ಕಾರವಾರ ಬಂದರಿಗೆ 16.69 ಕೋಟಿ ಆದಾಯ


Team Udayavani, Apr 8, 2019, 2:09 PM IST

Udayavani Kannada Newspaper
ಕಾರವಾರ: ಕಾರವಾರದ ಸರ್ವಋತು ವಾಣಿಜ್ಯ ಬಂದರು ಏಪ್ರಿಲ್‌ 2018 ರಿಂದ ಮಾರ್ಚ್‌ 2019 ರವರೆಗೆ ದಾಖಲೆಯ ವಹಿವಾಟು ನಡೆಸಿದ್ದು, ಒಟ್ಟು 16.69 ಕೋಟಿ ಆದಾಯ ಗಳಿಸಿದೆ ಎಂದು ಬಂದರು ಅಧಿಕಾರಿ ಕ್ಯಾಪ್ಟನ್‌ ಸಿ.ಸ್ವಾಮಿ ಹೇಳಿದರು.
56 ನೇ ಮೆರಿಟೈಮ್‌ ಡೇ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಇಲ್ಲಿನ ವಾಣಿಜ್ಯ ಬಂದರು 2017-18 ನೇ ಆರ್ಥಿಕ ವರ್ಷಕ್ಕಿಂತ ಶೇ 43.89ರಷ್ಟು ಪ್ರಗತಿ ಕಂಡಿದೆ. ಬಂದರಿನ ಹಡಗು ಚಲಿಸುವ ಮಾರ್ಗದಲ್ಲಿದ್ದ ಹೂಳನ್ನು ತೆಗೆದ ಪರಿಣಾಮ ಹೆಚ್ಚಿನ ಹಡಗುಗಳು ಬರಲು ಸಾಧ್ಯವಾಯಿತು. ಇದರಿಂದಾಗಿ ಆದಾಯದಲ್ಲಿ ಏರಿಕೆ ಕಂಡಿದೆ ಎಂದು ಕ್ಯಾಪ್ಟನ್‌ ಸ್ವಾಮಿ ಹೇಳಿದರು. ಏಪ್ರಿಲ್‌ 2018 ರಿಂದ ಮಾರ್ಚ್‌ 2019 ರವರೆಗೆ ಸರಕು ಸಾಗಣೆಯ 157 ಹಡಗುಗಳು ಕಳೆದ ಕಾರವಾರ ಬಂದರಿಗೆ ಬಂದಿವೆ. ಕಳೆದ ಬಾರಿ 133 ಬಂದಿದ್ದವು. ಈ ಬಾರಿ ಶೇ 15.2ರಷ್ಟು ಏರಿಕೆಯಾಗಿದೆ. ಇದರಿಂದಾಗಿ ಕಸ್ಟಮ್ಸ್‌ ಇಲಾಖೆ 283.60 ಕೋಟಿ ಆದಾಯ ಗಳಿಸಿದೆ. ಇಲಾಖೆ ಬರೋಬ್ಬರಿ 152 ಕೋಟಿ ಆದಾಯವನ್ನು ಕೇವಲ ಡಾಂಬರು ಆಮದು ಚಟುವಟಿಕೆಗಳಿಂದಲೇ ಪಡೆದಿದೆ. 2.99 ಕೋಟಿ ಸೇವಾ ತೆರಿಗೆಯೂ ಪಾವತಿಯಾಗಿದೆ ಎಂದರು.
ಕಾರವಾರ ವಾಣಿಜ್ಯ ಬಂದರನ್ನು ಕೇಂದ್ರ ಸರ್ಕಾರವು ಹಡಗು ಸಂಚಾರ ನಿರ್ವಹಣಾ ವ್ಯವಸ್ಥೆ ಅಳವಡಿಸಲು ಆಯ್ಕೆ ಮಾಡಿದೆ. ಇದಕ್ಕೆ ತಾಂತ್ರಿಕ ಮತ್ತು ಹಣಕಾಸು ಸೌಲಭ್ಯಕ್ಕಾಗಿ 11.08 ಕೋಟಿ ನಿಗದಿ ಮಾಡಿದೆ. ಇದರಿಂದ ಬಂದರಿನಲ್ಲಿ ಭದ್ರತೆ ಹೆಚ್ಚಲಿದೆ. ಈ ಆರ್ಥಿಕ ವರ್ಷದಲ್ಲಿ ಇದರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಕೇಂದ್ರ ಸರ್ಕಾರವು ನಮ್ಮ ಬಂದರಿಗೆ ತೈಲ ಮಾಲಿನ್ಯ ನಿಯಂತ್ರಣದ ಪರಿಕರಗಳನ್ನೂ ನೀಡಲಿದೆ. ಇದಕ್ಕಾಗಿ 1.25 ಕೋಟಿ ನೀಡಿದೆ. ಇದರೊಂದಿಗೆ ರಾಜ್ಯ ಸರ್ಕಾರವೂ 2.5 ಕೋಟಿ ಮೊತ್ತದ ಪರಿಕರಗಳನ್ನು ನೀಡಿದೆ. ಅಲ್ಲದೇ ರಾಜ್ಯ ಸರ್ಕಾರವು ಬಂದರಿಗೆ ಖಾಸಗಿ ಸಶಸ್ತ್ರ ಭದ್ರತಾ ಸಿಬ್ಬಂದಿ ನಿಯೋಜನೆ ಅನುಮತಿ ನೀಡಿದೆ. ಅವರ ವೇತನಕ್ಕಾಗಿ ವರ್ಷಕ್ಕೆ 60 ಲಕ್ಷ ನಿಗದಿ ಮಾಡಿದೆ ಎಂದರು.
