ರಾಷ್ಟ್ರೀಯ ಪಕ್ಷಗಳಿಗೆ ತಲೆನೋವಾದ ಪಕ್ಷೇತರರು


Team Udayavani, Apr 7, 2019, 6:00 AM IST

inde

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಉಮೇದುವಾರಿಕೆ ಸಲ್ಲಿಸುವ ಅವಧಿ ಮುಕ್ತಾಯಗೊಂಡಿದ್ದು ನಾಮಪತ್ರ ಸಲ್ಲಿಸಿದವರಲ್ಲಿ ಯಾರೆಲ್ಲ ಇದ್ದಾರೆ? ಅವರು ನಾಮಪತ್ರ ಸಲ್ಲಿಸಿದ್ದರ ಹಿಂದೆ ಏನಿದೆ “ಅರ್ಥ’ ಎಂಬ ಚರ್ಚೆ ಶುರುವಾಗಿದೆ.

ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ನಿಂದ ಡಿ.ಆರ್‌. ಪಾಟೀಲ, ಬಿಜೆಪಿಯಿಂದ ಶಿವಕುಮಾರ ಉದಾಸಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಹುಜನ ಸಮಾಜ ಪಕ್ಷದಿಂದ ಆಯೂಬಖಾನ್‌ ಪಠಾಣ, ಇಂಡಿಯನ್‌ ಲೇಬರ್‌ ಪಾರ್ಟಿಯಿಂದ ಶೈಲೇಶ ನಾಜರೆ ಅಶೋಕ, ಉತ್ತಮ ಪ್ರಜಾಕೀಯಾ ಪಾರ್ಟಿಯಿಂದ ಈಶ್ವರ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರರಾಗಿ ಬಸವರಾಜ ಶಂಕ್ರಪ್ಪ ದೇಸಾಯಿ, ರುದ್ರಯ್ಯ ಅಂದಾನಯ್ಯ ಸಾಲಿಮಠ, ವೀರಭದ್ರಪ್ಪ ವೀರಪ್ಪ ಕಬ್ಬಿಣದ, ಹನುಮಂತಪ್ಪ ದೇವೇಂದ್ರಪ್ಪ ಕಬ್ಟಾರ, ಮಂಜುನಾಥ ಕಲವೀರಪ್ಪ ಪಂಚಾನನ, ಚಂದ್ರಪ್ಪ ಅಡ್ಡಿಕಾರ, ಹಾಶಂಪೀರಾ ಇನಾಂದಾರ, ಮಖೂºಲ್‌ ಅಹ್ಮದ ಮುಲ್ಲಾ, ನಜೀರ್‌ ಅಹ್ಮದ್‌, ರಾಮಮಪ್ಪ ಸಿದ್ದಪ್ಪ ಬೊಮ್ಮಾಜಿ, ವೀರೇಶ ಮಲ್ಲಪ್ಪ ಕಿರವಾಡಿ, ಶಿದ್ದಪ್ಪ ಕಲ್ಲಪ್ಪ ಪೂಜಾರ, ಡಾ| ಟೀಪುಸಾಬ್‌
ಹುಸೇನಸಾಬ್‌ ಕಲಕೋಟಿ, ಇಸ್ಮಾಯಿಲ್‌
ಮುತ್ತುಬಾಯಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿದವರಲ್ಲಿ ಕೆಲವರು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಹಾಗೂತಮಗಿರುವ ಮತಬಲ ತೋರ್ಪಡಿಸಬೇಕು ಎಂಬಏಕೈಕ ಗುರಿಯೊಂದಿಗೆ ನಾಮಪತ್ರ ಸಲ್ಲಿಸಿದ್ದರೆ, ಇನ್ನು ಕೆಲವರು ಕ್ಷೇತ್ರದ ಒಂದಿಷ್ಟು ಮತ ಕಸಿಯಲು ಪ್ರಭಾವಿ ಅಭ್ಯರ್ಥಿಗಳ ಡೆಮ್ಮಿಯೂ ಆಗಿದ್ದಾರೆ. ಮತ್ತೆ ಇನ್ನಷ್ಟು ಜನರು ನಾಮಪತ್ರ ಸಲ್ಲಿಸಿ, ಹಿಂದಕ್ಕೆ ಪಡೆಯುವ ಹವ್ಯಾಸವುಳ್ಳವರೂ ಇದ್ದಾರೆ. ಹೀಗಾಗಿ ಯಾರು ಯಾವ ಉದ್ದೇಶದಿಂದ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಚರ್ಚೆ ಅಲ್ಲಲ್ಲಿ ನಡೆಯುತ್ತಿದೆ.
ನಾಮಪತ್ರ ಸಲ್ಲಿಸಿದ ಪಕ್ಷೇತರರಲ್ಲಿ ಯಾರು ಕಣದಲ್ಲಿ ಉಳಿದರೆ ಯಾರಿಗೆ ತೊಂದರೆಯಾಗುತ್ತದೆ. ಯಾರಿಗೆ ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಪ್ರಮುಖ ರಾಷ್ಟ್ರೀಯ ಪಕ್ಷಗಳು ತೊಡಗಿಕೊಂಡಿವೆ.ಯಾರಿಂದ ತೊಂದರೆಯಾಗುತ್ತದೆಯೋ ಅಂಥ ಅಭ್ಯರ್ಥಿಯನ್ನು ಕಣದಿಂದ ಹಿಂದಕ್ಕೆ ಸರಿಸಲು “ವಿವಿಧ ರೀತಿಯ’ ಪ್ರಯತ್ನವೂ ನಡೆಸಿದೆ.

