ಸ್ಮಾರ್ಟ್‌ಫೋನ್‌ ಭ್ರಮೆಯಲ್ಲಿ ಯುವಕರು


Team Udayavani, Apr 8, 2019, 3:00 AM IST

smartphone

ಬೆಂಗಳೂರು: ಸ್ಮಾರ್ಟ್‌ಫೋನ್‌ ಮೂಲಕ ಜಗತ್ತಿನೊಂದಿಗೆ ಸಂಪರ್ಕ ಸಾಧಿಸಿಕೊಂಡಿದ್ದೇವೆ ಎಂಬ ಭ್ರಮೆಯಲ್ಲಿ ಬಹುತೇಕ ಯುವ ಸಮುದಾಯ ಬದುಕುತ್ತಿದ್ದು, ಆ ಮೂಲಕ ವಾಸ್ತವ ಸಮಾಜದೊಂದಿಗೆ ಸಂಪರ್ಕ ಕಡಿದುಕೊಳ್ಳುತ್ತಿದ್ದಾರೆ ಎಂದು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್‌.ಜಾಫೆಟ್‌ ಅಭಿಪ್ರಾಯಪಟ್ಟರು.

ಲಯನ್ಸ್‌ ಕ್ಲಬ್ಸ್ ಇಂಟರ್‌ನ್ಯಾಷನಲ್‌ ಭಾನುವಾರ ನಗರದ ನಿಮ್ಹಾನ್ಸ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ “ಲಯನ್ಸ್‌ ಡಿಸ್ಟ್ರಿಕ್ಟ್ 317 ಎಫ್’ನ 6ನೇ ವಾರ್ಷಿಕ ಜಿಲ್ಲಾ ಸಮಾವೇಶದ ಉದ್ದೇಶಿಸಿ ಮಾತನಾಡಿದ‌ ಅವರು, ಪ್ರಪಂಚದ ಶೇ.20ರಷ್ಟು ಯುವಕರು ಭಾರತದಲ್ಲಿ ಇದ್ದಾರೆ. ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಂದಿ 25 ವರ್ಷದೊಳಗಿನವರೇ ಇದ್ದಾರೆ.

ಈ ಬಹುತೇಕ ಯುವಜನತೆ ಸ್ಮಾಟ್‌ಫೋನ್‌ನಲ್ಲಿ ಜನ ಬ್ಯೂಸಿಯಾಗಿದ್ದು, ಅದರ ಮೂಲಕ ಜಗತ್ತಿನೊಂದಿಗೆ ಸಂಪರ್ಕ ಸಾಧಿಸಿಕೊಂಡಿದ್ದೇವೆ, ಏನನ್ನೋ ಸಾಧಿಸುತ್ತಿದ್ದೇವೆ ಎಂಬ ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಆದರೆ. ವಾಸ್ತವದಲ್ಲಿ ಸಮಾಜದಿಂದ ದೂರ ಉಳಿಯುತ್ತಾ ಕೊನೆಗೆ ಅವರಿಗೆ ಅವರೇ ಸಂಪರ್ಕ ಕಡಿದುಕೊಂಡು ಭ್ರಮಾ ಲೋಕದಲ್ಲಿದ್ದಾರೆ ಎಂದರು.

ಸಮಾಜವು ಸಂಕೀರ್ಣತೆಯಿಂದ ಕೂಡಿದೆ. ಮನೆಯಲ್ಲಿ ಪೋಷಕರು ಹಾಗೂ ಮಕ್ಕಳ ನಡುವೆ ಆತ್ಮೀಯ ಸಂಬಂಧ ಕಡಿಮೆಯಾಗುತ್ತಿದೆ. ತರಗತಿಯಲ್ಲಿ ವಿದ್ಯಾರ್ಥಿಗಳ ಗಮನದ ಮಟ್ಟ ಕಡಿಮೆಯಾಗಿದೆ. ಈ ಪೀಳಿಗೆ ವಿದ್ಯಾರ್ಥಿಗಳು ಹೆಚ್ಚೆಂದರೆ 15 ನಿಮಿಷಗಳಷ್ಟೇ ಶಿಕ್ಷಕರ ಪಾಠ ಕೇಳುತ್ತಾರೆ. ಉಳಿದಂತೆ ಅವರ ಗಮನ ಬೇರೆಲ್ಲೋ ಇರುತ್ತದೆ.

