ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ನಳಿನ್‌-ಮಿಥುನ್‌ ಯಾರು ಗೆದ್ದರೂ ದಾಖಲೆ!


Team Udayavani, Apr 5, 2019, 10:29 AM IST

nalinmi

ಮಂಗಳೂರು: ದಕ್ಷಿಣ ಕನ್ನಡ ದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಸ್ಪರ್ಧೆ ಇದ್ದು, ಈ ಬಾರಿ ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಅಥವಾ ಕಾಂಗ್ರೆಸ್‌ನ ಮಿಥುನ್‌ ರೈ -ಇವರಲ್ಲಿ ಯಾರು ಗೆದ್ದರೂ ಕ್ಷೇತ್ರದ ಇತಿಹಾಸದಲ್ಲಿ ಅದೊಂದು ದಾಖಲೆಯೇ.

ನಳಿನ್‌ ಗೆದ್ದರೆ ಅದು ಅವರಿಗೆ ಹ್ಯಾಟ್ರಿಕ್‌ ಸಾಧನೆ. ಮಿಥುನ್‌ ಗೆದ್ದರೆ 29 ವರ್ಷಗಳ ಬಳಿಕ ಬಿಜೆಪಿಯನ್ನು ಸೋಲಿಸಿದ ಸಾಧನೆ. ಜತೆಗೆ ಈ ಕ್ಷೇತ್ರ ದಲ್ಲಿ ಗೆದ್ದವರ ಪೈಕಿ ಅವರೇ ಕಿರಿಯ ರಾಗುತ್ತಾರೆ. ಈ ಹಿಂದೆ ಗೆದ್ದ ಜನಾರ್ದನ ಪೂಜಾರಿ, ಧನಂಜಯ ಕುಮಾರ್‌ ಮತ್ತು ನಳಿನ್‌ ಇವರೆಲ್ಲರೂ ಮೊದಲ ಬಾರಿಗೆ ಸಂಸದರಾದಾಗ 40 ದಾಟಿತ್ತು. ಮಿಥುನ್‌ ಈಗಿನ್ನೂ 35ರ ಯುವಕ.
ನಳಿನ್‌ಗೆ ಕೆಲವು ಸ್ವ ಪಕ್ಷೀಯರಿಂದಲೇ ವಿರೋಧ ಇದ್ದರೂ ಸ್ಪರ್ಧೆಗೆ ಅವಕಾಶ ಲಭಿಸಿದೆ. ಕಾಂಗ್ರೆಸ್‌ ಕೂಡ ಸ್ವ ಪಕ್ಷದ ಕೆಲವರ ವಿರೋಧ ಇದ್ದರೂ ಸಂಪ್ರದಾಯವನ್ನು ಬದಿಗೊತ್ತಿ ಯುವಕ ರಿಗೆ ಆದ್ಯತೆ ನೀಡಿದೆ. ಹಾಗಾಗಿ ಇಬ್ಬರಿಗೂ ಇದು ಪ್ರತಿಷ್ಠೆಯ ಕಣ.

ಈ ಕ್ಷೇತ್ರದಲ್ಲಿ ಮೊದಲ ಚುನಾವಣೆ (1951ರಲ್ಲಿ) ಯಿಂದ ಹಿಡಿದು 1989ರ ತನಕ ನಡೆದ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆದ್ದು, ಸತತವಾಗಿ ನಾಲ್ಕು ದಶಕಗಳ ಕಾಲ ಅದರದೇ ಪ್ರಾಬಲ್ಯವಿತ್ತು. ಕರಾವಳಿಯ ರಾಜ ಕೀಯ ಚಿತ್ರಣ ಬದಲಾದದ್ದು 1991 ರಲ್ಲಿ. ಆಗ ಬಿಜೆಪಿಯ ವಿ. ಧನಂಜಯ ಕುಮಾರ್‌ ಗೆಲ್ಲುವ ಮೂಲಕ ಕಾಂಗ್ರೆಸ್‌ ಭದ್ರಕೋಟೆ ಮುರಿಯಿತು. ಬಳಿಕ 2014ರ ವರೆಗೆ ನಡೆದ ಎಲ್ಲ 7 ಚುನಾವಣೆ ಗಳಲ್ಲಿ ಬಿಜೆಪಿ ಪಾರಮ್ಯ ಮೆರೆದಿದೆ. ಪ್ರಸ್ತುತ ಜಿಲ್ಲೆಯಲ್ಲಿ 8 ವಿಧಾನಸಭಾ ಸದಸ್ಯರ ಪೈಕಿ 7 ಮಂದಿ ಬಿಜೆಪಿಗರು. ಜಿ.ಪಂ. ಆಡಳಿತವೂ ಬಿಜೆಪಿ ಕೈಯಲ್ಲಿದೆ. ಹೀಗಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ ಪಕ್ಷದ ಪಾಲಿಗೆ ಅದು ಸಾಧನೆಯೇ ಸರಿ. ಆಗ ಕಾಂಗ್ರೆಸ್‌ನ ಘಟಾನುಘಟಿ ನಾಯಕರಿಂದ ಸಾಧ್ಯ ವಾಗದ್ದನ್ನು ಸಾಧಿಸಿದ ಹೆಗ್ಗಳಿಕೆ ಮಿಥುನ್‌ ಅವರದಾಗಲಿದೆ.

ನಳಿನ್‌ ಗೆದ್ದರೆ ಹ್ಯಾಟ್ರಿಕ್‌ ಸಾಧನೆಯ ಜತೆಗೆ ಬಿಜೆಪಿಯ ಗೆಲುವಿನ ಪರಂಪರೆ ಮುನ್ನಡೆಸಿದ ಕೀರ್ತಿಗೆ ಪಾತ್ರರಾಗುತ್ತಾರೆ. ಕಾಂಗ್ರೆಸ್‌ ಯಾರನ್ನೇ ಅಭ್ಯರ್ಥಿಯನ್ನಾಗಿ ನಿಲ್ಲಿಸಿ ದರೂ ಸೋಲಿಸಿ ಬಿಜೆಪಿಯ ಭದ್ರ ಕೋಟೆಯನ್ನು ಮತ್ತಷ್ಟು ಬಲಪಡಿಸಿದ ಖ್ಯಾತಿ ಅವರಿಗೆ ಲಭಿಸುತ್ತದೆ.

 ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.