ಲೋಕಸಭಾ ಚುನಾವಣೆ: 4 ನಾಮಪತ್ರ ಸಲ್ಲಿಕೆ


Team Udayavani, Apr 4, 2019, 5:12 PM IST

Udayavani Kannada Newspaper

ಬಾಗಲಕೋಟೆ: ಪ್ರಸ್ತುತ ಲೋಕಸಭಾ ಚುನಾವಣೆಗೆ ಬುಧವಾರ ಒಟ್ಟು ನಾಲ್ಕು ನಾಮಪತ್ರ ಸಲ್ಲಿಕೆಯಾಗಿವೆ. ರಿಪಬ್ಲಿಕ್‌ ಪಾರ್ಟಿ ಆಪ್‌ ಇಂಡಿಯಾ ಪಕ್ಷದಿಂದ ಪರಶುರಾಮ ನೀಲನಾಯಕ, ಪಕ್ಷೇತರದಿಂದ ಶಿವರಾಜಕುಮಾರ ತಳವಾರ, ಬಹುಜನ ಮುಕ್ತಿ ಪಾರ್ಟಿ ಪಕ್ಷದಿಂದ ರಾಜೇಂದ್ರ ಆಡಗಲ್ಲ, ಬಹುಜನ ಸಮಾಜ ಪಾರ್ಟಿ ಪಕ್ಷದಿಂದ ಮಹಮ್ಮದಹುಸೇನ ಮುಜಾವರ ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿಯವರೆಗೆ ಒಟ್ಟು 18 ನಾಮಪತ್ರ ಸಲ್ಲಿಕೆಯಾಗಿದ್ದು, ಪಕ್ಷೇತರದಿಂದ ರವಿ ಪಡಸಲಗಿ 4 ನಾಮಪತ್ರ, ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ 3 ನಾಮಪತ್ರ, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಎಂ.ಶಶಿಕುಮಾರ 2, ಹಿಂದೂಸ್ತಾನ ಜನತಾ ಪಾರ್ಟಿಯಿಂದ ರಾಮನಗೌಡ ಬಾಳವಾಡ 2, ಬಿಜೆಪಿಯಿಂದ ಪಿ.ಸಿ.ಗದ್ದಿಗೌಡರ, ಸೆಕ್ಯುಲರ್‌ ಡೆಮೊಕ್ರೆಟಿಲ್‌ ಕಾಂಗ್ರೆಸ್‌ನಿಂದ ಬಸವನಗೌಡ ಮೇಟಿ, ರೈತ ಭಾರತ ಪಾರ್ಟಿಯಿಂದ ಮುತ್ತಪ್ಪ ಹಿರೇಕುಂಬಿ, ರಿಪಬ್ಲಿಕ್‌ ಪಾರ್ಟಿ ಆಪ್‌ ಇಂಡಿಯಾದಿಂದ ಪರಶುರಾಮ ನೀಲನಾಯಕ, ಪಕ್ಷೇತರದಿಂದ ಶಿವರಾಜಕುಮಾರ ತಳವಾರ, ಬಹುಜನ ಮುಕ್ತಿ ಪಾರ್ಟಿಯಿಂದ ರಾಜೇಂದ್ರ ಆಡಗಲ್ಲ, ಬಹುಜನ ಸಮಾಜ ಪಾರ್ಟಿಯಿಂದ ಮಹಮ್ಮದಹುಸೇನ ಮುಜಾವರ ಅವರಿಂದ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್‌.ರಾಮಚಂದ್ರನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾಘಟಬಂಧನ್‌ ಅಡ್ರೆಸ್‌ ಇಲ್ಲದಂತಾಗಲಿದೆ: ಗಾಣಗೇರ ಬೀಳಗಿ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರದ ಆಡಳಿತ ವೈಖರಿ ರಾಜ್ಯದ ಜನತೆಗೆ ಬೇಸರ ತಂದಿದೆ. ಅಭಿವೃದ್ಧಿ ಮಾಡದೆ ಆಂತರಿಕ ಕಲಹದಲ್ಲಿ ಮೈತ್ರಿ ಸರಕಾರ ಬ್ಯೂಸಿಯಾಗಿದೆ. ದೇಶದಲ್ಲಿ ಜನ್ಮತಾಳಿದ ಮಹಾಘಟಬಂಧನ ಲೋಕಸಭೆ ಚುನಾವಣೆ ನಂತರ ಅಡ್ರೆಸ್‌ ಇಲ್ಲದಂತಾಗಲಿದೆ ಎಂದು ಹೈಕೋರ್ಟ್‌ ನ್ಯಾಯವಾದಿ ಪ್ರಕಾಶ ಗಾಣಗೇರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಸಮರ್ಥ ಆಡಳಿತ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದಾರೆ. ಮೋದಿ ಆಡಳಿತ ಇಡೀ ವಿಶ್ವದ ಗಮನ ಸೆಳೆದಿದೆ. ಬಲಿಷ್ಠ ಭಾರತ ಕಟ್ಟಲು ದಣಿವರಿಯದ ನಾಯಕ ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಚುಕ್ಕಾಣಿ ಹಿಡಿಯುವುದು ಅಗತ್ಯವಿದೆ.

ದೇಶದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿ ಹೊಂದಿದ ಹಾಗೂ ಭಯೋತ್ಪಾದನೆಯ ಹುಟ್ಟಡಗಿಸುವ ಸಮರ್ಥ ನಾಯಕತ್ವದ ಗುಣ ಹೊಂದಿರುವ ಮೋದಿಯವರನ್ನು ಮತ್ತೆ ಈ ದೇಶದ ಪ್ರಧಾನಿಯನ್ನಾಗಿಸಲು ದೇಶವಾಸಿಗಳು ಪಕ್ಷಾತೀತ, ಜಾತ್ಯತೀತವಾಗಿ ಬೆಂಬಲಿಸುವುದು ಅವಶ್ಯ. ಬಿಜೆಪಿ 300ಕ್ಕೂ
ಹೆಚ್ಚು ಸ್ಥಾನ ಗಳಿಸುವ ಮೂಲಕ ಮೋದಿ ಸರಕಾರ ಪುನಃ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪಿ.ಸಿ.ಗದ್ದಿಗೌಡರು ಈಗಾಗಲೇ ಹ್ಯಾಟ್ರಿಕ್‌ ಜಯ ಸಾಧಿ ಸಿದ್ದು, ನಾಲ್ಕನೇ ಬಾರಿಗೆ ಕೂಡ ಸಂಸದರಾಗಿ ಆಯ್ಕೆಯಾಗುವುದು ಖಚಿತ. ಸೌಮ್ಯ ಸ್ವಭಾವ, ಸರಳ ಸಜ್ಜನಿಕೆಯ ಜಾತ್ಯತೀತ ವ್ಯಕ್ತಿತ್ವದ ಗದ್ದಿಗೌಡರು ಶುದ್ಧಹಸ್ತರು. ಹಾಗೂ ತತ್ವ, ಸಿದ್ಧಾಂತದ ರಾಜಕಾರಣಿಯಾಗಿದ್ದಾರೆ. ರಾಜಕಾರಣಕ್ಕೆ ಇಂತವರ ಅವಶ್ಯಕತೆ ಬಹಳಷ್ಟಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.