ಕುಡಿವ ನೀರಿನ ಬರ!

ಹೆಸರಿಗಷ್ಟೇ 'ಎ' ಗ್ರೇಡ್‌ ಗ್ರಾಪಂ-ಸಮಸ್ಯೆಗಳಿಗಿಲ್ಲ ಪರಿಹಾರ

Team Udayavani, Apr 5, 2019, 11:18 AM IST

5-April-5

ಕೂಡ್ಲಿಗಿ: ಬಡೇಲಡಕು ಗೊಲ್ಲರಹಟ್ಟಿ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಗೆ ಬೇಸುತ್ತು ಗ್ರಾಪಂ ಕಚೇರಿಗೆ ತಳ್ಳುವ ಗಾಡಿಗಳಲ್ಲಿ ಖಾಲಿ ಕೊಡ ತಂದು ಪ್ರತಿಭಟನೆ ನಡೆಸಿದ ಸಂದರ್ಭ.

ಕೂಡ್ಲಿಗಿ: ಪಟ್ಟಣದಿಂದ ಕೂಗಿದರೆ ಕೇಳಿಸುವ ಬಡೇಲಡಕು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತಿದೆ ಎಂದರೆ ತಾಲೂಕಿನಿಂದ 50 ಕಿ.ಮೀ. ದೂರದಲ್ಲಿರುವ ಕಲ್ಲಹಳ್ಳಿ, ರಾಯಪುರ, ಕಾರ್ತಿಕೇಯನಹಟ್ಟಿ ಮುಂತಾದ ಗ್ರಾಮಗಳ ಸ್ಥಿತಿ ಹೇಗಿರಬಹುದು ನೀವೇ ಊಹಿಸಿಕೊಳ್ಳಿ.

ತಾಲೂಕು ಆಡಳಿತ ಕುಡಿಯುವ ನೀರಿನ ಸಮಸ್ಯೆ, ಬರದಿಂದ ಕಂಗೆಟ್ಟ ರೈತರಿಗೆ ಉದ್ಯೋಗ ಕೊಡುವುದರಲ್ಲಿ ವಿಫಲವಾಗಿದ್ದು, ಅಧಿಕಾರಿಗಳು ಹಳ್ಳಿಗಳತ್ತ ಮುಖ ಮಾಡದೆ ಸಭೆ, ಸಮಾರಂಭಗಳಿಗಷ್ಟೇ ಮೀಸಲಾಗುತ್ತಿರುವುದು ಸಾರ್ವಜನಿಕರಲ್ಲಿ ಆಡಳಿತದ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ.

ಎ ಗ್ರೇಡ್‌ ಗ್ರಾಪಂನಲ್ಲಿ ಎ ಗ್ರೇಡ್‌ ಸಮಸ್ಯೆಗಳು: ಬಡೇಲಡಕು ಗ್ರಾಪಂ ತಾಲೂಕು ಕೇಂದ್ರದಿಂದ 3 ಕಿ.ಮೀ ದೂರದಲ್ಲಿದ್ದು, ಈ ವ್ಯಾಪ್ತಿಗೆ ಬರುವ ಹಳ್ಳಿಗಳು ಕೂಡ್ಲಿಗಿ ಪಟ್ಟಣಕ್ಕೆ ಹೊಂದಿಕೊಂಡಂತಿವೆ. ಬಡೇಲಡಕು, ನಾಗಲಾಪುರ, ತುಪ್ಪಾಕನಹಳ್ಳಿ, ಸಣ್ಣ ಗೊಲ್ಲರಹಟ್ಟಿ, ದೊಡ್ಡಗೊಲ್ಲರಹಟ್ಟಿ, ಕೆಂಗಲಹಟ್ಟಿ, ಕುಪ್ಪಿನಕೆರೆ, ಈ ಚಲಬೊಮ್ಮನಹಳ್ಳಿ ಸೇರಿದಂತೆ ಒಟ್ಟು 8 ಹಳ್ಳಿಗಳು ಸೇರಿದ್ದು ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತಿದೆ.

ಕುಡಿಯುವ ನೀರಿನ ಸಮಸ್ಯೆ ಇರುವುದ್ದರಿಂದ ನಾಗಾಪುರ ಗ್ರಾಮಸ್ಥರಿಗೆ ಖಾಸಗಿ ಬೋರ್‌ವೆಲ್‌ನಿಂದ ನೀರು ಪೂರೈಸಲು ಗ್ರಾಪಂ ಮುಂದಾಗಿದೆ. ಬಡೇಲಡಕು ಹೊಸ ಊರು ಹಾಗೂ ದೊಡ್ಡ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದ್ದರಿಂದ 3 ಖಾಸಗಿ ಬೋರ್‌ವೆಲ್‌ ಮೂಲಕ ಕುಡಿಯುವ ನೀರು ಪೂರೈಸಲು ಮುಂದಾಗಿದ್ದರೂ ನೀರು ಸಾಕಾಗುತ್ತಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಖಾಲಿ ಕೊಡಗಳಿಂದ ಗ್ರಾಪಂ ಮುತ್ತಿಗೆ: ಇತ್ತೀಚಿಗೆ ಬಡೇಲಡಕು ಗೊಲ್ಲರಹಟ್ಟಿಯ ಜನ ಕುಡಿಯುವ ನೀರಿಗಾಗಿ ತಳ್ಳುವ ಗಾಡಿಗಳಲ್ಲಿ ಖಾಲಿ ಕೊಡ ತಂದು ಗ್ರಾಪಂ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಒಂದೆಡೆ ಬಿಸಿಲಿನ ಝಳ, ಮತ್ತೂಂದೆಡೆ ಕುಡಿಯುವ ನೀರಿನ ಸಮಸ್ಯೆ ಹಳ್ಳಿಗಳ ಜನರು ಪ್ರತಿನಿತ್ಯ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಈ ಬಗ್ಗೆ ಗ್ರಾಪಂ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಇದರಿಂದ ಬೇಸತ್ತು ಇತ್ತೀಚಿಗೆ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿದ್ದೇವೆ. ಎಲ್ಲಿಯವರೆಗೆ ಸಹಿಸಿಕೊಂಡು ಇರೋದು. ನಮ್ಮ ತಾಳ್ಮೆ ಪರೀಕ್ಷೆ ಮಾಡ್ತಿರೋದಕ್ಕೆ ಅಧಿಕಾರಿಗಳ ವಿರುದ್ಧ ನಮ್ಮ ಆಕ್ರೋಶವಿದೆ.
. ಬಾಲಪ್ಪ,
ರೈತ, ಬಡೇಲಡಕು ಗೊಲ್ಲರಹಟ್ಟಿ.

ಬಡೇಲಡಕು ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಹಾಗಾಗಿ ನಾಗಲಾಪುರ ಗ್ರಾಮದಲ್ಲಿ ಹಾಗೂ ಬಡೇಲಡಕು ಹೊಸ ಊರು, ಬಡೇಲಡಕು ಗೊಲ್ಲರಹಟ್ಟಿ ಗ್ರಾಮಗಳಿಗೆ ಗ್ರಾಮದ ಪಕ್ಕದಲ್ಲಿರುವ ರೈತರ ಪಂಪ್‌ಸೆಟ್‌ಗಳಿಂದ ಕುಡಿಯುವ ನೀರು ಪೂರೈಸುವ ಮೂಲಕ ಬಹುತೇಕ ನೀರಿನ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದೇವೆ.
. ಮೂಕಪ್ಪ, ಪಿಡಿಒ , ಗ್ರಾಪಂ.

„ಕೆ.ನಾಗರಾಜ್‌

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.