ಸಾರ್ವಜನಿಕ ಅನುಕೂಲಕ್ಕಾಗಿ ಕಾಯಂ ಜನತಾ ನ್ಯಾಯಾಲಯ

ರಾಜ್ಯದ ಆರು ಜಿಲ್ಲಾ ಕೇಂದ್ರದಲ್ಲಿ ಜನತಾ ನ್ಯಾಯಾಲಯ ಸ್ಥಾಪನೆ

Team Udayavani, Apr 4, 2019, 3:54 PM IST

4-April-19

ಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ವೀಡಿಯೋ ಕಾನ್ಫೆರೆನ್ಸ್‌ನಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವ್‌ಕುಮಾರ್‌ ಹಂಚಾಟೆ ಮಾತನಾಡಿದರು.

ಬಳ್ಳಾರಿ: ವಿವಾದಾಸ್ಪದ ಪಕ್ಷಗಳ ತೃಪ್ತಿಯೊಂದಿಗೆ ಸಾರ್ವಜನಿಕ ಉಪಯುಕ್ತತೆಗಳ ವಿವಾದಗಳನ್ನು ನಿರ್ಧರಿಸುವಲ್ಲಿ ಕಾಯಂ ಜನತಾ ನ್ಯಾಯಾಲಯ ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವಕುಮಾರ್‌ ಹಂಚಾಟೆ ತಿಳಿಸಿದರು.

ನಗರದ ಜಿಲ್ಲಾ ಕೋರ್ಟ್‌ ಆವರಣದಲ್ಲಿ ವೀಡಿಯೋ ಕಾನ್ಫೆರೆನ್ಸ್‌ ಮೂಲಕ ಮಾತನಾಡಿದ ಅವರು, ರಾಜ್ಯದಲ್ಲಿ 6 ಜಿಲ್ಲಾ ಕೇಂದ್ರದಲ್ಲಿ ಜನತಾ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ಈ ನ್ಯಾಯಾಲಯದಲ್ಲಿ 9 ಕಾನೂನಿನ ಸೇವೆಗಳಾದ ವಿಮೆ, ಬ್ಯಾಂಕಿಂಗ್‌ ಹಾಗೂ ಹಣಕಾಸು ಸಂಸ್ಥೆಗಳ ಸೇವೆ, ಪ್ರಯಾಣಿಕರನ್ನು ಅಥವಾ ಸರಕುಗಳನ್ನು ವಾಯು ಮಾರ್ಗ, ರಸ್ತೆ ಅಥವಾ ಜಲಮಾರ್ಗ ಮೂಲಕ ಸಾಗಿಸುವ ಸಾಗಣಿಕೆಯ ಸೇವೆ, ಅಂಚೆ, ಟೆಲಿಗ್ರಾಫ್‌ ಅಥವಾ ದೂರವಾಣಿ ಸೇವೆ, ಸಾರ್ವಜನಿಕರಿಗೆ ವಿದ್ಯುತ್‌, ನೀರಿನ ಸರಬರಾಜು ಮಾಡುವ ಯಾವುದೇ ಸಂಸ್ಥೆ, ಸಾರ್ವಜನಿಕ ಸಂರಕ್ಷಣೆ ಅಥವಾ ನೈರ್ಮಲ್ಯ ವ್ಯವಸ್ಥೆ, ವಸತಿ ಮತ್ತು ರಿಯಲ್‌ ಎಸ್ಟೇಟ್‌ ಸೇವೆ, ಶಿಕ್ಷಣ ಸೇವೆ ಹಾಗೂ ಇತರೆ ಸೇವೆಗಳನ್ನು ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಜನತಾ ನ್ಯಾಯಾಲಯ ಮುಖ್ಯ ಅಂಶಗಳು: ಕಾಯಂ ಜನತಾ ನ್ಯಾಯಾಲವು ಜಿಲ್ಲಾ ನ್ಯಾಯಾಧೀಶರಾಗಿರುವ ಅಥವಾ ಜಿಲ್ಲಾ ನ್ಯಾಯಾಧೀಶರಿಗಿಂತ ಹೆಚ್ಚಿನ ಶ್ರೇಣಿಯ ನ್ಯಾಯಿಕ ಅಧಿಕಾರಿಯಾಗಿರುವ ವ್ಯಕ್ತಿಯೊಬ್ಬರನ್ನು ಅದರ ಅಧ್ಯಕ್ಷರನ್ನಾಗಿ ಮತ್ತು ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದಂತೆ ಸಾಕ್ಷಷ್ಟು ಅನುಭವ ಇರುವ ಇಬ್ಬರು ವ್ಯಕ್ತಿಗಳು ಸದಸ್ಯರಾಗಿರುತ್ತಾರೆ. ವಿವಾದ ಹೊಂದಿರುವ ಯಾವುದೇ ಪಕ್ಷಕಾರನು ಸಾರ್ವಜನಿಕ ಉಪಯುಕ್ತತಾ ಸೇವೆಗಳ ಕುರಿತಂತೆ ಆ ವಿವಾದವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವುದಕ್ಕೆ ಮೊದಲು ವಿವಾದದ ಇತ್ಯರ್ಥಕ್ಕಾಗಿ ಕಾಯಂ ಜನತಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಯಾವುದೇ ಕಾನೂನಿನಡಿ ರಾಜಿ ಮಾಡಿಕೊಳ್ಳುವ ಅವಕಾಶವಿರದ ಅಪರಾಧಕ್ಕೆ ಸಂಬಂಧಿಸಿದ ವಿಷಯವನ್ನು ಇತ್ಯರ್ಥಗೊಳಿಸಲು ಕಾಯಂ ಜನತಾ ನ್ಯಾಯಾಲಯಕ್ಕೆ ಅಧಿಕಾರ ಇರುವುದಿಲ್ಲ ಎಂದು ತಿಳಿಸಿದರು.

