ಗಿರಿಯಾಪುರ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರ

„ಗ್ರಾಮವನ್ನು ಅಜ್ಜಂಪುರ ತಾಲೂಕಿಗೆ ಸೇರ್ಪಡೆ ಮಾಡಿದ್ದಕ್ಕೆ ಆಕ್ರೋಶ

Team Udayavani, Apr 8, 2019, 5:24 PM IST

Udayavani Kannada Newspaper

ಕಡೂರು: ಅಜ್ಜಂಪುರ ತಾಲೂಕು ಕೇಂದ್ರಕ್ಕೆ ತಮ್ಮ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿ ಸಿ ಗಿರಿಯಾಪುರ ಗ್ರಾಮಸ್ಥರು ಲೋಕಸಭೆ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಭಾನುವಾರ ಶ್ರೀ
ವೃಷಭೇಂದ್ರಸ್ವಾಮಿ ಗ್ರಾಮ ಸಮಿತಿ ಅಧ್ಯಕ್ಷ ಜಿ.ಸಿ. ಬಸವರಾಜು ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ್ದ ಗ್ರಾಮಸ್ಥರು, ಸಮಸ್ಯೆ ಇತ್ಯರ್ಥವಾಗುವವರೆಗೆ ಹೋರಾಟ ಮುಂದುವರೆಸಲಾಗುವುದು.

ಚುನಾವಣಾ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ನಿರ್ಣಯ ಕೈಗೊಂಡರು. ಸಮಿತಿ ಅಧ್ಯಕ್ಷ ಜಿ.ಸಿ. ಬಸವರಾಜು ಮಾತನಾಡಿ, ಅಜ್ಜಂಪುರ ತಾಲೂಕು ಕೇಂದ್ರ ರಚನೆಯಾದಾಗ ಹಿರೇನಲ್ಲೂರು ನಾಡಕಚೇರಿ ವ್ಯಾಪ್ತಿಗೆ ಸೇರಿದ್ದ
ಗಿರಿಯಾಪುರ ಗ್ರಾಮವನ್ನು ಅಜ್ಜಂಪುರ ತಾಲೂಕಿಗೆ ಸೇರ್ಪಡೆ ಮಾಡಿದ್ದರಿಂದ ಕೇವಲ 1 ಕಿ.ಮೀ ದೂರ ಕ್ರಮಿಸಿ ಕಚೇರಿ ಕೆಲಸ ಮಾಡಿಕೊಳ್ಳುತ್ತಿದ್ದ ಜನರು 10 ಕಿ.ಮೀ ದೂರ ಹೋಗಬೇಕಾಗಿದೆ ಎಂದರು.

ಗಿರಿಯಾಪುರ ಗ್ರಾಮದ ಜನರ ಶೇ.70 ಭಾಗ ಕೃಷಿ ಭೂಮಿ ಹಿರೇನಲ್ಲೂರು, ಕೇದಿಗೆರೆ, ಎಂ. ಚೋಮನಹಳ್ಳಿ, ಮೇಲನಹಲ್ಳಿ,
ಆಡಿಗೆರೆ ಬಾಸೂರು, ಅರೇಹಳ್ಳಿ ಗ್ರಾಮಗಳಲ್ಲಿ ಹರಡಿಕೊಂಡಿದೆ. ಜಮೀನು ಪ್ರದೇಶವೆಲ್ಲಾ ಕಡೂರು ತಾಲೂಕಿಗೆ ಸೇರಿದ್ದರೆ, ಕಚೇರಿ ಕೆಲಸಕ್ಕಷ್ಟೇ ಅಜ್ಜಂಪುರಕ್ಕೆ ತೆರಳಬೇಕಾಗಿದೆ ಎಂದರು.

