ಕೆರೆ ಹೂಳೆತ್ತಲು ರೈತರ ಒತ್ತಾಯ

ಶರಣೀಕ ಕುಮಾರ ದೋಖಾ, ಭಾರತೀಯ ಜೈನ ಸಂಘಟನೆ ಸದಸ್ಯಸೈದಾಪುರ: ದುಪಲ್ಲಿಯಲ್ಲಿ ಕೆರೆ ಹೂಳೆತ್ತುವುದಕ್ಕೆ ಸಂಬಂಧಿ ಸಿದಂತೆ ಬಿಜೆಎಸ್‌ ಸದಸ್ಯ ಶರಣೀಕ ಕುಮಾರ ದೋಖಾ ಭೇಟಿ ನೀಡಿ ವೀಕ್ಷಿಸಿದರು. 

Team Udayavani, Apr 5, 2019, 5:05 PM IST

5-April-35

ಸೈದಾಪುರ: ಗ್ರಾಮೀಣ ಭಾಗದ ಬಹುತೇಕ ರೈತರು ತಮ್ಮೂರಿನ ಕೆರೆಗಳ ಹೂಳು ತೆಗೆಸುವಂತೆ ಭಾರತೀಯ ಜೈನ ಸಂಘಟನೆಗೆ ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಎಸ್‌ ಕಾರ್ಯಕಾರಣಿ ಸದಸ್ಯ ಶರಣೀಕ ಕುಮಾರ ದೋಖಾ ಹೇಳಿದರು.

ರಾಂಪುರ ಕೆ., ಬಾಲಚೇಡ, ಬದ್ದೇಪಲ್ಲಿ ಹಾಗೂ ದುಪ್ಪಲ್ಲಿ ಕೆರೆಗೆ ಬುಧವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಭಾರತೀಯ ಜೈನ ಸಂಘಟನೆ ರಾಜ್ಯ ಸರಕಾರ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಕೆರೆ ಹೂಳೆತ್ತುವ ಕಾರ್ಯವನ್ನು ರೈತರು ಮೆಚ್ಚಿಕೊಂಡಿದ್ದಾರೆ. ಕೆರೆ ಹೂಳು ತೆಗೆಯುವ ಯೋಜನೆ ರಾಜ್ಯದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗಿದೆ. ಹೂಳು ತೆಗೆಯುವುದರಿಂದ ಕೆರೆಯಲ್ಲಿ ಹೆಚ್ಚಿನ ನೀರು ಸಂಗ್ರಹದ ಜತೆಗೆ ಭೂಮಿ ಅಂತರ್ಜಲ ಮಟ್ಟ ಸುಧಾರಣೆಯಾಗಲಿದೆ. ಹೂಳನ್ನು ರೈತರು ತಮ್ಮ ಹೊಲಗದ್ದೆಗಳಿಗೆ ಹಾಕಿಸಿಕೊಂಡು ಮಣ್ಣಿನ
ಫಲವತ್ತತೆ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದನ್ನು ತಿಳಿದ ಗ್ರಾಮೀಣ ಭಾಗದ ಬಹುತೇಕ ರೈತರು ದೂರವಾಣಿ ಕರೆ ಮಾಡುತ್ತಿದ್ದಾರೆ. ಅಲ್ಲದೇ ಪ್ರತ್ಯೇಕವಾಗಿ ಭೇಟಿ ನೀಡಿ ತಮ್ಮೂರಿನ
ಕೆರೆಗಳ ಹೂಳು ತೆಗೆಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

