾಣಿಯವರ ಮಾರ್ಗದರ್ಶನ ಸ್ಥಾಪಿತವಾದ ಸಿಂಧೂರ ಯುವಕ ವೃಂದವು ಪ್ರತೀ ಎರಡು ವರ್ಷಗಳಿಗೊಮ್ಮೆ ಜರಗುವ ಒತ್ತೆಕೋಲದಂದು ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸನ್ಮಾನ ಕಾರ್ಯಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿದೆ.

ಅಲ್ಲದೆ ಊರಿನ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದೆ. ಎಸ್‌.ಎಸ್‌.ಎಲ್‌.ಸಿ. ಮಕ್ಕಳಿಗೆ ಉಚಿತ ಟ್ಯೂಷನ್‌, ನುರಿತ ವೈದ್ಯರುಗಳನ್ನು ಕರೆಸಿ ಉಚಿತ ಮೆಡಿಕಲ್‌ ಕ್ಯಾಂಪ್‌, ಕ್ರೀಡೆಗೆ ಪ್ರೋತ್ಸಹವನ್ನು ನೀಡಲು ಕ್ರಿಕೆಟ್‌, ಕಬಡಿ, ಹಗ್ಗಜಗ್ಗಾಟ ಮೊದಲಾದ ಆಟೋಟಗಳನ್ನು ಆಯೋಜಿಸಿದೆ.

ಅಶಕ್ತರಿಗೂ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ಸಹಾಯ, ಕ್ಲಬ್‌ ಸದಸ್ಯರ ಚಿಕಿತ್ಸಾ ಸಹಾಯವನ್ನು ನೀಡುತ್ತದೆ. ಊರಿನ ಧಾರ್ಮಿಕ ಚಟುವಟಿಕೆಗಳಲ್ಲಿ ಶ್ರಮದಾನ ಸೇವೆಯನ್ನು ನೀಡುವಲ್ಲಿ ತನ್ನನ್ನು ಗುರುತಿಸಿಕೊಂಡಿರುವ ಹೆಗ್ಗಳಿಕೆಯೂ ಸಿಂಧೂರ ಯುವಕ ವೃಂದಕ್ಕಿದೆ. ಎ. 5ರಂದು ಸಂಭ್ರಮದಿಂದ ತನ್ನ 18 ನೇ ವಾರ್ಷಿಕೋತ್ಸವವನ್ನು ಆಚರಿಸುವ ಸಿಂಧೂರ ಯುವಕ ವೃಂದವು ಈ ಬಾರಿ ಊರಿನ ಹಿರಿಯರಾದ ವಿಷ್ಣುಮೂರ್ತಿ ಸೇವಾ ಸಮಿತಿಯ ಕೋಶಾಧಿಕಾರಿ ಏಣಿಯರ್ಪು ಚೋಯಿ ಮಣಿಯಾಣಿ ಹಾಗೂ ಏಣಿಯರ್ಪು ಕೋದಂರ್ಬತ್ತ್ ತರವಾಡಿನ ಪ್ರಧಾನ ಪೂಜಾರಿ ಬಾಲಕೃಷ್ಣರನ್ನು ಗೌರವಿಸಲಿದೆ.  ಸಮಾರಂಭದ ಅಧ್ಯಕ್ಷತೆಯನ್ನು ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಧರ ಪ್ರಸಾದ್‌ ಮಾಸ್ತರ್‌ ವಹಿಸಲಿರುವರು.

ತಂತ್ರಿವರ್ಯರಾದ ಉಳಿಯತ್ತಾಯ ಬ್ರಹ್ಮ ಶ್ರೀ ವೇ.ಮೂ. ವಿಷ್ಣು ಅಸ್ರ ಗೌರವಾರ್ಪಣೆ ಮಾಡಲಿರುವರು. ವಿಷ್ಣುಮೂರ್ತಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಮಾಸ್ತರ್‌, ಸಿಂದೂರ ಯುವಕ ವೃಂದದ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ , ಕಾರ್ಯದರ್ಶಿ ಪುಷ್ಪರಾಜ್‌ ರೈ, ಪ್ರದೀಪ್‌ ಕುಮಾರ್‌ ಶೆಟ್ಟಿ ಬೇಳ ಮೊದಲಾದವರು ಉಪಸ್ಥಿತರಿರುವರು. ರಾತ್ರಿ 9 ಗಂಟೆಗೆ ಸಿಂಧೂರ ಯುವಕ ವೃಂದದ ಪ್ರಾಯೋಜಕತ್ವದಲ್ಲಿ ಸುಧೀರ್‌ ಉಳ್ಳಾಲ್‌ ನೇತೃತ್ವದ ಸಿಟಿ ಗಾಯ್ಸ ಕುಡ್ಲ ಕ್ವೀನ್ಸ್‌ ಮಂಗಳೂರು ಇವರಿಂದ ನೃತ್ಯ ಸಿಂಚನ ಕಾರ್ಯಕ್ರಮ ಜರಗಲಿದೆ.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.