ಕೈಗೆ ತಲೆಬಿಸಿ: ನಾಮಪತ್ರ ಸಲ್ಲಿಸಿದವರಲ್ಲಿ ಆರು ಅಭ್ಯರ್ಥಿಗಳು ಮುಸ್ಲಿಮರಾಗಿರುವುದು ಕಾಂಗ್ರೆಸ್‌ ಗೆ ತಲೆಬಿಸಿಯಾಗಿದೆ. ಬಹುಜನ ಸಮಾಜ ಪಕ್ಷದಿಂದ ಆಯೂಬಖಾನ್‌ ಪಠಾಣ, ಪಕ್ಷೇತರರಾಗಿ ಹಾನಗಲ್ಲ ತಾಲೂಕಿನ ದ್ಯಾಮನಕೊಪ್ಪದ ಹಾಶಂಪೀರಾ ಇನಾಂದಾರ್‌, ರಾಮತೀರ್ಥ ಹೊಸಕೊಪ್ಪದ
ಮಖೂºಲ್‌ ಅಹ್ಮದ ಮುಲ್ಲಾ, ಸವಣೂರಿನ ನಜೀರ್‌ ಅಹ್ಮದ್‌, ರಾಣಿಬೆನ್ನೂರಿನ ಡಾ| ಟೀಪುಸಾಬ್‌ ಹುಸೇನಸಾಬ್‌ ಕಲಕೋಟಿ ಹಾಗೂ ಶಿಗ್ಗಾವಿಯ ಇಸ್ಮಾಯಿಲ್‌ ಮುತ್ತುಭಾಯ್‌ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಈ ಬಾರಿ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡದೆ ಇರುವ ಅಸಮಾಧಾನವೇ ಹೆಚ್ಚು ಸಂಖ್ಯೆಯಲ್ಲಿ ಮುಸ್ಲಿಮರು ನಾಮಪತ್ರ ಸಲ್ಲಿಸಲು
ಕಾರಣ ಎನ್ನಲಾಗುತ್ತಿದೆ. ಮುಸ್ಲಿಂ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುತ್ತಿದೆ
ಎಂಬ ಕೂಗು ಕಾಂಗ್ರೆಸ್‌ನಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಈ ಅಸಮಾಧಾನ ಶಮನಗೊಳಿಸುವ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಅವರಿಗೆ ನೀಡಲಾಗಿದ್ದು, ಅವರು ಇದರಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಾರೋ ಕಾದು ನೋಡಬೇಕಿದೆ.