ಹೀಗಾಗಿ, ವಿದ್ಯಾರ್ಥಿಗಳ ಜತೆಗೆ ಶಿಕ್ಷಕರು ಚರ್ಚಿಸಿ ಅವರ ಮನಸ್ಸು ಮುಟ್ಟಬೇಕು. ಶಿಕ್ಷಣ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಘಗಳು ಯುವಕರೊಂದಿಗೆ ಚರ್ಚಿಸಿ ಅವರನ್ನು ಸಮಾಜದೊಂದಿಗೆ ಸಂಪರ್ಕ ಸಾಧಿಸುವಂತೆ ಮಾಡಬೇಕು. ಈ ಯುವ ಸಮೂಹದ ಸಮಾಜದೊಂದಿಗೆ ಸಂಪರ್ಕ ಸಾಧಿಸದಿದ್ದರೆ ಭಾರತ ಸೂಪರ್‌ ಪವರ್‌ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಭಾರತ ಆರ್ಥಿಕ ಹಾಗೂ ತಂತ್ರಜ್ಞಾನ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಗತಿಯಾಗುತ್ತಿದ್ದರೂ, ಇಂದಿಗೂ ನಮ್ಮ ಸಮಾಜ ಅಸ್ಥಿರತೆ ಹಾಗೂ ಅಭದ್ರತೆಯಲ್ಲಿದೆ. ಬಡವ ಹಾಗೂ ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಿದೆ.

ಇದಕ್ಕೆ ಮುಖ್ಯ ಕಾರಣ ದೇಶದ ಶೇ.60ರಷ್ಟು ಸಂಪತ್ತು ಕೇವಲ ಶೇ.1ರಷ್ಟು ಮಂದಿಯಲ್ಲಿರುವುದು. ಹೀಗಾಗಿ,ಆ ಕೇಂದ್ರೀಕೃತ ಸಂಪತ್ತನ್ನು ವಿಕೇಂದ್ರಿಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ಕ್ರಮವಹಿಸಬೇಕು. ಆಗ ಆರ್ಥಿಕ ಅಸಮಾನತೆಯ ಅಂತರ ಕಡಿಮೆ ಮಾಡಬೇಕು ಎಂದು ತಿಳಿಸಿದರು.

ಕಿದ್ವಾಯಿ ಆಸ್ಪತ್ರೆಯ ನಿವೃತ್ತ ವೈದ್ಯೆ ಡಾ.ವಿಜಯ ಲಕ್ಷ್ಮೀ ದೇಶಮಾನೆ ಮಾತನಾಡಿ, ಇಂದು “ಆಯುಷ್ಮಾನ್‌ ಭಾರತ್‌’ ಎಂಬ ಮಹತ್ವದ ಯೋಜನೆಯಿಂದ ದೇಶದಾದ್ಯಂತ ಬಡತನದಲ್ಲಿರುವ ಸಾಕಷ್ಟು ರೋಗಿಗಳಿಗೆ ಉಪಯೋಗವಾಗುತ್ತಿದೆ. ಈ ಯೋಜನೆ ರೂಪಿಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿದರು.

ಸಾಮಾಜಿಕ ಕಾರ್ಯಕರ್ತೆ ಡಾ.ಸುನೀತಾ ಕೃಷ್ಣನ್‌, ಲಯನ್ಸ್‌ ಕ್ಲಬ್ಸ್ ಜಿಲ್ಲಾ 317ಎಫ್ ಗವರ್ನರ್‌ ಸತ್ಯನಾರಾಯಣ ರಾಜು, ಮಲ್ಟಿಪಲ್‌ ಕೌನ್ಸಿಲ್‌ ಮುಖ್ಯಸ್ಥ ಎಚ್‌.ಕೆ.ಗಿರಿಧರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.