ಈ ಬದಲಾವಣೆಯಿಂದಾಗಿ ಗ್ರಾಮದ 876 ಮತದಾರರು ಹಾಗೂ ಒಟ್ಟಾರೆ 1200 ಜನರ ಆಧಾರ್‌ ಕಾರ್ಡ್‌, ಪಾನ್‌ಕಾರ್ಡ್‌, ಮತದಾರರ ಗುರುತಿನ ಚೀಟಿ, ಪಡಿತರಚೀಟಿ ಮತ್ತಿತರ ಸರಕಾರಿ ದಾಖಲೆಗಳನ್ನು ಬದಲಿಸಿಕೊಳ್ಳಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡರು.

ಪಶು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಕೃಷಿ ಇಲಾಖೆ, ವಿದ್ಯುತ್‌, ಬ್ಯಾಂಕುಗಳು ಮುಂತಾದ ಪ್ರತಿಯೊಂದು ಸೌಲಭ್ಯಕ್ಕೂ ಅಜ್ಜಂಪುರ
ತಾಲೂಕು ಕೇಂದ್ರವನ್ನು ನೋಡಬೇಕಾದ ಪರಿಸ್ಥಿತಿ ಉದ್ಭವವಾಗಿದೆ. ಬಹಳಷ್ಟು ಕಂದಾಯ ಇಲಾಖೆಗೆ ಸೇರಿದ ವ್ಯಾಜ್ಯಗಳು ಈಗಲೂ ಕಡೂರು ನ್ಯಾಯಾಲಯದಲ್ಲಿ ಇವೆ ಎಂದು ಹೇಳಿದರು.

ಗಿರಿಯಾಪುರ ಮತ್ತು ಹಿರೇನಲ್ಲೂರು ಅವಳಿ ಗ್ರಾಮಗಳಾಗಿದ್ದು, ಕೇವಲ 1 ಕಿ.ಮೀ ದೂರದಲ್ಲಿದ್ದು, ಪ್ರತಿಯೊಂದಕ್ಕೂ ಹಿರೇನಲ್ಲೂರು ಗ್ರಾಮದ ಜತೆ ತಮ್ಮ ಸಂಪರ್ಕ ಹೊಂದಿದ್ದ
ಗಿರಿಯಾಪುರದ ಜನರನ್ನು ಏಕಾಏಕಿ ತಾಲೂಕು ಕೇಂದ್ರ ರಚನೆ ನೆಪದಲ್ಲಿ ಒಕ್ಕಲೆಬ್ಬಿಸಿ ಅವರ ಹಕ್ಕನ್ನು ಮೊಟಕು ಮಾಡಲಾಗಿದೆ ಎಂದರು.

ಈ ಬಗ್ಗೆ ಈ ಹಿಂದಿನ ಶಾಸಕರು, ಮುಖ್ಯಮಂತ್ರಿಗಳು, ಸರಕಾರದ ಸಂಬಂಧಪಟ್ಟ ಸಚಿವರು ಹಾಗೂ ಅಧಿ ಕಾರಿಗಳು ಸೇರಿದಂತೆ
ಎಲ್ಲರಿಗೂ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಹಿಂದಿನ ಜಿಲ್ಲಾ ಧಿಕಾರಿಗಳೂ ಕೂಡ ಈ ಬಗ್ಗೆ ಯಾವ ಸ್ಪಂದನೆಯನ್ನೂ ಮಾಡಿಲ್ಲ ಎಂದು ದೂರಿದರು.

ಯುವಜನಕೂಟದ ಅಧ್ಯಕ್ಷ ಶಿವಲಿಂಗಸ್ವಾಮಿ, ಅರುಣಕುಮಾರ್‌, ಗುರುಕೃಪಾ ಪ್ರೌಢಶಾಲೆಯ ಕಾರ್ಯದರ್ಶಿ ಮಹೇಶ್‌, ಗ್ರಾಮದ ಹಿರಿಯ ಮುಖಂಡ ಜಿ.ಪಿ.ಪ್ರಭುಕುಮಾರ್‌ ಗ್ರಾಪಂ ಮಾಜಿ ಸದಸ್ಯ ಉಮಾಮಹೇಶ್‌ ಸೇರಿದಂತೆ ಹಲವಾರು ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.