ಮೂವರ ನಾಮಪತ್ರ ತಿರಸ್ಕೃತ ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಯಸಿ
ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ ಸವಣೂರಿನ ನಜೀರ್‌ ಅಹ್ಮದ್‌ , ವೀರೇಶ ಕಿರವಾಡಿ ಹಾಗೂ ಇಸ್ಮಾಯಿಲ್‌ ಮುತ್ತಭಾಯ್‌ ಅವರ ನಾಮಪತ್ರ ತಿರಸ್ಕೃತಗೊಂಡಿವೆ. ಹೀಗಾಗಿ ಈಗ 19 ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳಲ್ಲಿ 16 ಜನರ ನಾಮಪತ್ರ ಕ್ರಮಬದ್ಧವಾಗಿದ್ದು, ಇವರಲ್ಲಿ ಎಷ್ಟು ಜನರು ನಾಮಪತ್ರ ಹಿಂದಕ್ಕೆ ಪಡೆಯುತ್ತಾರೆ ಎಂಬುದು ಏ. 8ರ ವರೆಗೆ ಕಾದುನೋಡಬೇಕಿದೆ.

ಎರಡನೇ ಬಾರಿ ಸ್ಪರ್ಧೆ
ಪಕ್ಷೇತರರಾಗಿ ಈಗ ನಾಮಪತ್ರ ಸಲ್ಲಿಸಿದವರಲ್ಲಿ ಮೂವರು ಈ ಹಿಂದಿನ 2014ರ ಚುನಾವಣೆಯಲ್ಲಿಯೂ ನಾಮಪತ್ರ ಸಲ್ಲಿಸಿ,ಕಣದಲ್ಲಿ ಉಳಿದಿದ್ದರು. ಕಳೆದ ಬಾರಿ ಪಕ್ಷೇತರರಾಗಿ ಆಖಾಡದಲ್ಲಿದ್ದ ವೀರಭದ್ರಪ್ಪ ಕಬ್ಬಿಣದ ಕಳೆದ ಚುನಾವಣೆಯಲ್ಲಿ 1224, ಸಿದ್ದಪ್ಪ ಪೂಜಾರ15,656 ಹಾಗೂ ಹನುಮಂತಪ್ಪ ಕಬ್ಟಾರ 5997 ಮತಗಳನ್ನು ಪಡೆದಿದ್ದರು.

ಎಲ್ಲ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದು ಜನರಿಗೆ ಉಚಿತ ಅಕ್ಕಿ, ಸಾಲ
ಮನ್ನಾದಂಥ ಪುಕ್ಕಟೆ ಸೌಲಭ್ಯ ಕೊಟ್ಟು ಜನರನ್ನು ಸೋಮಾರಿಯನ್ನಾಗಿ ಮಾಡುತ್ತಿವೆ. ಈ ಸೌಲಭ್ಯಗಳನ್ನು ಕೊಡುವುದು ಬಿಟ್ಟು ಎಲ್ಲ ಬಡವರಿಗೆ ವಾರ್ಷಿಕ ಒಂದು ಲಕ್ಷ ರೂ. ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರನ್ನು
ಬಡತನ ರೇಖೆಯಿಂದ ಮೇಲೆತ್ತಬೇಕು. ಎಲ್ಲ ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು ಎಂಬ ಉದ್ದೇಶದೊಂದಿಗೆ ಎರಡನೇ ಬಾರಿ ನಾಮಪತ್ರ ಸಲ್ಲಿಸಿದ್ದೇನೆ. ಕಳೆದ ಬಾರಿ 1224 ಮತಗಳು ಬಿದ್ದಿದ್ದವು. ಈ ಬಾರಿ ಇನ್ನೂ ಹೆಚ್ಚು ಮತ ಬೀಳುವ ನಿರೀಕ್ಷೆ ಇದೆ.
ವೀರಭದ್ರಪ್ಪ ಕಬ್ಬಿಣದ, 2ನೇ ಬಾರಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.