ಬಂದರು ಬಳಕೆದಾರರಿಗೆ ರಾತ್ರಿ ಮಾರ್ಗದರ್ಶನ ಮೂಲಭೂತ ಸೌಲಭ್ಯಗಳನ್ನು ಸುಮಾರು 1 ಕೋಟಿ ವೆಚ್ಚದಲ್ಲಿ ತರಲು ಅನುಮತಿ ಸಿಕ್ಕಿದೆ. ಇದರ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದೆ. ಸುಮಾರು 20 ಕೋಟಿ ವೆಚ್ಚದಲ್ಲಿ ಅಗ್ನಿ ಶಾಮಕ ಪರಿಕರಗಳನ್ನು ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ಕಾರವಾರ ಮತ್ತು ಬೇಲೇಕೇರಿ ಬಂದರುಗಳಲ್ಲಿ ಹೆಚ್ಚು ದೂರದವರೆಗೆ ದೃಶ್ಯಗಳನ್ನು ಸೆರೆಹಿಡಿಯುವ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದರು.
ಬಂದರು ಅಭಿವೃದ್ಧಿ ಮತ್ತು ಒಳನಾಡು ಜಲಸಾರಿಗೆ ಅಭಿವೃದ್ಧಿ ಸಲುವಾಗಿ ಕರ್ನಾಟಕ ಮೆರಿಟೈಮ್‌ ಬೋರ್ಡ್‌ ಈಚೆಗೆ
ರಚನೆಯಾಗಿದೆ. ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೇಮಕವಾಗಿದ್ದು, ಕಾರವಾರದಲ್ಲಿ ಕಚೇರಿಯಿರಲಿದೆ.
ಇದರಿಂದ ಬಂದರು ಚಟುವಟಿಕೆಗಳಿಗೆ ಸಾಕಷ್ಟು ಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರವಾರ ಬಂದರು ಚಟುವಟಿಕೆ: 7,56,434 ಮೆಟ್ರಿಕ್‌ ಟನ್‌ ಆಮದು ಮಾಡಿಕೊಂಡ ಸರಕಾಗಿದೆ. ರಫ್ತು ಮಾಡಿದ ಸರಕು 1,83,853 ಮೆಟ್ರಿಕ್‌ ಟನ್‌. ಒಟ್ಟು ನಿರ್ವಹಿಸಿದ ಸರಕು 9,40,287 ಮೆಟ್ರಿಕ್‌ ಟನ್‌ಗಳಾಗಿದೆ. 16,69,42,000 ರೂ. ಗಳಿಸಿದ ಆದಾಯ ಎಂದರು.
1919ರಲ್ಲಿ ಮುಂಬೈನಿಂದ ಲಂಡನ್‌ ಗೆ ಸಾಗಿದ ಮೊದಲ ಹಡಗು ಎಸ್‌.ಎಸ್‌. ಲಾಯಲ್ಟಿಯ ನೆನಪಿಗಾಗಿ ಈ ದಿನವನ್ನು
ಆಚರಿಸಲಾಗುತ್ತದೆ ಎಂದು ಕೋಸ್ಟ್‌ ಗಾರ್ಡ್‌ ಕಮಾಂಡಿಂಗ್‌ ಆಫೀಸರ್‌ ಕಮಾಂಡೆಂಟ್‌ ಎ.ಜೆ. ನಂದ ಹೇಳಿದರು. ಅಧಿಕಾರಿ ಕಶ್ಯಪ್‌, ಅಲ್ವಾರೆಸ್‌ ಮತ್ತು ಥಾಮಸ್‌ ಸಂಸ್ಥೆಯ ವ್ಯವಸ್ಥಾಪಕ ಪಾಲುದಾರರಾದ ಹೆಲೆನ್‌ ಅಲ್ವಾರೆಸ್‌ ಭಾಗವಹಿಸಿದ್ದರು. ಬಂದರು ಅಧಿಕಾರಿ ಕ್ಯಾ.ಅರುಣ್‌ ಗಾಂವ್ಕರ್‌ ಸ್ವಾಗತಿಸಿದರು. ಸುರೇಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.