ಕಾಯಂ ಜನತಾ ನ್ಯಾಯಾಲಯ ಹೊರಡಿಸುವ ಐತೀರ್ಪು: ಕಾಯಂ ಜನತಾ ನ್ಯಾಯಾಲಯವು ಹೊರಡಿಸುವ ಪ್ರತಿಯೊಂದು ಐತೀರ್ಪುನ್ನೂ ಸಿವಿಲ್‌ ನ್ಯಾಯಾಲಯದ ಡಿಕ್ರಿಯೆಂದೇ ಪರಿಭಾವಿಸಲಾಗುವುದು. ಈ ಅಧಿನಿಯಮದಡಿ ಪ್ರಕರಣದ ಗುಣಾವಗುಣಗಳ ಮೇರೆಗೆ ಅಥವಾ ಇತ್ಯರ್ಥದ ಒಪ್ಪಂದದಿಂದ ಹೊರಡಿಸಲಾದ ಕಾಯಂ ಜನತಾ ನ್ಯಾಯಾಲಯದ ಪ್ರತಿಯೊಂದು ಐತೀರ್ಪು ಅಂತಿಮವಾದುದಾಗಿದ್ದು ಸಂಬಂಧಿಸಿದ ಪಕ್ಷಕಾರರು ಮತ್ತು ಅವರ ಮೂಲಕ ಕ್ಲೇಮ್‌ ಮಾಡುವ ಪ್ರತಿಯೊಬ್ಬರಿಗೂ ಬಂಧನಕಾರಿಯಾಗುತ್ತದೆ. ಕಾಯಂ ಜನತಾ ನ್ಯಾಯಾಲಯ ಐತೀರ್ಪಿನ ವಿರುದ್ಧ ಯಾವುದೇ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವಂತಿಲ್ಲ ಎಂದರು.

ಕಾಯಂ ಜನತಾ ನ್ಯಾಯಾಲಯ ಜಾಗೃತಿ ಮೂಡಿಸಿ: ಕಾಯಂ ಜನತಾ ನ್ಯಾಯಾಲಯವು ಪ್ರತಿ ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ಈ ಜಾಗೃತಿ ಜಾಥಾದಲ್ಲಿ ಚರ್ಚೆ, ಪ್ರಬಂಧ ಮತ್ತು ಭಾಷಣ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ಕಾಯಂ ಜನತಾ ನ್ಯಾಯಾಲಯದ ಕುರಿತು ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮಗಳಲ್ಲಿ ಸಾಕ್ಷರತಾ ಬಸ್‌ ಸಂಚಾರದ ಮೂಲಕ ಅರಿವು ಮೂಡಿಸಬೇಕು. ಪ್ರಕರಣಗಳ ಸಂಕ್ಷಿಪ್ತವಾಗಿ ಸಾರ್ವಜನಿಕರಿಗೆ ವಿವರಿಸುವ ಪ್ರಯತ್ನವನ್ನು ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕೋರ್ಟ್‌ ವ್ಯವಸ್ಥಾಪಕ ವೀರೇಶ್‌ ಸೇರಿದಂತೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.