ಬಸವರಾಜಯ್ಯ ಸ್ವಾಮಿ ಬದ್ದೇಪಲ್ಲಿ, ಚಂದ್ರಶೇಖರ ವಾರದ, ಮಹಿಪಾಲರೆಡ್ಡಿ ದುಪ್ಪಲ್ಲಿ, ಕೈಲಾಸ ಆಸ್ಪಲ್ಲಿ, ಮಹಿಮೂದ್‌ ಬಡಿಗೇರ, ಭೀಮಶಪ್ಪ, ಭೀಮಣ್ಣ, ನರಸೇಗೌಡ, ಯಾಮರೆಡ್ಡಿ ದುಪ್ಪಲ್ಲಿ, ವೆಂಕಟೇಶ, ಹಣಮಂತ, ರವಿ, ಮರೆಪ್ಪ, ಸಾಬಣ್ಣ, ಭೀರಪ್ಪ, ಮಾಳಪ್ಪ, ಭೀಮಶಪ್ಪ, ಖಾಜಾಹುಸೇನ್‌, ಶಂಕ್ರಪ್ಪ, ತಿಪ್ಪಣ್ಣ ಇದ್ದರು.

ಬಿಜೆಎಸ್‌ನವರು ಸರಕಾರದ ಸಂಯುಕ್ತಾಶ್ರದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿರುವುದು ಸಕಾಲವಾಗಿದೆ. ಬೇಸಿಗೆ ಕಾಲದಲ್ಲಿ ರೈತರಿಗೆ ಹೆಚ್ಚಿನ ಕೆಲಸವಿರುವುದಿಲ್ಲ. ಜತೆಗೆ ಹೂಳನ್ನು ತಮ್ಮ ಹೊಲಗದ್ದೆಯಲ್ಲಿ ಹಾಕಿಸುವುದು ತೀರ ಸುಲಭ. ಆಕಸ್ಮಾತ್‌ ಮಳೆ ಬಂದರೆ ಇತ್ತ ಕೆರೆ ಹೂಳು ತೆಗೆಯಲು ಆಗುವುದಿಲ್ಲ. ಅತ್ತ ಹೊಲಕ್ಕೆ
ಹೋಗಲು ರಸ್ತೆಯೂ ಇರುವುದಿಲ್ಲ. ಹೀಗಾಗಿ ರೈತರ ಹಿತಕ್ಕಾಗಿ ಚುನಾವಣೆ ನೀತಿ ಸಂಹಿತೆ ಅಡ್ಡ ತರದೆ ಪಕ್ಷಾತೀತವಾಗಿ ದೇಶದ ಬೆನ್ನಲೆಬು ಆಗಿರುವ ಅನ್ನದಾತನಿಗೆ ಸಹಕಾರ ನೀಡಬೇಕಾಗಿದೆ ಎಂದು ರಾಂಪುರು ಕೆ., ಬಾಲಚೇಡ, ಬದ್ದೇಪಲ್ಲಿ ಹಾಗೂ ದುಪ್ಪಲ್ಲಿ ಗ್ರಾಮಗಳ ರೈತರು ಒತ್ತಾಯಿಸಿದರು.

ನಾವು ಅತ್ಯಂತ ಪಾರದರ್ಶಕವಾಗಿ ಕೆರೆ ಹೂಳೆತ್ತುವ ಕೆಲಸ ಮಾಡುತ್ತಿದ್ದೇವೆ ಇದರಲ್ಲಿ ಯಾರೊಬ್ಬರ ಹಸ್ತಕ್ಷೇಪ ಇರುವುದಿಲ್ಲ. ಕೆರೆ ಹೂಳು ತೆಗೆಯುವ ಹಿಟಾಚಿ, ಜೆಸಿಬಿಯಂತ್ರಗಳ ಬಾಡಿಗೆಯನ್ನು ಬಿಜೆಎಸ್‌ ನೀಡಿದರೆ ಅವುಗಳಿಗೆ ಬೇಕಾದ ಇಂಧನವನ್ನು ರಾಜ್ಯ ಸರಕಾರ ನೀಡುತ್ತದೆ. ರೈತರು ಟ್ರ್ಯಾಕ್ಟರ್‌ಗಳ ಮೂಲಕ ತಮ್ಮ ಜಮೀನುಗಳಿಗೆ ಕೊಂಡೊಯ್ಯುತ್ತಾರೆ. ಇದರಿಂದ ಅಂತರ್ಜಲ ಮಟ್ಟ ಸುಧಾರಣೆ ಜತೆಗೆ ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.

 

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.