ಜೋಶಿ ತಮ್ಮ ಹೆಸರಲ್ಲೇ ಚುನಾವಣೆ ಎದುರಿಸಲಿ

ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಸಿದ್ಧ ಎಂದ ವಿನಯ್‌

Team Udayavani, Apr 6, 2019, 12:45 PM IST

vinay

ಹುಬ್ಬಳ್ಳಿ: ಕಳೆದ 15 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳಿಕೊಳ್ಳುವ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ಪ್ರಧಾನಿ ಮೋದಿಯವರ ಹೆಸರು ಬಿಟ್ಟು ವೈಯಕ್ತಿಕ ನೆಲೆಗಟ್ಟಿನಲ್ಲಿ ಚುನಾವಣೆ ಎದುರಿಸಲು ಮುಂದಾಗಲಿ, ಅದಕ್ಕೆ ನಾನು ಸಿದ್ಧನಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವಿನಯ ಕುಲಕರ್ಣಿ ವರ್ಸ್‌ಸ್‌ ಪ್ರಹ್ಲಾದ ಜೋಶಿ ಎಂದು ಚುನಾವಣೆ ಎದುರಿಸಲು ಅವರು ಮುಂದಾದರೆ ಅದಕ್ಕೆ ತಾವು ಸಿದ್ಧ. ಸಂಸದರ ಆದರ್ಶಗ್ರಾಮ ಹಾರೋಬೆಳವಡಿ ಸ್ಥಿತಿ ನೋಡಿದರೆ ಜೋಶಿಯವರ ಅಭಿವೃದ್ಧಿ ಏನೆಂಬುದು ಗೊತ್ತಾಗುತ್ತದೆ. ಕೇವಲ ಹು-ಧಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ಕೈಗೊಂಡಿದ್ದು ಬಿಟ್ಟರೆ, ಹಳ್ಳಿಗಳ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದರು.

ರಾಜ್ಯದಲ್ಲಿ ಬಳಕೆಯಾಗುವ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಶುಲ್ಕವನ್ನೇ ಕೇಂದ್ರ ಸರಕಾರ ಸಿಆರ್‌ಎಫ್ ನಿಧಿ ನೀಡಿ ರಸ್ತೆಗಳ ಬಳಕೆಗೆ ನೀಡುತ್ತದೆ. ಕಳೆದ ನಾಲ್ಕು ವರ್ಷಗಳಿಂದ ಅನುದಾನ ತರದೆ, ಚುನಾವಣೆ ಸಂದರ್ಭದಲ್ಲಿ ಒಂದೇ ಬಾರಿ ಸಿಆರ್‌ಎಫ್ ಅನುದಾನ ತಂದು ಅವಳಿನಗರಕ್ಕೆ ಬಳಸಲಾಗಿದೆ. ಅವಳಿನಗರದ ಒಳ ಸಣ್ಣ ರಸ್ತೆಗಳಿಗೂ ಈ ಹಣ ಬಳಕೆ ಮಾಡಲಾಗಿದೆ. ಪಾಲಿಕೆ ಸದಸ್ಯರ ವಾರ್ಡ್‌ ನಿಧಿಯ ಕಾಮಗಾರಿ ಸಹ ತಮ್ಮದೆಂಬಂತೆ ಜೋಶಿಯವರು ಬಿಂಬಿಸಿ ಪೋಟೋಗಳಿಗೆ ಫೋಸ್‌ ನೀಡುತ್ತಿದ್ದಾರೆ ಎಂದು ದೂರಿದರು.

ಧಾರವಾಡಕ್ಕೆ ಐಐಟಿ ತಂದಿದ್ದು ತಾವೇ ಎಂಬಂತೆ ಜೋಶಿ ಹೇಳಿ ಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಪಕ್ಷದ ಈ ಭಾಗದ ಮುಖಂಡರನ್ನು ಸೇರಿಸಿ ಸಿಎಂ ಮೇಲೆ ಒತ್ತಡ ತಂದು ಧಾರವಾಡದಲ್ಲಿ ಐಐಟಿ ಸ್ಥಾಪನೆಗೆ ನಾನು ಕಾರಣ. ರಾಜ್ಯ ಸರಕಾರ ಸುಮಾರು 480 ಎಕರೆ ಭೂಮಿ ನೀಡಿದೆ ಎಂದರು.

ಅಭಿವೃದ್ಧಿ ವಿಚಾರಕ್ಕೆ ಜೋಶಿ ಚರ್ಚೆಗೆ ಬರುವುದಾದರೆ ತಾವು ಸಿದ್ಧ. ಪಾಲಿಕೆಗೆ ಪಿಂಚಣಿ ಬಾಕಿ ಹಣ ಬಾರದಿರಲು ಬಿಜೆಪಿ ಆಡಳಿತ ಇರುವ ಪಾಲಿಕೆಯಿಂದ ಸರಿಯಾದ ಬಳಕೆ ಪ್ರಮಾಣ ಪತ್ರ ಇನ್ನಿತರ ದಾಖಲೆ ನೀಡದಿರುವುದೇ ಆಗಿದೆ. ಆದಾಗ್ಯೂ ಸುಮಾರು 16 ಕೋಟಿ ರೂ. ಬಾಕಿ ಹಣ ಬಿಡುಗಡೆ ಮಾಡಿಸಿದ್ದೇ ನಾನು. ಆದರೆ ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ಹೇಳಿದರು.

ಮೋರೆ ಬೆಂಬಲಕ್ಕೆ ವಿನಯ್‌ ಮೊರೆ
ಧಾರವಾಡ: ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಎಸ್‌.ಆರ್‌. ಮೋರೆ ಅವರ ಮನೆಗೆ ಕೈ-ದಳ ಮೈತ್ರಿಅಭ್ಯರ್ಥಿ ವಿನಯಕುಲಕರ್ಣಿ ಅವರು ಶುಕ್ರವಾರ ಭೇಟಿನೀಡಿದರು. ಈ ವೇಳೆ ಮೋರೆ ಅವರಿಗೆ ಶಾಲು ಹೊದಿಸಿ, ಸನ್ಮಾನಿಸಿದ ಕುಲಕರ್ಣಿ ಈ ಚುನಾವಣೆಯಲ್ಲಿ ಬೆಂಬಲ ನೀಡಿ ಪ್ರಚಾರ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮೋರೆ, ನಾನು ಕಟ್ಟಾ ಕಾಂಗ್ರೆಸ್ಸಿಗ. ಪಕ್ಷದ ನಿರ್ಧಾರ ಸ್ವಾಗತಾರ್ಹ. ವಿನಯ ಕುಲಕರ್ಣಿ ಅವರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು. ರಾಹುಲ್‌ ಗಾಂಧಿ ಪ್ರಧಾನ ಮಂತ್ರಿ ಆಗಬೇಕಾದರೆ ವಿನಯ ಅಂತಹ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು
ಬರುವುದು ಅಗತ್ಯ. ಹೀಗಾಗಿ ಕಾರ್ಯಕರ್ತರು ತಮ್ಮಲ್ಲಿರುವ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಮರೆತು ವಿನಯ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು. ಮಹೇಶ ಶೆಟ್ಟಿ, ಬಸವರಾಜ ಜಾಧವ ಇನ್ನಿತರರಿದ್ದರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.