ಬುರ್ಕಾ ಹಾಕಿಕೊಂಡು ಪ್ರಚಾರ ಮಾಡಲಿ


Team Udayavani, Apr 6, 2019, 11:53 AM IST

cm-(1)

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳು “ನಮ್ಮ ಮುಖ ನೋಡಬೇಡಿ, ಮೋದಿ ಮುಖ ನೋಡಿ ಮತ ಹಾಕಿ’ ಎಂದು ಕೇಳುತ್ತಿದ್ದಾರೆ. ಹಾಗಿದ್ದರೆ ಇವರು ಬುರ್ಕಾ ಹಾಕಿಕೊಂಡು ಪ್ರಚಾರ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿ ಕೃಷ್ಣ ಬೈರೇಗೌಡ ಪರವಾಗಿ ಪ್ರಚಾರ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸದರು ಐದು ವರ್ಷ ಏನೂ ಕೆಲಸ ಮಾಡಿಲ್ಲ.ಹೀಗಾಗಿ ಜನರಿಗೆ ಮುಖ ತೋರಿಸಲು ಧೈರ್ಯ ಇಲ್ಲದೇ ಮೋದಿ ಮುಖ ನೋಡಿ ಮತ ಹಾಕುವಂತೆ ಕೇಳುತ್ತಿದ್ದಾರೆ.

ಬಿಜೆಪಿಯವರು ನನ್ನನ್ನು ಹಿಂದೂ ಅಲ್ಲ ಎಂದು ಹೇಳುತ್ತಾರೆ. ನಮ್ಮಲ್ಲಿ ಅನೇಕ ಜಾತಿ ಧರ್ಮಗಳಿವೆ. ನಮಗೆ ಎಲ್ಲವೂ ಒಂದೇ. ಕಾಂಗ್ರೆಸ್‌ ಹಾಗೂ ನಾನು ಮಾನವತಾವಾದಿಗಳು. ಹಿಂದೂ ಧರ್ಮ ಪರಧರ್ಮ ಸಹಿಷ್ಣುತೆ ಸಾರುತ್ತದೆ. ಬಿಜೆಪಿಯವರು ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅದೇ ಕಾರಣಕ್ಕಾಗಿ ಮೋದಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂದು ಹೇಳಿದರು.

ಬಿಜೆಪಿಯವರನ್ನು ನಾವು ಸಂವಿಧಾನ ವಿರೋಧಿಗಳಂತೆ ಬಿಂಬಿಸುತ್ತಿದ್ದೇವೆ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ, ಅನಂತಕುಮಾರ್‌ ಹೆಗಡೆ ಬಹಿರಂಗವಾಗಿಯೇ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಎಂಬ ಹುಡುಗನನ್ನು ನಿಲ್ಲಿಸಿದ್ದಾರೆ. ಅವನು ಸೂರ್ಯ ಅಲ್ಲ. ಅಮವಾಸ್ಯೆ,ಇನ್ನೂ ಸಂಸತ್ತು ಪ್ರವೇಶ ಮಾಡಿಲ್ಲ. ಈಗಲೇ ಸಂವಿಧಾನ ವಿರೋಧಿ ಮಾತುಗಳನ್ನಾಡುತ್ತಾನೆ ಎಂದು ವಾಗ್ಧಾಳಿ ನಡೆಸಿದರು. ಇದೇ ವೇಳೆ, ಆದಾಯ ತೆರಿಗೆ ದಾಳಿಯನ್ನು ವಿರೋಧಿಸಿದ ಅವರು, ರಾಜಕೀಯ ಪ್ರೇರಿತ ದಾಳಿ ನಡೆಸಲಾಗುತ್ತಿದೆ. ಸದಾನಂದಗೌಡ, ಯಡಿಯೂರಪ್ಪ ಅವರ ಮನೆಗಳ ಮೇಲೆ ದಾಳಿ ಮಾಡಲಿ. ಅವರ ಮನೆಯಲ್ಲಿ ದುಡ್ಡು ಇಲ್ವಾ ? ಅಧಿಕಾರಿಗಳ ಮನೆಗಳಲ್ಲಿ ಹಣ ದೊರೆತಿದ್ದರೆ, ಅವರು ಲೆಕ್ಕ ಕೊಡುತ್ತಾರೆ ಎಂದರು.

ಇನ್ನು ಸಿದ್ದರಾಮಯ್ಯ ಅವರಿಗೆ ಅಡ್ರೆಸ್ಸೇ ಇಲ್ಲ ಎಂದು ಆರೋಪಿಸಿದ್ದ ಡಿ.ವಿ. ಸದಾನಂದಗೌಡ ಅವರಿಗೆ ತಿರುಗೇಟು ನೀಡಿರುವ ಅವರು, ಬಾದಾಮಿಯಲ್ಲಿ ಗೆದ್ದಿರುವುದು ಗೊತ್ತಿಲ್ವಾ ? ಒಂದೆರಡಲ್ಲಾ ಎಂಟು ಬಾರಿ ಶಾಸಕನಾಗಿದ್ದೇನೆ. ನನಗೆ ಹಿಂದಿ ಭಾಷೆ ಬಾರದಿರುವು ದರಿಂದ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.