ಶರಣರು ಅಮಾವಾಸ್ಯೆ ಹೆದರಿಸುತ್ತಾರೆ
ಯಮಗಂಡ ಕಾಲ, ಗುಳಿಕ ಕಾಲ ಏನು ಮಾಡಲಾರವು
Team Udayavani, Apr 6, 2019, 5:17 PM IST
ಚಿತ್ರದುರ್ಗ: ಬಹಳಷ್ಟು ಜನರು ಅಮಾವಾಸ್ಯೆಗೆ ಹೆದರುತ್ತಾರೆ. ಈ ಹಗಲು ರಾತ್ರಿಗಳು ನಿಸರ್ಗದ ನಿಯಮಗಳು. ಆದರೆ, ಬಸವಾದಿ ಶರಣರು ಅಮಾವಾಸ್ಯೆ ಹೆದರಿಸುತ್ತಾರೆ. ರಾಹುಕಾಲ, ಯಮಗಂಡ ಕಾಲ, ಗುಳಿಕ ಕಾಲ ಏನು ಮಾಡಲಾರವು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ನಗರದ ಬಸವಕೇಂದ್ರ ಶ್ರೀ ಮುರುಘಾ ಮಠದಲ್ಲಿ ಎಸ್ಜೆಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್ ಸಹಯೋಗದಲ್ಲಿ ಶುಕ್ರವಾರ
ನಡೆದ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಠಕ್ಕೆ ವಿದ್ಯಾರ್ಥಿಗಳಾಗಿ ಬಂದು ವಿದ್ಯಾರ್ಜನೆ ಮಾಡಿ ಅಲ್ಲಲ್ಲಿ ಹುದ್ದೆಗಳನ್ನು ಪಡೆದು ಶ್ರೀಮಠದ ಜೊತೆಯಲ್ಲಿ ಸಾಗುತ್ತ
ಬಂದಿರುವ ಯುವಕರೂ ಸೇರಿದಂತೆ ಹಲವರು ಪ್ರಥಮ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ
ಕಾಲಿಟ್ಟಿದ್ದಾರೆ ಎಂದರು.
ಚಿತ್ರದುರ್ಗ ಇಂದು ಬರದ ನಾಡಾಗಿದೆ. ಸಮರ್ಪಕ ಮಳೆಯಾಗುತ್ತಿಲ್ಲ. ಅಂತರ್ಜಲ ಪಾತಾಳಕ್ಕೆ ಹೋಗಿದೆ. ನೀರಾವರಿಗಾಗಿ ಹೋರಾಟ ನಡೆಸಲಾಗುತ್ತಿದೆ. ಇಂತಹ ಬರದ
ನಾಡಿಗೆ ಈ ಸರಳ ಸಾಮೂಹಿಕ ಮಹೋತ್ಸವ ಒಂದು ವರದಾನವಾಗಿದೆ. ಮುರಿಗೆ ಶಾಂತವೀರ ಸ್ವಾಮಿಗಳು ಇಲ್ಲಿ ನೆಲೆಸಿದ
ಮೇಲೆ ಈ ಬರದನಾಡು ಭಕ್ತಿಯ ನಾಡಾಗಿದೆ. ಈ ಬಾರಿ ಅಮಾವಾಸ್ಯೆ ಮತ್ತು ಯುಗಾದಿ ಬಂದಿರುವುದರಿಂದ ವಿವಾಹ ಜೋಡಿಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.
ಕಳೆದ 29 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಮಾವಾಸ್ಯೆ ಮತ್ತು ಯುಗಾದಿ ಒಟ್ಟೊಟ್ಟಿಗೆ ಬಂದಿವೆ. ಇಲ್ಲಿಯವರೆಗೂ
16 ಸಾವಿರಕ್ಕೂ ಹೆಚ್ಚು ಜೋಡಿಗಳು ಇಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನು ಮದುವೆಗೆ ಆಗಮಿಸಿರುವ ನೀವೆಲ್ಲ ಕಾಯಕ
ಮಾಡಬೇಕು. ಹಸಿದವನಿಗೆ ಅನ್ನ ಬೇಕು. ಅನ್ನಕ್ಕಾಗಿ ಕಾಯಕ ಮಾಡಬೇಕು. ಅಭಿವೃದ್ಧಿ ಮತ್ತು ಆಧ್ಯಾತ್ಮ ಜೊತೆ ಜೊತೆಯಾಗಿ
ಸಾಗಬೇಕು. ಅಭಿವೃದ್ಧಿಯ ಕಡೆಗೆ ಕರೆದೊಯ್ಯುವುದೇ ಕಲ್ಯಾಣ ಮಾರ್ಗ. ಎಲ್ಲರೂ ತಪ್ಪದೇ ಮತ ಚಲಾಯಿಸಿ. ಹಣಕ್ಕಾಗಿ ಓಟು ಮಾರಿಕೊಳ್ಳಬಾರದು ಎಂದರು.
ಮೇದಾರ ಗುರುಪೀಠದ ಶ್ರೀ ಬಸವ ಇಮ್ಮಡಿ ಮೇದಾರ ಕೇತೇಶ್ವರ ಸ್ವಾಮೀಜಿ ವೇದಿಕೆಯಲ್ಲಿದ್ದರು. ಎಸ್ಜೆಎಂ ವಿದ್ಯಾಪೀಠ ಕಾರ್ಯುದರ್ಶಿ ಎ.ಜೆ. ಪರಮಶಿವಯ್ಯ, ಕಾರ್ಯೆನಿರ್ವಹಣಾಧಿ ಕಾರಿ ಎಂ.ಜಿ. ದೊರೆಸ್ವಾಮಿ, ಕೆಇಬಿ ಷಣ್ಮುಖಪ್ಪ, ಪೈಲ್ವಾನ್ ತಿಪ್ಪೇಸ್ವಾಮಿ, ಎನ್. ತಿಪ್ಪಣ್ಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!