ಒಬ್ಬೊಬ್ಬರಿಗೆ ಒಂದೊಂದು ಚಿಂತೆ
ಗಾಸಿಪ್
Team Udayavani, Apr 9, 2019, 3:00 AM IST
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ನಡುವೆ, ಬಿಜೆಪಿಯಿಂದ ಸ್ಪರ್ಧಿಸಿರುವ ಹಾಲಿ ಸಂಸದರು, ಹೊಸ ಅಭ್ಯರ್ಥಿಗಳು ಗೆದ್ದು ಸಂಸತ್ತಿನಲ್ಲಿ ಕೂರುವ ಕನಸಿನೊಂದಿಗೆ ಪ್ರಚಾರದಲ್ಲಿ ತೊಡಗಿದ್ದಾರೆ.
ಇನ್ನು ಕೆಲ ಬಿಜೆಪಿ ರಾಜ್ಯ ನಾಯಕರು, ಹಿರಿಯ ಶಾಸಕರು, ಮಾಜಿ ಸಚಿವರು ಲೋಕಸಭಾ ಚುನಾವಣೆಯ ಬಳಿಕ ಮೈತ್ರಿ ಸರ್ಕಾರ ಪತನವಾದರೆ ಸಚಿವ ಗಾದಿ ಸಿಗುವ ಕನವರಿಕೆಯಲ್ಲಿದ್ದಾರಂತೆ.
ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಆಯ್ದ ಪದಾಧಿಕಾರಿ ಹುದ್ದೆಗಳು ಬದಲಾವಣೆಯಾಗುವ ಮಾತು ಕೇಳಿ ಬಂದಿದ್ದು, ಖಾಲಿಯಾಗದ ಹುದ್ದೆಗಳ ಮೇಲೆ ಈಗಿನಿಂದಲೇ ಕೆಲವರು ಕರ್ಚಿಫ್, ಟವೆಲ್ ಹಾಕಲಾರಂಭಿಸಿದ್ದಾರಂತೆ.
ಇನ್ನು ರಾಜ್ಯ ಬಿಜೆಪಿ ಘಟಕ ಸೇರಿದಂತೆ ನಾನಾ ಹಂತದ ಪದಾಧಿಕಾರಿಗಳ ಬದಲಾವಣೆಯೂ ನಡೆಯಲಿದ್ದು, ಆಯಕಟ್ಟಿನ ಸ್ಥಾನಗಳ ಮೇಲೆ ಕಣ್ಣಿಟ್ಟಿರುವವರು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವುದನ್ನೇ ಕಾಯುತ್ತಾ ಕುಳಿತಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಿರುವ ಸಚಿವರು, ಶಾಸಕರು ಗೆದ್ದರೆ ತೆರವಾಗುವ ವಿಧಾನಸಭಾ ಕ್ಷೇತ್ರಗಳಿಂದ ಕಣಕ್ಕಿಳಿಯುವ ಲೆಕ್ಕಾಚಾರದಲ್ಲಿರಂತೆ. ರಾಜಕೀಯ ನಾಯಕರಿಗೆ ಫಲಿತಾಂಶದ ಚಿಂತೆಯಾದರೆ, ಅಧಿಕಾರ ಇಲ್ಲದವರಿಗೆ ಸ್ಥಾನಮಾನದ ಚಿಂತೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