ಮ್ಯಾನ್‌ಹೋಲ್‌ನಿಂದ ಉಕ್ಕಿಬರುವ ತ್ಯಾಜ್ಯದ ನೀರು

ನಲ್ಕೆಮಾರ್‌ ಕರ್ನಾಟಕ ಗೃಹ ಮಂಡಳಿ ಬಡಾವಣೆಗೆ ಸಾಂಕ್ರಾಮಿಕ ರೋಗಭೀತಿ!

Team Udayavani, Apr 8, 2019, 3:55 PM IST

0504btrbph9
 ಬಂಟ್ವಾಳ : ಬಿ.ಸಿ. ರೋಡ್‌ ನಗರ ಕೇಂದ್ರದಿಂದ ಮೂರು ಕಿ.ಮೀ. ಸನಿಹದ ನಲ್ಕೆಮಾರ್‌ ಕರ್ನಾಟಕ ಗೃಹ ಮಂಡಳಿ ಬಡಾವಣೆಗೆ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.
ಬಡಾವಣೆಗೆ ಅಳವಡಿಸಿದ ಮ್ಯಾನ್‌ಹೋಲ್‌ನಿಂದ ಉಕ್ಕಿಬರುವ ತ್ಯಾಜ್ಯ ನೀರು ರೋಗ ಭೀತಿಗೆ ಕಾರಣವಾಗಿದೆ. ಅಸಹ್ಯ ದುರ್ವಾಸನೆ, ಸೊಳ್ಳೆಗಳು, ತ್ಯಾಜ್ಯ ನೀರು ಮಳೆಗಾಲದಲ್ಲಿ ಸಾರ್ವಜನಿಕ ಜನವಸತಿ ಪ್ರದೇಶ,  ಜಲಮೂಲಗಳನ್ನು ಸೇರಿ ಕುಡಿಯುವ ನೀರೂ ಕಲುಷಿತಗೊಂಡು ಆರೋಗ್ಯ ಸಮಸ್ಯೆಗೆ ಕಾರಣವಾಗುವ ಗಂಭೀರ ಅಪಾಯವಿದೆ.
ಪ್ರಾಥಮಿಕ ಶಾಲೆ, ಸರಕಾರಿ ಅಂಗನವಾಡಿ ಕೇಂದ್ರ ಬಳಿಯೇ ಇರುವುದರಿಂದ ಮಕ್ಕಳಿಗೂ ಇದರ ಪರಿಣಾಮ ಬೀಳುವ ಸಾಧ್ಯತೆಯಿದೆ. ಶಾಲಾ ಮಕ್ಕಳು ಈ ದಾರಿಯನ್ನು ಬಳಸುವುದರಿಂದ ಮಕ್ಕಳಿಗೂ ಇದರಿಂದ ತೊಂದರೆ ಎದುರಾಗುವ ಸಂಭವ ಇದೆ.
ಬಡಾವಣೆಯನ್ನು ಗ್ರಾ.ಪಂ.ಗೆ ಹಸ್ತಾಂತರಿಸಲಾಗಿದೆ. ಅದರ ನಿರ್ವಹಣೆ ಪಂಚಾಯತ್‌ ಹೊಣೆಗಾರಿಕೆ ಎಂದು ಗೃಹ ಮಂಡಳಿ ಹೇಳುತ್ತಿದೆ. ಈ ಬಡಾವಣೆಯಲ್ಲಿ ಮೆಸ್ಕಾಂ ಇಲಾಖೆಯಿದ್ದು, ಮೆಸ್ಕಾಂ ತನ್ನ ಸ್ವಂತ ವೆಚ್ಚದಲ್ಲಿ ಎರಡು ಬಾರಿ ಮ್ಯಾನ್‌ಹೋಲ್‌ಗ‌ಳನ್ನು ಸ್ವತ್ಛ ಮಾಡಿದೆ. ಆದರೆ ಎರಡೇ ದಿನಗಳಲ್ಲಿ ಮತ್ತೆ ತ್ಯಾಜ್ಯ ರಸ್ತೆಯಲ್ಲಿ ಹರಿಯತೊಡಗಿದೆ.
ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಬಡಾವಣೆಯಾಗಲೀ ಪಂಚಾಯತ್‌ ಆಗಲೀ  ಗಮನ ಹರಿಸುವುದಿಲ್ಲ.  ಸಮಸ್ಯೆ ಪರಿಹರಿಸಲು ಸ್ಥಳೀಯ ಆಡಳಿತ ಗಮನ ಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
   ಗಬ್ಬು ವಾಸನೆ
ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗಲೂ ಆಗುತ್ತಿಲ್ಲ. ಗಬ್ಬು ವಾಸನೆ. ಶಾಲಾ ಮಕ್ಕಳು ಓಡಾಡುವ ಪ್ರದೇಶದಲ್ಲಿ ಕೂಡಲೇ ಇದನ್ನು ಸರಿಮಾಡಬೇಕಾಗಿತ್ತು. ಆದರೆ ಯಾರೂ ಇತ್ತ ಕಡೆ ಬರುವುದಿಲ್ಲ.  ಆದಷ್ಟು ಬೇಗ ಪೈಪ್‌ಲೈನ್‌ ಸ್ವಲ್ಪ ದೊಡ್ಡದು ಮಾಡಿ ನೀರು ಹರಿಯುವಂತೆ ಮಾಡಿದರೆ ಎಲ್ಲರಿಗೂ ಒಳ್ಳೆಯದು.
 -ಚೆನ್ನಪ್ಪ ನಲ್ಕೆಮಾರ್‌, ಸ್ಥಳೀಯರು
 ಹಸ್ತಾಂತರ ಆಗಿಲ್ಲ
ನಲ್ಕೆಮಾರ್‌ ಗೃಹ ಮಂಡಳಿ ಬಡಾವಣೆಯಲ್ಲಿ 13 ಕಟ್ಟಡಗಳಿದ್ದು, 3ಕ್ಕೆ ಮಾತ್ರ ಡೋರ್‌ ನಂಬ್ರ ಪಡೆಯಲಾಗಿದೆ.  ಇತರ ಕಟ್ಟಡಗಳು ಅನಧಿಕೃತವಾಗಿ ನಿರ್ವಹಿಸಲ್ಪಡುತ್ತದೆ. ನಿಯಮಾನುಸಾರ ಗ್ರಾ.ಪಂ.ಗೆ ಹಸ್ತಾಂತರ ಆಗಿಲ್ಲ. ನಿರ್ವಹಣೆ ಕುರಿತು ಪಾರ್ಟ್‌ಬೈ ಪಾರ್ಟ್‌ ಹಸ್ತಾಂತರ ಹೊರತು ಪೂರ್ಣ ನಡೆದಿಲ್ಲ.  ಬಡಾವಣೆ ನಿರ್ಮಾಣದ ಸಂದರ್ಭ ಮಂಡಳಿ ಯೋಜನಾಬದ್ಧವಾಗಿ ಒಳಚರಂಡಿ ಕಾಮಗಾರಿಯನ್ನು ನಿರ್ವಹಿಸಿಲ್ಲ. ಸಣ್ಣ ಗಾತ್ರದ ಕೊಳವೆಗಳನ್ನು ಅಳವಡಿಸಲಾಗಿರುವುದರಿಂದ ಈ ಸಮಸ್ಯೆ ಉದ್ಭವಿಸಿದೆ. ಆದರೂ ನಾನು ಮತ್ತು ಪಿಡಿಒ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದೇವೆ. ಪತ್ರವನ್ನು ಬರೆದು ಕಾನೂನು ಕ್ರಮ ಅನುಸರಿಸಲು ಸೂಚಿಸಿದೆ.
 -ಹರೀಶ್‌ ಪಡು, ಅಧ್ಯಕ್ಷರು, ಅಮಾಡಿ ಗ್ರಾ.ಪಂ.
 ಲಿಖೀತ ದೂರು ಇಲ್ಲ
ಸ್ಥಳೀಯರಿಂದ  ಪತ್ರ ಮುಖೇನ ದೂರು ಬಂದಿಲ್ಲ.  ಸಮಸ್ಯೆ ಎಲ್ಲರಿಗೂ ತಿಳಿದಿರುತ್ತದೆ. ಬಡಾವಣೆ ನಿರ್ಮಾಣ ಮಾಡಿದ ಸಂದರ್ಭದಲ್ಲಿ ಚಿಕ್ಕ ಗಾತ್ರದ ಕೊಳವೆ ಅಳವಡಿಸಿರುವುದು ಸಮಸ್ಯೆಗೆ ಕಾರಣವಾಗಿದೆ. ಬಡಾವಣೆ ಪಂ.ಗೆ ಸಂಪೂರ್ಣ ಹಸ್ತಾಂತರವಾಗಲಿಲ್ಲ. ಮುಂದಿನ ದಿನಗಳಲ್ಲಿ ಕೂಡಲೇ ಸಮಸ್ಯೆಗೆ ಪರಿಹಾರ ಕ್ರಮದ ಬಗ್ಗೆ ಚರ್ಚಿಸಲಾಗುವುದು.
 -ಯೋಗೀಶ್‌, ಸ್ಥಳೀಯ ಸದಸ್ಯರು, ಅಮಾಡಿ ಪಂಚಾಯತ್‌

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.