ಬಿಲ್ಲವರ ಅಸೋಸಿಯೇಶನ್‌ ಮೀರಾರೋಡ್‌ : ವಿಶ್ವ ರಂಗಭೂಮಿ ದಿನಾಚರಣೆ


Team Udayavani, Apr 5, 2019, 2:37 PM IST

0404mum01

ಮುಂಬಯಿ: ವಿಶ್ವ ರಂಗಭೂಮಿ ದಿನವನ್ನು ಇಂಟರ್‌ನ್ಯಾಶನಲ್‌ ಥಿಯೇಟರ್‌ ಇನ್‌ಸ್ಟಿಟ್ಯೂಟ್‌ 1961ರಲ್ಲಿ ಆಚರಿಸಲು ಆರಂಭಿಸಿತು. ವಿಶ್ವದೆಲ್ಲೆಡೆ ಈ ದಿನವನ್ನು ರಂಗ ಮಂದಿರ ಸಮುದಾಯಗಳು ತುಂಬಾ ಅರ್ಥಪೂರ್ಣವಾಗಿ ಆಚರಿಸುತ್ತಿದ್ದು, ಮೀರಾರೋಡ್‌ ಪರಿಸರದಲ್ಲಿ ಇದೇ ಮೊದಲ ಬಾರಿಗೆ ವಿಶ್ವ ರಂಗಭೂಮಿ ದಿನವನ್ನು ಮಾ. 27ರಂದು ಆಚರಿಸಲಾಯಿತು. ಬಿಲ್ಲವರ ಅಸೋಸಿಯೇಶನ್‌ ಮೀರಾರೋಡ್‌ ಸ್ಥಳೀಯ ಸಂಸ್ಥೆಯ ನಾಟಕ ಕಲಾವಿದರು ಇದರ ಆಯೋಜನೆಯನ್ನು ಮಾಡಿದರು.

ರಂಗನಟ, ಚಿತ್ರನಟ ಜಿ. ಕೆ. ಕೆಂಚನಕೆರೆ ಹಾಗೂ ಸ್ಥಳೀಯ ಕಚೇರಿಯ ಅಧ್ಯಕ್ಷರಾದ ವಿಶ್ವನಾಥ್‌ ಸಾಲ್ಯಾನ್‌ ನೇತೃತ್ವದಲ್ಲಿ ಒಂದು ಸಂವಾದ ಈ ಸಂದರ್ಭದಲ್ಲಿ ನೆರವೇರಿತು. ಉಪನ್ಯಾಸಕರಾಗಿ ಭಾಗವಹಿಸಿದ ಹಿರಿಯ ರಂಗತಜ್ಞ, ಕಲಾವಿದ ಗುಣಪಾಲ್‌ ಉಡುಪಿ ಅವರು ಮಾತನಾಡಿ, ಕಲೆ, ಸಂಗೀತ, ಅಭಿನಯ ಕಲೆ, ಸಾಹಿತ್ಯ, ಪ್ರದರ್ಶನಾಭ್ಯಾಸ, ನಿರ್ದೇಶನ, ಪ್ರೇಕ್ಷಕವರ್ಗ, ನಾಟಕ ಕಂಪೆನಿಗಳು, ಬೀದಿನಾಟಕ, ಜನಪದ ನಾಟಕ, ನವರಸಗಳು ಹಾಗೂ ನಟನ ಗುಣ ಲಕ್ಷಣಗಳು ಇವೆಲ್ಲ ವಿಷಯಗಳ ಬಗ್ಗೆ ಸವಿವರ ಮಾಹಿತಿಯನ್ನು ನೀಡಿದರು. ರಂಗ ಭೂಮಿಯ ಮೂಲಕ ಜಾಗತಿಕ ಶಾಂತಿ ಹಾಗೂ ಮಾನವೀಯ ಮೌಲ್ಯಗಳ ಕಾಪಾಡುವಿಕೆ ಆಗುತ್ತದೆ. ರಂಗ ಕಲೆಯ ಮೂಲ ಆಶಯ ಸಾಮಾಜಿಕ ಸ್ವಾಸ್ಥ್ಯವನ್ನು ರಕ್ಷಿಸುವುದು. ರಂಗ ಭೂಮಿ ಮನುಷ್ಯನ ಜೀವನವನ್ನು ಬೆಸೆಯುವ ಕಾರ್ಯ ಮಾಡುತ್ತದೆ ಎಂದು ನುಡಿದು, ತನ್ನ ರಂಗಭೂಮಿಯ ನಂಟನ್ನು ಹಂಚಿಕೊಂಡ ಜೆ. ಕೆ. ಕೆಂಚನಕೆರೆ ಅವರು, ಯಕ್ಷಗಾನದ ನಂಟಿನೊಂದಿಗೆ ನಾಟಕವು ಅವರನ್ನು ಅಪ್ಪಿಕೊಂಡ ಬಗೆಯನ್ನು ಭಾವಪರವಶತೆಯಿಂದ ವಿವರಿಸಿದರು. ಬಿಲ್ಲವರ ಅಸೋಸಿಯೇಶನ್‌ ಮೀರಾರೋಡ್‌ ಸ್ಥಳೀಯ ಕಚೇರಿಯ ಕಲಾವಿದರ ನಾಟಕ ತಂಡ ಈಗಾಗಲೇ ಮುಂಬಯಿ ಮತ್ತು ಉಪನಗರಗಳಲ್ಲಿ ಅನೇಕ ತುಳು ಕನ್ನಡ ನಾಟಕ ಪ್ರದರ್ಶನಗಳನ್ನು ನೀಡಿ¨ªಾರೆ. ಅದರ ಕಲಾವಿದರಾದ ಸದಾನಂದ ಸಾಲ್ಯಾನ್‌ ಕಾಪು, ಲೀಲಾಧರ ಸನಿಲ್‌, ಶಿಲ್ಪಾ ಪೂಜಾರಿ, ಭಾ2ರತಿ ಅಂಚನ್‌, ಶಂಕರ್‌ ಎಲ್‌. ಪೂಜಾರಿ, ನಿತೇಶ್‌ ಪೂಜಾರಿ, ಶ್ರೇಯ ಸಾಲ್ಯಾನ್‌, ಜೀವನ್‌ ಅಮೀನ್‌ ಇವರು ರಂಗದೊಂದಿಗೆ ತಮ್ಮ ಸಂಬಂಧವನ್ನು ಸಭಿಕರ ಮುಂದೆ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಲೀಲಾ ಡಿ. ಪೂಜಾರಿ, ಕವಯತ್ರಿ ಲೀಲಾ ಗಣೇಶ್‌ ಕಾರ್ಕಳ, ಸುಜಾತಾ ಕೋಟ್ಯಾನ್‌, ಅಶೋಕ ವಳದೂರು ಉಪಸ್ಥಿತರಿದ್ದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ತುಳು ಕನ್ನಡ ವೆಲ್ಫೆàರ್‌ ಅಸೋಸಿಯೇಶನ್‌ ಅಧ್ಯಕ್ಷರಾದ ಎ. ಕೆ. ಹರೀಶ್‌, ಶೋಭಾ ಶೆಟ್ಟಿ, ಸುರೇಖಾ ಪೂಜಾರಿ ಹಾಗೂ ರಂಗದ ಆಸಕ್ತಿಯನ್ನು ಹೊಂದಿದ ಅನೇಕ ಕಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜಿ. ಕೆ. ಕೆಂಚನಕೆರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.